AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಾಣವಾಯ್ತು ದೇಶದ ಅತಿ ಉದ್ದನೆಯ ರೋಪ್​ವೇ

ಡಿಸ್ಪುರ: ಈಶಾನ್ಯ ಭಾರತದ ಅಸ್ಸಾಂ ರಾಜ್ಯದ ಉತ್ತರ ಗುವಾಹಾಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಿದ್ದ ರೋಪ್‌ವೇಯನ್ನು ರಾಜ್ಯದ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ಸೋಮವಾರ ಲೋಕಾರ್ಪಣೆ ಮಾಡಿದರು. ಬ್ರಹ್ಮಪುತ್ರ ನದಿಯ ದಡಗಳನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಕೈಗೊಂಡ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿರುವ ಈ ರೋಪ್​ವೇಯ ಕಾಮಗಾರಿಯನ್ನು 2006 ರಲ್ಲಿ ಪ್ರಾರಂಭಿಸಿ, ಕೆಲಸದ ಬಹುಭಾಗವನ್ನು 2019 ರ ಅಂತ್ಯಕ್ಕೆ ಪೂರ್ಣಗೊಳಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ ಈ ರೋಪ್​ವೇ ಇಡೀ ದೇಶದಲ್ಲಿ ಅತ್ಯಂತ ಉದ್ದವಾದದ್ದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೌದು, […]

ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಾಣವಾಯ್ತು ದೇಶದ ಅತಿ ಉದ್ದನೆಯ ರೋಪ್​ವೇ
ಸಾಧು ಶ್ರೀನಾಥ್​
| Edited By: |

Updated on: Aug 24, 2020 | 6:57 PM

Share

ಡಿಸ್ಪುರ: ಈಶಾನ್ಯ ಭಾರತದ ಅಸ್ಸಾಂ ರಾಜ್ಯದ ಉತ್ತರ ಗುವಾಹಾಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಿದ್ದ ರೋಪ್‌ವೇಯನ್ನು ರಾಜ್ಯದ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ಸೋಮವಾರ ಲೋಕಾರ್ಪಣೆ ಮಾಡಿದರು. ಬ್ರಹ್ಮಪುತ್ರ ನದಿಯ ದಡಗಳನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಕೈಗೊಂಡ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿರುವ ಈ ರೋಪ್​ವೇಯ ಕಾಮಗಾರಿಯನ್ನು 2006 ರಲ್ಲಿ ಪ್ರಾರಂಭಿಸಿ, ಕೆಲಸದ ಬಹುಭಾಗವನ್ನು 2019 ರ ಅಂತ್ಯಕ್ಕೆ ಪೂರ್ಣಗೊಳಿಸಲಾಗಿದೆ.

ಅಚ್ಚರಿಯ ಸಂಗತಿಯೆಂದರೆ ಈ ರೋಪ್​ವೇ ಇಡೀ ದೇಶದಲ್ಲಿ ಅತ್ಯಂತ ಉದ್ದವಾದದ್ದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೌದು, ಇದು ಸುಮಾರು 2 ಕಿ.ಮೀ ಉದ್ದವಿದ್ದು, ಇದನ್ನು ಬಳಸಿ ಸಾರ್ವಜನಿಕರು ಕೇವಲ ಏಳು ನಿಮಿಷಗಳಲ್ಲಿ ಆಚಿನ ದಡವನ್ನು ತಲುಪಬಹುದಾಗಿದೆ. ಪ್ರತಿ ರೋಪ್​ವೇ ಬೋಗಿ 32 ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಆದರೆ ಈಗ ಕೊರೊನಾ ಸೋಂಕಿನಿಂದಾಗಿ ಕೇವಲ 15 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಪ್ರತಿಯೊಬ್ಬ ಪ್ರಯಾಣಿಕನೂ ಇದರಲ್ಲಿ ಓಡಾಡಲು ರಕ್ಷಣಾ ಸಾಧನ (safety gear) ಧರಿಸಬೇಕಾಗಿದೆ. ಸವಾರಿಯ ಒಂದು ಮಾರ್ಗಕ್ಕೆ 60 ರೂಪಾಯಿ ಮತ್ತು ದ್ವಿಮುಖ ಪ್ರಯಾಣಕ್ಕೆ 100 ರೂಪಾಯಿ ದರ ನಿಗದಿ ಮಾಡಲಾಗಿದೆ. ಜೊತೆಗೆ, ದೈನಂದಿನ, ಸಾಪ್ತಾಹಿಕ ಮತ್ತು ಮಾಸಿಕ ಪಾಸ್‌ಗಳನ್ನು ಸಹ ಪಡೆಯಲು ಅವಕಾಶವಿದೆ.

ರೋಪ್‌ವೇ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸಲಿದ್ದು, ರೋಪ್‌ವೇ ಸೇವೆಯ ಮೇಲ್ವಿಚಾರಣೆಗಾಗಿ 58 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಒಟ್ಟಾರೆ, 56 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸಂಪೂರ್ಣ ಯೋಜನೆಯನ್ನು ನಿರ್ಮಿಸಲಾಗಿದೆ.

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ