AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup 2023: ಭಾರತ ತಂಡವು ವಿಶ್ವಕಪ್​ ಫೈನಲ್​ನಲ್ಲಿ ಸೋತಿದ್ದಕ್ಕೆ ಮನನೊಂದು ಇಬ್ಬರು ಆತ್ಮಹತ್ಯೆ

ಭಾರತ ಕ್ರಿಕೆಟ್ ತಂಡವು ವಿಶ್ವಕಪ್ ಫೈನಲ್​ನಲ್ಲಿ ಸೋತಿದ್ದಕ್ಕೆ ಮನನೊಂದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಬ್ಬರು ಹಾಗೂ ಒಡಿಶಾದಲ್ಲಿ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ವಿಶ್ವಕಪ್ ಕ್ರಿಕೆಟ್ ಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ ಪಶ್ಚಿಮ ಬಂಗಾಳದ ಬಂಕುರಾ ಮತ್ತು ಒಡಿಶಾದ ಜಾಜ್‌ಪುರದಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋಮವಾರ ಬೆಳಗ್ಗೆ ಬಂಕುರಾ ಸಮ್ಮಿಲಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ.

ICC World Cup 2023: ಭಾರತ ತಂಡವು ವಿಶ್ವಕಪ್​ ಫೈನಲ್​ನಲ್ಲಿ ಸೋತಿದ್ದಕ್ಕೆ ಮನನೊಂದು ಇಬ್ಬರು ಆತ್ಮಹತ್ಯೆ
ವಿಶ್ವಕಪ್Image Credit source: India Today
ನಯನಾ ರಾಜೀವ್
|

Updated on: Nov 21, 2023 | 9:51 AM

Share

ಭಾರತ ಕ್ರಿಕೆಟ್ ತಂಡವು ವಿಶ್ವಕಪ್(World Cup) ಫೈನಲ್​ನಲ್ಲಿ ಸೋತಿದ್ದಕ್ಕೆ ಮನನೊಂದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಬ್ಬರು ಹಾಗೂ ಒಡಿಶಾದಲ್ಲಿ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ವಿಶ್ವಕಪ್ ಕ್ರಿಕೆಟ್ ಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ ಪಶ್ಚಿಮ ಬಂಗಾಳದ ಬಂಕುರಾ ಮತ್ತು ಒಡಿಶಾದ ಜಾಜ್‌ಪುರದಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋಮವಾರ ಬೆಳಗ್ಗೆ ಬಂಕುರಾ ಸಮ್ಮಿಲಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ.

ಘಟನೆಯ ನಂತರ ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿ  ರಾಹುಲ್ ಲೋಹರ್‌ನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ತನಿಖೆ ಮುಗಿಯುವವರೆಗೆ ವಿಷಯದ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಬಂಕುರಾ ಸಮ್ಮಿಲಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ.

ಒಡಿಶಾದ ಜಾಜ್‌ಪುರದಲ್ಲಿ, ಭಾನುವಾರ ರಾತ್ರಿ ಪಂದ್ಯ ಮುಗಿದ ಸ್ವಲ್ಪ ಸಮಯದ ನಂತರ ಮತ್ತೊಬ್ಬ 23 ವರ್ಷದ  ದೇವ ರಂಜನ್ ದಾಸ್ ಬಿಂಜರ್‌ಪುರ ಪ್ರದೇಶದಲ್ಲಿ ತನ್ನ ಮನೆಯ ಟೆರೇಸ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಟೀಂ ಇಂಡಿಯಾ ಆಟಗಾರರನ್ನು ಭೇಟಿಯಾಗಿ ನೈತಿಕ ಸ್ಥೈರ್ಯ ತುಂಬಿದ ಪ್ರಧಾನಿ ಮೋದಿ

ಮೃತ ವ್ಯಕ್ತಿ ಎಮೋಷನಲ್ ಡಿಸ್​ಆರ್ಡರ್ ಸಿಂಡ್ರೋಮ್​ಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ನಾವು ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಿದ್ದೇವೆ ಮತ್ತು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಜರಿ ಔಟ್‌ಪೋಸ್ಟ್‌ನ ಪ್ರಭಾರ ಅಧಿಕಾರಿ ಇಂದ್ರಮಣಿ ಜುವಾಂಗಾ ಹೇಳಿದರು. ಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್‌ಗಳಿಂದ ಸೋಲು ಅನುಭವಿಸಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ