AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Top News: ಕೊರೊನಾ ರೋಗಿಗಳ ಪಾಲಿಗೆ ಸಂಜೀವಿನಿಯಾಗುತ್ತಾ ಕೋವ್ಯಾಕ್ಸಿನ್?

ಕೊರೊನಾ ಮಹಾಮಾರಿಗೆ ಕೊನೆಗೂ ಸಿಕ್ತಾ ಔಷಧಿ ಅನ್ನೋ ಆಶಾಭಾವನೆ ಮೂಡಿದೆ. ಯಾಕಂದ್ರೆ, ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಅಭಿವೃದ್ಧಿಪಡಿಸಿದೆ. ಕೊರೊನಾ ಸೋಂಕಿತರಿಗೆ ಕೋವ್ಯಾಕ್ಸಿನ್ ಸಂಜೀವಿನಿಯಾಗುತ್ತಾ ಆಗುವ ಆಸೆ ಮೂಡಿದೆ. ಮನುಷ್ಯರ ಮೇಲೆ ಕೋವ್ಯಾಕ್ಸಿನ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಣ ನಿರ್ದೇಶನಾಲಯದಿಂದ ಒಪ್ಪಿಗೆ ನೀಡಿದ್ದು, ಜುಲೈ ತಿಂಗಳಲ್ಲಿ ದೇಶಾದ್ಯಂತ ಕೋವ್ಯಾಕ್ಸಿನ್ ಪ್ರಯೋಗ ನಡೆಯಲಿದೆ. ಕೊರೊನಾ ಕಂಟಕ ಭಾರತದಲ್ಲಿ ಕೊರೊನಾ ವೈರಸ್​ ತನ್ನ ಕಬಂಧ ಬಾಹುಗಳನ್ನ ಚಾಚುತ್ತಲೇ ಇದ್ದು, ಸೋಂಕಿತರ ಸಂಖ್ಯೆ 5 ಲಕ್ಷ 67 ಸಾವಿರದ 536ಕ್ಕೆ ಏರಿಕೆಯಾಗಿದೆ. ದೇಶದಲ್ಲಿ […]

Top News: ಕೊರೊನಾ ರೋಗಿಗಳ ಪಾಲಿಗೆ ಸಂಜೀವಿನಿಯಾಗುತ್ತಾ ಕೋವ್ಯಾಕ್ಸಿನ್?
ಸಾಧು ಶ್ರೀನಾಥ್​
|

Updated on:Jun 30, 2020 | 5:10 PM

Share

ಕೊರೊನಾ ಮಹಾಮಾರಿಗೆ ಕೊನೆಗೂ ಸಿಕ್ತಾ ಔಷಧಿ ಅನ್ನೋ ಆಶಾಭಾವನೆ ಮೂಡಿದೆ. ಯಾಕಂದ್ರೆ, ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಅಭಿವೃದ್ಧಿಪಡಿಸಿದೆ. ಕೊರೊನಾ ಸೋಂಕಿತರಿಗೆ ಕೋವ್ಯಾಕ್ಸಿನ್ ಸಂಜೀವಿನಿಯಾಗುತ್ತಾ ಆಗುವ ಆಸೆ ಮೂಡಿದೆ. ಮನುಷ್ಯರ ಮೇಲೆ ಕೋವ್ಯಾಕ್ಸಿನ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಣ ನಿರ್ದೇಶನಾಲಯದಿಂದ ಒಪ್ಪಿಗೆ ನೀಡಿದ್ದು, ಜುಲೈ ತಿಂಗಳಲ್ಲಿ ದೇಶಾದ್ಯಂತ ಕೋವ್ಯಾಕ್ಸಿನ್ ಪ್ರಯೋಗ ನಡೆಯಲಿದೆ.

ಕೊರೊನಾ ಕಂಟಕ ಭಾರತದಲ್ಲಿ ಕೊರೊನಾ ವೈರಸ್​ ತನ್ನ ಕಬಂಧ ಬಾಹುಗಳನ್ನ ಚಾಚುತ್ತಲೇ ಇದ್ದು, ಸೋಂಕಿತರ ಸಂಖ್ಯೆ 5 ಲಕ್ಷ 67 ಸಾವಿರದ 536ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾಗೆ 16 ಸಾವಿರದ 904 ಜನರು ಬಲಿಯಾಗಿದ್ದು, 3 ಲಕ್ಷ 35 ಸಾವಿರದ 723 ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ 2 ಲಕ್ಷ 15 ಸಾವಿರದ 361 ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಮಹಿಳಾ ದೌರ್ಜನ್ಯ ಇಳಿಕೆ ಕೊರೊನಾ ವೈರಸ್ ಬಂದಾಗಿನಿಂದ ಮಹಿಳೆಯರ ಮೇಲೆ ನಡೆಯುತ್ತಿದ್ದ ದೌರ್ಜನ್ಯದ ಪ್ರಮಾಣ ಇಳಿಕೆಯಾಗಿದೆಯಂತೆ. ದೆಹಲಿ ಮಹಿಳಾ ಆಯೋಗದ ಪ್ರಕಾರ, ಲಾಕ್​ಡೌನ್ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸಾಚಾರ, ಅಪರಾಧ ಪ್ರಕರಣಗಳು ಕಡಿಮೆಯಾಗಿವೆ. ಮಹಿಳಾ ಆಯೋಗಕ್ಕೆ ಬರುವ ದೂರುಗಳ ಸಂಖ್ಯೆಯೂ ಕಡಿಮೆಯಾಗಿದೆ. ಕೇವಲ ಆಹಾರ ಮತ್ತು ಅಂತಾರಾಜ್ಯ ಮಹಿಳೆಯರು ಸಂಕಷ್ಟಕ್ಕೆ ಸಿಲುಕಿದ ಬಗ್ಗೆಯಷ್ಟೇ ದೂರುಗಳು ಬಂದಿವೆ ಅಂತಾ ಹೇಳಿದೆ.

ಸೋಂಕಿತರು ರಕ್ತದಾನ ಮಾಡಬಹುದು..! ಕೊರೊನಾ ವೈರಸ್ ಬಂದ್ರೆ ಸಾಕು ಆ ವ್ಯಕ್ತಿಯಿಂದ ಮಾರು ದೂರು ಓಡಿ ಹೋಗುವವರೇ ಹೆಚ್ಚು. ಅದ್ರಲ್ಲೂ, ಸೋಂಕಿತ ಆಸ್ಪತ್ರೆಯಲ್ಲಿದ್ರೆ ಆತನನ್ನ ಸ್ಪರ್ಶಿಸಲು ಜನ ಹಿಂದೇಟ ಹಾಕ್ತಾರೆ. ಇನ್ನು ಸೋಂಕಿತನಿಂದ ರಕ್ತದಾನ ಮಾಡಬಹುದಾ ಅಂತಾ ಅಚ್ಚರಿ ಪಡಬೇಡಿ. ರಾಷ್ಟ್ರೀಯ ರಕ್ತದಾನ ವರ್ಗಾವಣೆ ಸಮಿತಿ NBTC ಪ್ರಕಾರ, ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾದ 28 ದಿನಗಳ ಬಳಿಕ ರಕ್ತದಾನ ಮಾಡಬಹುದಾಗಿದೆ ಅಂತಾ ಹೇಳಿದೆ.

ದೆಹಲಿಯಲ್ಲಿ ಟ್ರಾಫಿಕ್ ಜಾಮ್ ಕೊರೊನಾ ಸೋಂಕಿನಿಂದಾಗಿ ದೆಹಲಿ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 83 ಸಾವಿರಕ್ಕೆ ಏರಿಕೆಯಾದ್ರೆ, ಮೃತಪಟ್ಟವರ ಸಂಖ್ಯೆ 7,429ಕ್ಕೆ ಏರಿಕೆಯಾಗಿದೆ. ಹೀಗಾಗಿ, ಅನಗತ್ಯವಾಗಿ ಓಡಾಡುವವರ ಸಂಖ್ಯೆ ಹೆಚ್ಚಾಗಿದ್ದು, ಪೊಲೀಸರು ತಪಾಸಣೆ ಹೆಚ್ಚಿಸಿದ್ದಾರೆ. ಇದ್ರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ದೆಹಲಿಯ ಪಶ್ಚಿಮ ಎಕ್ಸ್​ಪ್ರೆಸ್​ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

53 BSF ಸಿಬ್ಬಂದಿಗೆ ಸೋಂಕು ಕ್ರೂರಿ ಕೊರೊನಾ ವೈರಸ್ ತಡೆಗೆ ಪ್ರಾಣದ ಹಂಗು ತೊರೆದು ಕೊರೊನಾ ವಾರಿಯರ್ಸ್ ಅಖಾಡದಲ್ಲಿದ್ದಾರೆ. ಆದ್ರೆ, ಇವರಿಗೂ ವೈರಸ್ ಅಟ್ಯಾಕ್ ಮಾಡ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲೇ 53 ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಪ್ರಸ್ತುತ 305 ಗಡಿ ಭದ್ರತಾ ಸಿಬ್ಬಂದಿ ಸೋಂಕಿನಿಂದ ನರಳಾಡುತ್ತಿದ್ದಾರೆ. ಕೇವಲ ನಾಲ್ವರು ಸಿಬ್ಬಂದಿ ಮಾತ್ರ ಸೋಂಕಿನಿಂದ ಗುಣಮುಖರಾಗಿದ್ದಾರೆ.

Published On - 5:04 pm, Tue, 30 June 20

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?