AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಸರಣಿ ಸ್ಫೋಟದ ಆರೋಪಿ, ದಾವೂದ್ ಇಬ್ರಾಹಿಂ ಆಪ್ತ ಅಬು ಬಕರ್​ ಯುಎಇಯಲ್ಲಿ ಬಂಧನ; ಶೀಘ್ರವೇ ಭಾರತಕ್ಕೆ ಕರೆತಂದು ವಿಚಾರಣೆ

2019ರಲ್ಲಿ ಯುಎಇ ಭದ್ರತಾ ಏಜೆನ್ಸಿಗಳೇ ಅಬು ಬಕರ್​ನನ್ನು ಒಮ್ಮೆ ಅರೆಸ್ಟ್ ಮಾಡಿದ್ದವು. ಆದರೆ ಕೆಲವು ದಾಖಲೆಗಳು ಸರಿಯಾಗಿ ಸಿಗದ ಕಾರಣ ಅದು ಹೇಗೋ ಕಸ್ಟಡಿಯಿಂದ ಬಿಡುಗಡೆ ಮಾಡಲಾಗಿತ್ತು. 

ಮುಂಬೈ ಸರಣಿ ಸ್ಫೋಟದ ಆರೋಪಿ, ದಾವೂದ್ ಇಬ್ರಾಹಿಂ ಆಪ್ತ ಅಬು ಬಕರ್​ ಯುಎಇಯಲ್ಲಿ ಬಂಧನ; ಶೀಘ್ರವೇ ಭಾರತಕ್ಕೆ ಕರೆತಂದು ವಿಚಾರಣೆ
ಮುಂಬೈ ಸ್ಫೋಟದ ಸಂದರ್ಭ
TV9 Web
| Edited By: |

Updated on:Feb 05, 2022 | 8:53 AM

Share

ದೆಹಲಿ: 1993 ಮುಂಬೈ ಸರಣಿ ಸ್ಫೋಟದ (1993 Mumbai Blast)ಆರೋಪಿ, ಭೂಗತ ಪಾತಕಿ ದಾವೂದ್​ ಇಬ್ರಾಹಿಂ ಆಪ್ತ ಅಬು ಬಕರ್(Abu Bakar)​​​ನನ್ನು ಭಾರತೀಯ ಭದ್ರತಾ ದಳದ ಸಿಬ್ಬಂದಿ ಯುನೈಟೆಡ್​ ಅರಬ್​ ಎಮಿರೇಟ್ಸ್​ (ಯುಎಇ)ನಲ್ಲಿ ಬಂಧಿಸಿವೆ.  1993ರಲ್ಲಿ ಮುಂಬೈನಲ್ಲಿ ಒಟ್ಟು 12 ಪ್ರದೇಶಗಳನ್ನು ಸ್ಫೋಟಿಸಲಾಗಿತ್ತು. ಈ ದುರಂತದಲ್ಲಿ 257 ಮಂದಿ ಮೃತಪಟ್ಟಿದ್ದರೆ, 713ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 29ವರ್ಷಗಳಿಂದಲೂ ಭಾರತದ ಮೋಸ್ಟ್​ವಾಂಟೆಡ್​ ಪಟ್ಟಿಯಲ್ಲಿದ್ದ ಉಗ್ರ ಅಬು ಬಕರ್​​ನನ್ನು ಬಂಧಿಸಲಾಗಿದ್ದು, ಆತನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಅಬು ಬಕರ್​​ ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳ ಬಳಕೆ ತರಬೇತಿ ನೀಡುವುದರಲ್ಲಿ ತೊಡಗಿಕೊಂಡಿದ್ದ. ಅಷ್ಟೇ ಅಲ್ಲ ದುಬೈನಲ್ಲಿದ್ದ ಇಬ್ರಾಹಿಂ ದಾವೂದ್​ ನಿವಾಸದಲ್ಲಿ ಮುಂಬೈ ಸ್ಫೋಟದ ಕುರಿತು ರೂಪುರೇಷೆ ಮಾಡುವಲ್ಲಿ, ಆರ್​ಡಿಎಕ್ಸ್​ ಲ್ಯಾಂಡಿಂಗ್ ಮಾಡುವ ಬಗ್ಗೆ ಯೋಜನೆ ರೂಪಿಸುವಲ್ಲಿ ಈತ ಸಕ್ರಿಯನಾಗಿದ್ದ ಎಂದು ಹೇಳಲಾಗಿದೆ.  1993ರ ಸ್ಫೋಟದ ಪ್ರಮುಖ ಆರೋಪಿಯಾಗಿರುವ ಈತ, ನಂತರದ ದಿನಗಳಲ್ಲಿ ಪಾಕಿಸ್ತಾನ ಮತ್ತು ಯುಎಇನಲ್ಲಿಯೇ ವಾಸವಾಗಿದ್ದ. ಈತ ಯುಎಇನಲ್ಲಿಯೇ ವಾಸವಾಗಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಭಾರತೀಯ ಭದ್ರತಾ ದಳದ ಸಿಬ್ಬಂದಿ ಇದೀಗ ಬಂಧಿಸಿದ್ದಾರೆ.  2019ರಲ್ಲಿ ಯುಎಇ ಭದ್ರತಾ ಏಜೆನ್ಸಿಗಳೇ ಅಬು ಬಕರ್​ನನ್ನು ಒಮ್ಮೆ ಅರೆಸ್ಟ್ ಮಾಡಿದ್ದವು. ಆದರೆ ಕೆಲವು ದಾಖಲೆಗಳು ಸರಿಯಾಗಿ ಸಿಗದ ಕಾರಣ ಅದು ಹೇಗೋ ಕಸ್ಟಡಿಯಿಂದ ಬಿಡುಗಡೆ ಮಾಡಲಾಗಿತ್ತು.

29ವರ್ಷಗಳ ನಂತರ ಯುಎಇನಲ್ಲಿ ಭಾರತದ ಭದ್ರತಾ ಏಜೆನ್ಸಿಗಳು ಅಬು ಬಕರ್​ನನ್ನು ಬಂಧಿಸಿವೆ. ಅಲ್ಲಿಂದ ಭಾರತಕ್ಕೆ ಕರೆತಂದ ಕೂಡಲೇ ಆತನ ವಿರುದ್ಧ ಇಲ್ಲಿ ಕಾನೂನು ಪ್ರಕ್ರಿಯೆಗಳು ಶುರುವಾಗಲಿವೆ. ಅಬು ಬಕರ್​​ನ ಪೂರ್ಣ ಹೆಸರು ಅಬು ಬಕರ್ ಅಬ್ದುಲ್ ಗಫೂರ್ ಶೇಖ್ ಎಂದಾಗಿದ್ದು, ಇವನು ದಾವೂದ್ ಇಬ್ರಾಹಿಂನ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ. ದಾವೂದ್ ಇಬ್ರಾಹಿಂನ ಲೆಫ್ಟಿನೆಂಟ್​ಗಳಾಗಿದ್ದ ಮೊಹಮ್ಮದ್ ಮತ್ತು ಮುಸ್ತಫಾ ದೊಸ್ಸಾರೊಂದಿಗೆ ಸೇರಿ, ಗಲ್ಫ್​ ದೇಶಗಳಿಂದ ಮುಂಬೈ ಮತ್ತು ಇತರ ಸ್ಥಳಗಳಿಗೆ ಚಿನ್ನ, ಬಟ್ಟೆ, ವಿದ್ಯುತ್​ ಸಲಕರಣೆಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ. ಈತನ ವಿರುದ್ಧ 1997ರಲ್ಲಿ ರೆಡ್​ ಕಾರ್ನರ್ ನೋಟಿಸ್ ಕೂಡ ಜಾರಿಯಾಗಿತ್ತು.  ಅಬು ಬಕರ್​ ಎರಡು ಮದುವೆಯಾಗಿದ್ದು, ಇರಾನ್​ವರಾದ ಎರಡನೇ ಪತ್ನಿಯೊಂದಿಗೆ ವಾಸವಾಗಿದ್ದ.

ಇದನ್ನೂ ಓದಿ: ಉತ್ತರ ಪ್ರದೇಶ: ಎಲ್ಲ 403 ವಿಧಾನಸಭೆ ಕ್ಷೇತ್ರಗಳಲ್ಲೂ ಸ್ಪರ್ಧಿಸುತ್ತೇವೆ ಅನ್ನುತ್ತಿದ್ದಾರೆ ಪ್ರಿಯಾಂಕಾ ಗಾಂಧಿ, ಗೊಂದಲಾಪುರದಲ್ಲಿ ಕಾಂಗ್ರೆಸ್!​

Published On - 8:39 am, Sat, 5 February 22

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್