AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದಲ್ಲಿ ನಿರ್ಮಾಣವಾಯ್ತು ಭಾರತದ ಮೊದಲ ಅಕ್ಕಿ ಎಟಿಎಂ

ಎಟಿಎಂನಿಂದ ಹಣ ತೆಗೆಯುವುದನ್ನು ನೀವು ನೋಡಿರುತ್ತೀರಿ, ಇನ್ಮುಂದೆ ಎಟಿಎಂನಿಂದ ಅಕ್ಕಿಯೂ ಬರುತ್ತೆ. ಒಡಿಶಾದಲ್ಲಿ ದೇಶದ ಮೊದಲ ಅಕ್ಕಿ ಎಟಿಎಂಗೆ ಚಾಲನೆ ದೊರೆತಿದೆ. ಇದನ್ನು ಪಡಿತರ ಚೀಟಿ ಫಲಾನುಭವಿಗಳಿಗಾಗಿ ಸಿದ್ಧಪಡಿಸಲಾಗಿದೆ.

ಒಡಿಶಾದಲ್ಲಿ ನಿರ್ಮಾಣವಾಯ್ತು ಭಾರತದ ಮೊದಲ ಅಕ್ಕಿ ಎಟಿಎಂ
ಅಕ್ಕಿ ಎಟಿಎಂ
ನಯನಾ ರಾಜೀವ್
|

Updated on:Aug 09, 2024 | 10:02 AM

Share

ಭಾರತದ ಮೊದಲ ಅಕ್ಕಿ ಎಟಿಎಂಗೆ  ಒಡಿಶಾ ಆಹಾರ ಸರಬರಾಜು ಮತ್ತು ಗ್ರಾಹಕರ ಕಲ್ಯಾಣ ಸಚಿವ ಕೃಷ್ಣ ಚಂದ್ರ ಪಾತ್ರ ಅವರು ಭುವನೇಶ್ವರದಲ್ಲಿ ಚಾಲನೆ ನೀಡಿದ್ದಾರೆ. ಮಂಚೇಶ್ವರದಲ್ಲಿರುವ ಗೋದಾಮಿನಲ್ಲಿ ಅಳವಡಿಸಲಾಗಿರುವ ಈ ಯಂತ್ರವನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್)ಯಲ್ಲಿ ಅಕ್ಕಿ ವಿತರಣೆಯನ್ನು ಸರಳೀಕರಿಸಲು ವಿನ್ಯಾಸಗೊಳಿಸಲಾಗಿದೆ.

ಅಕ್ಕಿ ಎಟಿಎಂ ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿ ಸಂಖ್ಯೆಯನ್ನು ಟಚ್‌ಸ್ಕ್ರೀನ್​ನಲ್ಲಿ ನಮೂದಿಸಿದಾಗ 25ಕೆಜಿವರೆಗೆ ಅಕ್ಕಿಯನ್ನು ವಿತರಿಸಲು ಅನುಮತಿ ಸಿಗಲಿದೆ ನಂತರ ಬಯೋಮೆಟ್ರಿಕ್ ದೃಢೀಕರಣವಿರಲಿದೆ. ಅಕ್ಕಿ ವಿತರಣೆಯ ಈ ಹೊಸ ವ್ಯವಸ್ಥೆಯು ಸಾಂಪ್ರದಾಯಿಕ ವಿತರಣಾ ಕೇಂದ್ರಗಳಲ್ಲಿ ಫಲಾನುಭವಿಗಳು ದೀರ್ಘಕಾಲ ಸರತಿಯಲ್ಲಿ ನಿಂತು ಕಾಯುವ ಅಗತ್ಯವಿರುವುದಿಲ್ಲ.

ಸಬ್ಸಿಡಿ ಅಕ್ಕಿಯ ಕಳ್ಳತನ ಹಾಗೂ ಬ್ಲ್ಯಾಕ್​ ಮಾರ್ಕೆಟ್​ಗೆ ಸಂಬಂಧಿಸಿದ ಸಮಸ್ಯೆಗಳನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆ ಇದೆ. ನಾವು ಫಲಾನುಭವಿಗಳಿಗೆ ಅಕ್ಕಿ ಎಟಿಎಂ ಅನ್ನು ಪರೀಕ್ಷಿಸಿದ್ದೇವೆ. ಇದು ಭಾರತದ ಮೊದಲ ಅಕ್ಕಿ ಎಟಿಎಂ ಆಗಿದ್ದು, ಪ್ರಾಯೋಗಿಕವಾಗಿ ಉದ್ಘಾಟನೆಯಾಗಿದೆ.

ಮತ್ತಷ್ಟು ಓದಿ: Pralhad Joshi: ಕೇಂದ್ರ ಸರ್ಕಾರದ ಉಚಿತ ಪಡಿತರ ಯೋಜನೆ ಮುಂದುವರಿಯಲಿದೆ; ಪ್ರಲ್ಹಾದ್ ಜೋಶಿ ಸ್ಪಷ್ಟನೆ

ಫಲಾನುಭವಿಗಳು ಸರಿಯಾದ ತೂಕದಲ್ಲಿ ಅಕ್ಕಿಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದು ಗುರಿಯಾಗಿದೆ ಇದರಲ್ಲಿ ಯಾವುದೇ ಮೋಸಕ್ಕೂ ಅವಕಾಶವಿರುವುದಿಲ್ಲ.

ಅಕ್ಕಿ ಎಟಿಎಂ ಅನ್ನು ಆರಂಭದಲ್ಲಿ ಭುವನೇಶ್ವರದಲ್ಲಿ ಪರಿಚಯಿಸಲಾಗುವುದು ಮತ್ತು ಅಂತಿಮವಾಗಿ ಒಡಿಶಾದ ಎಲ್ಲಾ 30 ಜಿಲ್ಲೆಗಳಿಗೆ ವಿಸ್ತರಿಸಲಾಗುವುದು. ಈ ಮಾದರಿಯನ್ನು ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯಡಿ ಇತರ ರಾಜ್ಯಗಳಿಗೆ ವಿಸ್ತರಿಸಬಹುದು. ವಿವಿಧ ರಾಜ್ಯಗಳ ಜನರು ಈ ಸ್ವಯಂಚಾಲಿತ ವ್ಯವಸ್ಥೆಯ ಮೂಲಕ ತಮ್ಮ ಪಡಿತರವನ್ನು ಪಡೆಯಲು ಸಾಧ್ಯವಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:02 am, Fri, 9 August 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು