AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತದ ಇಂಧನ ದಾಸ್ತಾನು ಸುಧಾರಿಸಿದ್ದು, ಸದ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹಾರ್ಮುಜ್ ಜಲಸಂಧಿ ಅವಲಂಬನೆ ಕಡಿಮೆ ಮಾಡಿ, ಇಂಧನ ಪೂರೈಕೆಯಲ್ಲಿ ಸ್ಥಿರತೆ ಕಾಪಾಡಲಾಗಿದೆ. ಎಲ್‌ಪಿಜಿ ಬೆಲೆ ಏರಿಕೆ ಕುರಿತ ಆರೋಪಗಳು ಆಧಾರರಹಿತ ಎಂದು ಮೂಲಗಳು ತಿಳಿಸಿವೆ, ಇದು ಗ್ರಾಹಕರಿಗೆ ನೆಮ್ಮದಿ ನೀಡಿದೆ.

ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Mar 07, 2026 | 5:39 PM

Share

ದೆಹಲಿ ಮಾ.7: ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಮತ್ತು ಯುದ್ಧದ ವಾತಾವರಣವಿದ್ದರೂ, ಭಾರತದ ಇಂಧನ ದಾಸ್ತಾನು ಸ್ಥಿತಿ ಸುಧಾರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅಧಿಕೃತ ಮೂಲಗಳು ಪುನರುಚ್ಚರಿಸಿವೆ. ಈ ಬಗ್ಗೆ ಎಎನ್​​​ಐ ಎಕ್ಸ್​​​ನಲ್ಲಿ ಹೇಳಿಕೊಂಡಿದೆ. ಭಾರತದ ಇಂಧನ ಸಂಗ್ರಹಣಾ ಸಾಮರ್ಥ್ಯ ಮತ್ತು ಲಭ್ಯತೆ ಉತ್ತಮಗೊಳ್ಳುತ್ತಿದೆ. ಇದು ಸರ್ಕಾರಕ್ಕೆ ಹೆಚ್ಚಿನ ಆತ್ಮವಿಶ್ವಾಸ ನೀಡಿದ್ದು, ಸದ್ಯಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡುವ ಅನಿವಾರ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದಾಗಿ ‘ಹಾರ್ಮುಜ್ ಜಲಸಂಧಿ’ (Strait of Hormuz) ಮೂಲಕ ನಡೆಯುತ್ತಿದ್ದ ಕಚ್ಚಾ ತೈಲ ಆಮದಿನ ಮೇಲೆ ಭಾರತ ತನ್ನ ಅವಲಂಬನೆಯನ್ನು ಕಡಿಮೆ ಮಾಡಿಕೊಂಡಿದೆ. ಹಾರ್ಮುಜ್ ಜಲಸಂಧಿಯ ಹೊರತಾದ ಇತರ ಮೂಲಗಳಿಂದ ಆಮದು ಮಾಡಿಕೊಳ್ಳುವ ಪ್ರಮಾಣವನ್ನು ಶೇ. 10ರಷ್ಟು ಹೆಚ್ಚಿಸಲಾಗಿದೆ. ಈ ಮೊದಲು ಶೇ. 60ರಷ್ಟಿದ್ದ ಈ ಪ್ರಮಾಣವು ಈಗ ಶೇ. 70ಕ್ಕೆ ಏರಿಕೆಯಾಗಿದೆ. ಇದು ಇಂಧನ ಪೂರೈಕೆಯಲ್ಲಿ ಸ್ಥಿರತೆ ಕಾಪಾಡಲು ಸಹಕಾರಿಯಾಗಿದೆ.

ಇದನ್ನೂ ಓದಿ: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ, ಗ್ರಾಹಕರಿಗೆ ಬಿಗ್ ಶಾಕ್

ಇಲ್ಲಿದೆ ನೋಡಿ ಎಕ್ಸ್​​​ ಪೋಸ್ಟ್​​:

ಎಲ್‌ಪಿಜಿ (LPG) ಬೆಲೆ ಏರಿಕೆಯಾಗಲಿದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಗಳು ಸಂಪೂರ್ಣ ಆಧಾರರಹಿತ ಎಂದು ಸರ್ಕಾರಿ ಮೂಲಗಳು ಹೇಳಿವೆ.ಬೆಲೆ ಸ್ಥಿರತೆಯ ಭರವಸೆಯನ್ನು ಕೇವಲ ಪೆಟ್ರೋಲ್ ಮತ್ತು ಡೀಸೆಲ್ ದರಗಳಿಗೆ ಸಂಬಂಧಿಸಿದಂತೆ ನೀಡಲಾಗಿತ್ತು, ಅದನ್ನು ಎಲ್‌ಪಿಜಿಗೆ ತಳುಕು ಹಾಕುವುದು ತಪ್ಪು. ಇಂದಿಗೂ ನಾವು ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸುವುದಿಲ್ಲ ಎಂದು ಮತ್ತೊಮ್ಮೆ ಭರವಸೆ ನೀಡುತ್ತಿದ್ದೇವೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ