AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತದ ಇಂಧನ ದಾಸ್ತಾನು ಸುಧಾರಿಸಿದ್ದು, ಸದ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹಾರ್ಮುಜ್ ಜಲಸಂಧಿ ಅವಲಂಬನೆ ಕಡಿಮೆ ಮಾಡಿ, ಇಂಧನ ಪೂರೈಕೆಯಲ್ಲಿ ಸ್ಥಿರತೆ ಕಾಪಾಡಲಾಗಿದೆ. ಎಲ್‌ಪಿಜಿ ಬೆಲೆ ಏರಿಕೆ ಕುರಿತ ಆರೋಪಗಳು ಆಧಾರರಹಿತ ಎಂದು ಮೂಲಗಳು ತಿಳಿಸಿವೆ, ಇದು ಗ್ರಾಹಕರಿಗೆ ನೆಮ್ಮದಿ ನೀಡಿದೆ.

ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Mar 07, 2026 | 5:39 PM

Share

ದೆಹಲಿ ಮಾ.7: ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಮತ್ತು ಯುದ್ಧದ ವಾತಾವರಣವಿದ್ದರೂ, ಭಾರತದ ಇಂಧನ ದಾಸ್ತಾನು ಸ್ಥಿತಿ ಸುಧಾರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅಧಿಕೃತ ಮೂಲಗಳು ಪುನರುಚ್ಚರಿಸಿವೆ. ಈ ಬಗ್ಗೆ ಎಎನ್​​​ಐ ಎಕ್ಸ್​​​ನಲ್ಲಿ ಹೇಳಿಕೊಂಡಿದೆ. ಭಾರತದ ಇಂಧನ ಸಂಗ್ರಹಣಾ ಸಾಮರ್ಥ್ಯ ಮತ್ತು ಲಭ್ಯತೆ ಉತ್ತಮಗೊಳ್ಳುತ್ತಿದೆ. ಇದು ಸರ್ಕಾರಕ್ಕೆ ಹೆಚ್ಚಿನ ಆತ್ಮವಿಶ್ವಾಸ ನೀಡಿದ್ದು, ಸದ್ಯಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡುವ ಅನಿವಾರ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದಾಗಿ ‘ಹಾರ್ಮುಜ್ ಜಲಸಂಧಿ’ (Strait of Hormuz) ಮೂಲಕ ನಡೆಯುತ್ತಿದ್ದ ಕಚ್ಚಾ ತೈಲ ಆಮದಿನ ಮೇಲೆ ಭಾರತ ತನ್ನ ಅವಲಂಬನೆಯನ್ನು ಕಡಿಮೆ ಮಾಡಿಕೊಂಡಿದೆ. ಹಾರ್ಮುಜ್ ಜಲಸಂಧಿಯ ಹೊರತಾದ ಇತರ ಮೂಲಗಳಿಂದ ಆಮದು ಮಾಡಿಕೊಳ್ಳುವ ಪ್ರಮಾಣವನ್ನು ಶೇ. 10ರಷ್ಟು ಹೆಚ್ಚಿಸಲಾಗಿದೆ. ಈ ಮೊದಲು ಶೇ. 60ರಷ್ಟಿದ್ದ ಈ ಪ್ರಮಾಣವು ಈಗ ಶೇ. 70ಕ್ಕೆ ಏರಿಕೆಯಾಗಿದೆ. ಇದು ಇಂಧನ ಪೂರೈಕೆಯಲ್ಲಿ ಸ್ಥಿರತೆ ಕಾಪಾಡಲು ಸಹಕಾರಿಯಾಗಿದೆ.

ಇದನ್ನೂ ಓದಿ: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ, ಗ್ರಾಹಕರಿಗೆ ಬಿಗ್ ಶಾಕ್

ಇಲ್ಲಿದೆ ನೋಡಿ ಎಕ್ಸ್​​​ ಪೋಸ್ಟ್​​:

ಎಲ್‌ಪಿಜಿ (LPG) ಬೆಲೆ ಏರಿಕೆಯಾಗಲಿದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಗಳು ಸಂಪೂರ್ಣ ಆಧಾರರಹಿತ ಎಂದು ಸರ್ಕಾರಿ ಮೂಲಗಳು ಹೇಳಿವೆ.ಬೆಲೆ ಸ್ಥಿರತೆಯ ಭರವಸೆಯನ್ನು ಕೇವಲ ಪೆಟ್ರೋಲ್ ಮತ್ತು ಡೀಸೆಲ್ ದರಗಳಿಗೆ ಸಂಬಂಧಿಸಿದಂತೆ ನೀಡಲಾಗಿತ್ತು, ಅದನ್ನು ಎಲ್‌ಪಿಜಿಗೆ ತಳುಕು ಹಾಕುವುದು ತಪ್ಪು. ಇಂದಿಗೂ ನಾವು ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸುವುದಿಲ್ಲ ಎಂದು ಮತ್ತೊಮ್ಮೆ ಭರವಸೆ ನೀಡುತ್ತಿದ್ದೇವೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು