AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 14 ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಉಡಾವಣೆ: ಇಸ್ರೋ ಘೋಷಣೆ

ಜುಲೈ 14ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಮಿಷನ್  ಶ್ರೀಹರಿಕೋಟದಿಂದ ಉಡಾವಣೆಯಾಗಲಿದೆ. ಹೆಚ್ಚಿನ ಅಪ್ಡೇಟ್ ನಿರೀಕ್ಷಿಸಿ ಎಂದು ಟ್ವೀಟ್​​ ಮಾಡಿದ ಇಸ್ರೋ

ಜುಲೈ 14 ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಉಡಾವಣೆ: ಇಸ್ರೋ ಘೋಷಣೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 06, 2023 | 6:16 PM

Share

ಭಾರತದ ಚಂದ್ರಯಾನ ಮಿಷನ್ ಚಂದ್ರಯಾನ-3 (Chandrayaan-3), ಜುಲೈ 14 ರಂದು ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ ಎಂದು ಇಸ್ರೊ ಟ್ವೀಟ್ ಮಾಡಿದೆ. ಜುಲೈ 14ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಮಿಷನ್  ಶ್ರೀಹರಿಕೋಟದಿಂದ ಉಡಾವಣೆಯಾಗಲಿದೆ. ಹೆಚ್ಚಿನ ಅಪ್ಡೇಟ್  ನಿರೀಕ್ಷಿಸಿ ಎಂದು ಇಸ್ರೋ ಟ್ವೀಟ್​​ನಲ್ಲಿ ಹೇಳಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ತನ್ನ ಬಹು ನಿರೀಕ್ಷಿತ ಚಂದ್ರಯಾನ-3 ಜುಲೈ 13 ರಂದು ಉಡಾವಣೆಗೊಳ್ಳಲಿದೆ ಎಂದು ಕಳೆದ ವಾರ ಘೋಷಿಸಿತ್ತು. ಇದೀಗ ಉಡಾವಣೆ ಜುಲೈ 14 ರಂದು ನಡೆಯಲಿದೆ. ಉಡಾವಣೆಯ ಜುಲೈ 14 ರಂದು ಮಧ್ಯಾಹ್ನ 2.35 ಕ್ಕೆ ನಿಗದಿಯಾಗಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಉಡಾವಣೆ ನಡೆಯಲಿದೆ ಎಂದು ಇಸ್ರೋ ಹೇಳಿದೆ.

ಈ ಮಿಷನ್ ಚಂದ್ರನತ್ತ ಭಾರತದ ಮೂರನೇ ಸಾಹಸವಾಗಿದೆ. 2019 ರಲ್ಲಿ ಚಂದ್ರಯಾನ-2 ಮಿಷನ್ ನಂತರದ ಮಿಷನ್ ಇದಾಗಿದೆ. ಚಂದ್ರಯಾನ-2 ಮಿಷನ್ ಚಂದ್ರನ ಕಕ್ಷೆಯಲ್ಲಿ ಯಶಸ್ವಿಯಾದಾಗ, ವಿಕ್ರಂ ಲ್ಯಾಂಡರ್ ಲ್ಯಾಂಡಿಂಗ್ ಸರಿಯಾಗದೆ ರೋವರ್ ಅನ್ನು ಯೋಜಿಸಿದಂತೆ ನಿಯೋಜಿಸುವುದನ್ನು ತಡೆಯಿತು.

ಇದನ್ನೂ ಓದಿ:  ಪತ್ನಿ ಇಲ್ಲದೆ ಪ್ರಧಾನಿ ಮನೆಯಲ್ಲಿ ಇರುವುದು ತಪ್ಪು: ‘ಬೇಗ ಮದುವೆಯಾಗಿ’ ಎಂದು ರಾಹುಲ್ ಗಾಂಧಿಗೆ ಸಲಹೆ ನೀಡಿದ ಲಾಲು

ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಒಳಗೊಂಡಿರುವ ತನ್ನ ಹೊಸ ಹೆವಿ-ಲಿಫ್ಟ್ ಉಡಾವಣಾ ವಾಹನವಾದ ಲಾಂಚ್ ವೆಹಿಕಲ್ ಮಾರ್ಕ್ 3 (LVM3) ನೊಂದಿಗೆ ಯಶಸ್ವಿಯಾಗಿ ಸಂಯೋಜಿಸಿದೆ ಎಂದು ಇಸ್ರೋ ಬುಧವಾರ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Thu, 6 July 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ