Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಾಣವಾಯ್ತು ದೇಶದ ಅತಿ ಉದ್ದನೆಯ ರೋಪ್​ವೇ

ಡಿಸ್ಪುರ: ಈಶಾನ್ಯ ಭಾರತದ ಅಸ್ಸಾಂ ರಾಜ್ಯದ ಉತ್ತರ ಗುವಾಹಾಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಿದ್ದ ರೋಪ್‌ವೇಯನ್ನು ರಾಜ್ಯದ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ಸೋಮವಾರ ಲೋಕಾರ್ಪಣೆ ಮಾಡಿದರು. ಬ್ರಹ್ಮಪುತ್ರ ನದಿಯ ದಡಗಳನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಕೈಗೊಂಡ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿರುವ ಈ ರೋಪ್​ವೇಯ ಕಾಮಗಾರಿಯನ್ನು 2006 ರಲ್ಲಿ ಪ್ರಾರಂಭಿಸಿ, ಕೆಲಸದ ಬಹುಭಾಗವನ್ನು 2019 ರ ಅಂತ್ಯಕ್ಕೆ ಪೂರ್ಣಗೊಳಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ ಈ ರೋಪ್​ವೇ ಇಡೀ ದೇಶದಲ್ಲಿ ಅತ್ಯಂತ ಉದ್ದವಾದದ್ದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೌದು, […]

ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಾಣವಾಯ್ತು ದೇಶದ ಅತಿ ಉದ್ದನೆಯ ರೋಪ್​ವೇ
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Aug 24, 2020 | 6:57 PM

ಡಿಸ್ಪುರ: ಈಶಾನ್ಯ ಭಾರತದ ಅಸ್ಸಾಂ ರಾಜ್ಯದ ಉತ್ತರ ಗುವಾಹಾಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಿದ್ದ ರೋಪ್‌ವೇಯನ್ನು ರಾಜ್ಯದ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ಸೋಮವಾರ ಲೋಕಾರ್ಪಣೆ ಮಾಡಿದರು. ಬ್ರಹ್ಮಪುತ್ರ ನದಿಯ ದಡಗಳನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಕೈಗೊಂಡ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿರುವ ಈ ರೋಪ್​ವೇಯ ಕಾಮಗಾರಿಯನ್ನು 2006 ರಲ್ಲಿ ಪ್ರಾರಂಭಿಸಿ, ಕೆಲಸದ ಬಹುಭಾಗವನ್ನು 2019 ರ ಅಂತ್ಯಕ್ಕೆ ಪೂರ್ಣಗೊಳಿಸಲಾಗಿದೆ.

ಅಚ್ಚರಿಯ ಸಂಗತಿಯೆಂದರೆ ಈ ರೋಪ್​ವೇ ಇಡೀ ದೇಶದಲ್ಲಿ ಅತ್ಯಂತ ಉದ್ದವಾದದ್ದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೌದು, ಇದು ಸುಮಾರು 2 ಕಿ.ಮೀ ಉದ್ದವಿದ್ದು, ಇದನ್ನು ಬಳಸಿ ಸಾರ್ವಜನಿಕರು ಕೇವಲ ಏಳು ನಿಮಿಷಗಳಲ್ಲಿ ಆಚಿನ ದಡವನ್ನು ತಲುಪಬಹುದಾಗಿದೆ. ಪ್ರತಿ ರೋಪ್​ವೇ ಬೋಗಿ 32 ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಆದರೆ ಈಗ ಕೊರೊನಾ ಸೋಂಕಿನಿಂದಾಗಿ ಕೇವಲ 15 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಪ್ರತಿಯೊಬ್ಬ ಪ್ರಯಾಣಿಕನೂ ಇದರಲ್ಲಿ ಓಡಾಡಲು ರಕ್ಷಣಾ ಸಾಧನ (safety gear) ಧರಿಸಬೇಕಾಗಿದೆ. ಸವಾರಿಯ ಒಂದು ಮಾರ್ಗಕ್ಕೆ 60 ರೂಪಾಯಿ ಮತ್ತು ದ್ವಿಮುಖ ಪ್ರಯಾಣಕ್ಕೆ 100 ರೂಪಾಯಿ ದರ ನಿಗದಿ ಮಾಡಲಾಗಿದೆ. ಜೊತೆಗೆ, ದೈನಂದಿನ, ಸಾಪ್ತಾಹಿಕ ಮತ್ತು ಮಾಸಿಕ ಪಾಸ್‌ಗಳನ್ನು ಸಹ ಪಡೆಯಲು ಅವಕಾಶವಿದೆ.

ರೋಪ್‌ವೇ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸಲಿದ್ದು, ರೋಪ್‌ವೇ ಸೇವೆಯ ಮೇಲ್ವಿಚಾರಣೆಗಾಗಿ 58 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಒಟ್ಟಾರೆ, 56 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸಂಪೂರ್ಣ ಯೋಜನೆಯನ್ನು ನಿರ್ಮಿಸಲಾಗಿದೆ.

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ