AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಾಣವಾಯ್ತು ದೇಶದ ಅತಿ ಉದ್ದನೆಯ ರೋಪ್​ವೇ

ಡಿಸ್ಪುರ: ಈಶಾನ್ಯ ಭಾರತದ ಅಸ್ಸಾಂ ರಾಜ್ಯದ ಉತ್ತರ ಗುವಾಹಾಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಿದ್ದ ರೋಪ್‌ವೇಯನ್ನು ರಾಜ್ಯದ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ಸೋಮವಾರ ಲೋಕಾರ್ಪಣೆ ಮಾಡಿದರು. ಬ್ರಹ್ಮಪುತ್ರ ನದಿಯ ದಡಗಳನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಕೈಗೊಂಡ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿರುವ ಈ ರೋಪ್​ವೇಯ ಕಾಮಗಾರಿಯನ್ನು 2006 ರಲ್ಲಿ ಪ್ರಾರಂಭಿಸಿ, ಕೆಲಸದ ಬಹುಭಾಗವನ್ನು 2019 ರ ಅಂತ್ಯಕ್ಕೆ ಪೂರ್ಣಗೊಳಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ ಈ ರೋಪ್​ವೇ ಇಡೀ ದೇಶದಲ್ಲಿ ಅತ್ಯಂತ ಉದ್ದವಾದದ್ದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೌದು, […]

ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಾಣವಾಯ್ತು ದೇಶದ ಅತಿ ಉದ್ದನೆಯ ರೋಪ್​ವೇ
ಸಾಧು ಶ್ರೀನಾಥ್​
| Updated By: KUSHAL V|

Updated on: Aug 24, 2020 | 6:57 PM

Share

ಡಿಸ್ಪುರ: ಈಶಾನ್ಯ ಭಾರತದ ಅಸ್ಸಾಂ ರಾಜ್ಯದ ಉತ್ತರ ಗುವಾಹಾಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಿದ್ದ ರೋಪ್‌ವೇಯನ್ನು ರಾಜ್ಯದ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ಸೋಮವಾರ ಲೋಕಾರ್ಪಣೆ ಮಾಡಿದರು. ಬ್ರಹ್ಮಪುತ್ರ ನದಿಯ ದಡಗಳನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಕೈಗೊಂಡ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿರುವ ಈ ರೋಪ್​ವೇಯ ಕಾಮಗಾರಿಯನ್ನು 2006 ರಲ್ಲಿ ಪ್ರಾರಂಭಿಸಿ, ಕೆಲಸದ ಬಹುಭಾಗವನ್ನು 2019 ರ ಅಂತ್ಯಕ್ಕೆ ಪೂರ್ಣಗೊಳಿಸಲಾಗಿದೆ.

ಅಚ್ಚರಿಯ ಸಂಗತಿಯೆಂದರೆ ಈ ರೋಪ್​ವೇ ಇಡೀ ದೇಶದಲ್ಲಿ ಅತ್ಯಂತ ಉದ್ದವಾದದ್ದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೌದು, ಇದು ಸುಮಾರು 2 ಕಿ.ಮೀ ಉದ್ದವಿದ್ದು, ಇದನ್ನು ಬಳಸಿ ಸಾರ್ವಜನಿಕರು ಕೇವಲ ಏಳು ನಿಮಿಷಗಳಲ್ಲಿ ಆಚಿನ ದಡವನ್ನು ತಲುಪಬಹುದಾಗಿದೆ. ಪ್ರತಿ ರೋಪ್​ವೇ ಬೋಗಿ 32 ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಆದರೆ ಈಗ ಕೊರೊನಾ ಸೋಂಕಿನಿಂದಾಗಿ ಕೇವಲ 15 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಪ್ರತಿಯೊಬ್ಬ ಪ್ರಯಾಣಿಕನೂ ಇದರಲ್ಲಿ ಓಡಾಡಲು ರಕ್ಷಣಾ ಸಾಧನ (safety gear) ಧರಿಸಬೇಕಾಗಿದೆ. ಸವಾರಿಯ ಒಂದು ಮಾರ್ಗಕ್ಕೆ 60 ರೂಪಾಯಿ ಮತ್ತು ದ್ವಿಮುಖ ಪ್ರಯಾಣಕ್ಕೆ 100 ರೂಪಾಯಿ ದರ ನಿಗದಿ ಮಾಡಲಾಗಿದೆ. ಜೊತೆಗೆ, ದೈನಂದಿನ, ಸಾಪ್ತಾಹಿಕ ಮತ್ತು ಮಾಸಿಕ ಪಾಸ್‌ಗಳನ್ನು ಸಹ ಪಡೆಯಲು ಅವಕಾಶವಿದೆ.

ರೋಪ್‌ವೇ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸಲಿದ್ದು, ರೋಪ್‌ವೇ ಸೇವೆಯ ಮೇಲ್ವಿಚಾರಣೆಗಾಗಿ 58 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಒಟ್ಟಾರೆ, 56 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸಂಪೂರ್ಣ ಯೋಜನೆಯನ್ನು ನಿರ್ಮಿಸಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ