AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದಲ್ಲಿ ನಿರ್ಮಾಣವಾಯ್ತು ಭಾರತದ ಮೊದಲ ಅಕ್ಕಿ ಎಟಿಎಂ

ಎಟಿಎಂನಿಂದ ಹಣ ತೆಗೆಯುವುದನ್ನು ನೀವು ನೋಡಿರುತ್ತೀರಿ, ಇನ್ಮುಂದೆ ಎಟಿಎಂನಿಂದ ಅಕ್ಕಿಯೂ ಬರುತ್ತೆ. ಒಡಿಶಾದಲ್ಲಿ ದೇಶದ ಮೊದಲ ಅಕ್ಕಿ ಎಟಿಎಂಗೆ ಚಾಲನೆ ದೊರೆತಿದೆ. ಇದನ್ನು ಪಡಿತರ ಚೀಟಿ ಫಲಾನುಭವಿಗಳಿಗಾಗಿ ಸಿದ್ಧಪಡಿಸಲಾಗಿದೆ.

ಒಡಿಶಾದಲ್ಲಿ ನಿರ್ಮಾಣವಾಯ್ತು ಭಾರತದ ಮೊದಲ ಅಕ್ಕಿ ಎಟಿಎಂ
ಅಕ್ಕಿ ಎಟಿಎಂ
Follow us
ನಯನಾ ರಾಜೀವ್
|

Updated on:Aug 09, 2024 | 10:02 AM

ಭಾರತದ ಮೊದಲ ಅಕ್ಕಿ ಎಟಿಎಂಗೆ  ಒಡಿಶಾ ಆಹಾರ ಸರಬರಾಜು ಮತ್ತು ಗ್ರಾಹಕರ ಕಲ್ಯಾಣ ಸಚಿವ ಕೃಷ್ಣ ಚಂದ್ರ ಪಾತ್ರ ಅವರು ಭುವನೇಶ್ವರದಲ್ಲಿ ಚಾಲನೆ ನೀಡಿದ್ದಾರೆ. ಮಂಚೇಶ್ವರದಲ್ಲಿರುವ ಗೋದಾಮಿನಲ್ಲಿ ಅಳವಡಿಸಲಾಗಿರುವ ಈ ಯಂತ್ರವನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್)ಯಲ್ಲಿ ಅಕ್ಕಿ ವಿತರಣೆಯನ್ನು ಸರಳೀಕರಿಸಲು ವಿನ್ಯಾಸಗೊಳಿಸಲಾಗಿದೆ.

ಅಕ್ಕಿ ಎಟಿಎಂ ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿ ಸಂಖ್ಯೆಯನ್ನು ಟಚ್‌ಸ್ಕ್ರೀನ್​ನಲ್ಲಿ ನಮೂದಿಸಿದಾಗ 25ಕೆಜಿವರೆಗೆ ಅಕ್ಕಿಯನ್ನು ವಿತರಿಸಲು ಅನುಮತಿ ಸಿಗಲಿದೆ ನಂತರ ಬಯೋಮೆಟ್ರಿಕ್ ದೃಢೀಕರಣವಿರಲಿದೆ. ಅಕ್ಕಿ ವಿತರಣೆಯ ಈ ಹೊಸ ವ್ಯವಸ್ಥೆಯು ಸಾಂಪ್ರದಾಯಿಕ ವಿತರಣಾ ಕೇಂದ್ರಗಳಲ್ಲಿ ಫಲಾನುಭವಿಗಳು ದೀರ್ಘಕಾಲ ಸರತಿಯಲ್ಲಿ ನಿಂತು ಕಾಯುವ ಅಗತ್ಯವಿರುವುದಿಲ್ಲ.

ಸಬ್ಸಿಡಿ ಅಕ್ಕಿಯ ಕಳ್ಳತನ ಹಾಗೂ ಬ್ಲ್ಯಾಕ್​ ಮಾರ್ಕೆಟ್​ಗೆ ಸಂಬಂಧಿಸಿದ ಸಮಸ್ಯೆಗಳನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆ ಇದೆ. ನಾವು ಫಲಾನುಭವಿಗಳಿಗೆ ಅಕ್ಕಿ ಎಟಿಎಂ ಅನ್ನು ಪರೀಕ್ಷಿಸಿದ್ದೇವೆ. ಇದು ಭಾರತದ ಮೊದಲ ಅಕ್ಕಿ ಎಟಿಎಂ ಆಗಿದ್ದು, ಪ್ರಾಯೋಗಿಕವಾಗಿ ಉದ್ಘಾಟನೆಯಾಗಿದೆ.

ಮತ್ತಷ್ಟು ಓದಿ: Pralhad Joshi: ಕೇಂದ್ರ ಸರ್ಕಾರದ ಉಚಿತ ಪಡಿತರ ಯೋಜನೆ ಮುಂದುವರಿಯಲಿದೆ; ಪ್ರಲ್ಹಾದ್ ಜೋಶಿ ಸ್ಪಷ್ಟನೆ

ಫಲಾನುಭವಿಗಳು ಸರಿಯಾದ ತೂಕದಲ್ಲಿ ಅಕ್ಕಿಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದು ಗುರಿಯಾಗಿದೆ ಇದರಲ್ಲಿ ಯಾವುದೇ ಮೋಸಕ್ಕೂ ಅವಕಾಶವಿರುವುದಿಲ್ಲ.

ಅಕ್ಕಿ ಎಟಿಎಂ ಅನ್ನು ಆರಂಭದಲ್ಲಿ ಭುವನೇಶ್ವರದಲ್ಲಿ ಪರಿಚಯಿಸಲಾಗುವುದು ಮತ್ತು ಅಂತಿಮವಾಗಿ ಒಡಿಶಾದ ಎಲ್ಲಾ 30 ಜಿಲ್ಲೆಗಳಿಗೆ ವಿಸ್ತರಿಸಲಾಗುವುದು. ಈ ಮಾದರಿಯನ್ನು ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯಡಿ ಇತರ ರಾಜ್ಯಗಳಿಗೆ ವಿಸ್ತರಿಸಬಹುದು. ವಿವಿಧ ರಾಜ್ಯಗಳ ಜನರು ಈ ಸ್ವಯಂಚಾಲಿತ ವ್ಯವಸ್ಥೆಯ ಮೂಲಕ ತಮ್ಮ ಪಡಿತರವನ್ನು ಪಡೆಯಲು ಸಾಧ್ಯವಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:02 am, Fri, 9 August 24

ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ