AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಾಣವಾಯ್ತು ದೇಶದ ಅತಿ ಉದ್ದನೆಯ ರೋಪ್​ವೇ

ಡಿಸ್ಪುರ: ಈಶಾನ್ಯ ಭಾರತದ ಅಸ್ಸಾಂ ರಾಜ್ಯದ ಉತ್ತರ ಗುವಾಹಾಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಿದ್ದ ರೋಪ್‌ವೇಯನ್ನು ರಾಜ್ಯದ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ಸೋಮವಾರ ಲೋಕಾರ್ಪಣೆ ಮಾಡಿದರು. ಬ್ರಹ್ಮಪುತ್ರ ನದಿಯ ದಡಗಳನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಕೈಗೊಂಡ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿರುವ ಈ ರೋಪ್​ವೇಯ ಕಾಮಗಾರಿಯನ್ನು 2006 ರಲ್ಲಿ ಪ್ರಾರಂಭಿಸಿ, ಕೆಲಸದ ಬಹುಭಾಗವನ್ನು 2019 ರ ಅಂತ್ಯಕ್ಕೆ ಪೂರ್ಣಗೊಳಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ ಈ ರೋಪ್​ವೇ ಇಡೀ ದೇಶದಲ್ಲಿ ಅತ್ಯಂತ ಉದ್ದವಾದದ್ದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೌದು, […]

ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಾಣವಾಯ್ತು ದೇಶದ ಅತಿ ಉದ್ದನೆಯ ರೋಪ್​ವೇ
ಸಾಧು ಶ್ರೀನಾಥ್​
| Edited By: |

Updated on: Aug 24, 2020 | 6:57 PM

Share

ಡಿಸ್ಪುರ: ಈಶಾನ್ಯ ಭಾರತದ ಅಸ್ಸಾಂ ರಾಜ್ಯದ ಉತ್ತರ ಗುವಾಹಾಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಿದ್ದ ರೋಪ್‌ವೇಯನ್ನು ರಾಜ್ಯದ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ಸೋಮವಾರ ಲೋಕಾರ್ಪಣೆ ಮಾಡಿದರು. ಬ್ರಹ್ಮಪುತ್ರ ನದಿಯ ದಡಗಳನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಕೈಗೊಂಡ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿರುವ ಈ ರೋಪ್​ವೇಯ ಕಾಮಗಾರಿಯನ್ನು 2006 ರಲ್ಲಿ ಪ್ರಾರಂಭಿಸಿ, ಕೆಲಸದ ಬಹುಭಾಗವನ್ನು 2019 ರ ಅಂತ್ಯಕ್ಕೆ ಪೂರ್ಣಗೊಳಿಸಲಾಗಿದೆ.

ಅಚ್ಚರಿಯ ಸಂಗತಿಯೆಂದರೆ ಈ ರೋಪ್​ವೇ ಇಡೀ ದೇಶದಲ್ಲಿ ಅತ್ಯಂತ ಉದ್ದವಾದದ್ದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೌದು, ಇದು ಸುಮಾರು 2 ಕಿ.ಮೀ ಉದ್ದವಿದ್ದು, ಇದನ್ನು ಬಳಸಿ ಸಾರ್ವಜನಿಕರು ಕೇವಲ ಏಳು ನಿಮಿಷಗಳಲ್ಲಿ ಆಚಿನ ದಡವನ್ನು ತಲುಪಬಹುದಾಗಿದೆ. ಪ್ರತಿ ರೋಪ್​ವೇ ಬೋಗಿ 32 ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಆದರೆ ಈಗ ಕೊರೊನಾ ಸೋಂಕಿನಿಂದಾಗಿ ಕೇವಲ 15 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಪ್ರತಿಯೊಬ್ಬ ಪ್ರಯಾಣಿಕನೂ ಇದರಲ್ಲಿ ಓಡಾಡಲು ರಕ್ಷಣಾ ಸಾಧನ (safety gear) ಧರಿಸಬೇಕಾಗಿದೆ. ಸವಾರಿಯ ಒಂದು ಮಾರ್ಗಕ್ಕೆ 60 ರೂಪಾಯಿ ಮತ್ತು ದ್ವಿಮುಖ ಪ್ರಯಾಣಕ್ಕೆ 100 ರೂಪಾಯಿ ದರ ನಿಗದಿ ಮಾಡಲಾಗಿದೆ. ಜೊತೆಗೆ, ದೈನಂದಿನ, ಸಾಪ್ತಾಹಿಕ ಮತ್ತು ಮಾಸಿಕ ಪಾಸ್‌ಗಳನ್ನು ಸಹ ಪಡೆಯಲು ಅವಕಾಶವಿದೆ.

ರೋಪ್‌ವೇ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸಲಿದ್ದು, ರೋಪ್‌ವೇ ಸೇವೆಯ ಮೇಲ್ವಿಚಾರಣೆಗಾಗಿ 58 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಒಟ್ಟಾರೆ, 56 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸಂಪೂರ್ಣ ಯೋಜನೆಯನ್ನು ನಿರ್ಮಿಸಲಾಗಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!