AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ಲೋಕಸಭೆಯಲ್ಲಿಂದು ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ-2026’ ಮಂಡನೆ

ದೇಶದಲ್ಲಿ ಹೆಚ್ಚುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ 'ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ 2026' ಮಂಡಿಸುತ್ತಿದೆ. ಈ ಹೊಸ ಕಾನೂನು ಅಪರಾಧಿಗಳಿಗೆ 5 ರಿಂದ 10 ವರ್ಷ ಜೈಲು ಶಿಕ್ಷೆ ಹಾಗೂ ₹50 ಲಕ್ಷದವರೆಗೆ ದಂಡ ವಿಧಿಸುತ್ತದೆ. ಸಂಘಟಿತ ಅಪರಾಧಗಳಿಗೆ ಇನ್ನೂ ಕಠಿಣ ಕ್ರಮಗಳಿದ್ದು, ವಿದ್ಯಾರ್ಥಿಗಳ ಭವಿಷ್ಯ ಕಾಪಾಡುವುದು ಇದರ ಮುಖ್ಯ ಉದ್ದೇಶವಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ಲೋಕಸಭೆಯಲ್ಲಿಂದು ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ-2026’ ಮಂಡನೆ
ಸಂಸತ್ತು
ನಯನಾ ರಾಜೀವ್
|

Updated on:Jul 27, 2026 | 9:15 AM

Share

ನವದೆಹಲಿ, ಜುಲೈ 27: ದೇಶದಲ್ಲಿ ನಿರಂತರವಾಗಿ ವರದಿಯಾಗುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ(Question Paper leak) ಮತ್ತು ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪರೀಕ್ಷೆಗಳ ಪಾರದರ್ಶಕತೆ ಮತ್ತು ನಂಬಿಕೆಯನ್ನು ಕಾಪಾಡುವ ಉದ್ದೇಶದಿಂದ ಸಾರ್ವಜನಿಕ ಪರೀಕ್ಷಾ ಅಕ್ರಮಗಳ ತಡೆಗೆ ತಿದ್ದುಪಡಿ ಮಸೂದೆ 2026 ಅನ್ನು ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಸೋಮವಾರ(ಜುಲೈ 27) ಲೋಕಸಭೆಯಲ್ಲಿ ಮಂಡಿಸಲಿದ್ದಾರೆ.

ಇತ್ತೀಚಿನ ನೀಟ್ (NEET) ಸೇರಿದಂತೆ ಪ್ರಮುಖ ಪರೀಕ್ಷಾ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಮೂಲ 2024ರ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಮಸೂದೆಯ ಕರಡನ್ನು ಈಗಾಗಲೇ ಸಂಸದರಿಗೆ ವಿತರಿಸಲಾಗಿದೆ. ಪರೀಕ್ಷಾ ಅಕ್ರಮ ಹಾಗೂ ಸೋರಿಕೆಯಲ್ಲಿ ಭಾಗಿಯಾದವರಿಗೆ ಪ್ರಸ್ತುತ ಇರುವ 3 ವರ್ಷಗಳ ಜೈಲು ಶಿಕ್ಷೆಯನ್ನು 5 ರಿಂದ 10 ವರ್ಷಗಳಿಗೆ ಏರಿಸಲಾಗಿದೆ.

ಕೃತ್ಯದಲ್ಲಿ ಭಾಗಿಯಾದ ವ್ಯಕ್ತಿಗಳಿಗೆ ವಿಧಿಸುವ ಗರಿಷ್ಠ ದಂಡದ ಮೊತ್ತವನ್ನು 10 ಲಕ್ಷ ರೂ.ದಿಂದ 50 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಪರೀಕ್ಷೆ ಜವಾಬ್ದಾರಿ ಹೊತ್ತು ಕರ್ತವ್ಯಲೋಪ ಎಸಗುವ ಏಜೆನ್ಸಿಗಳಿಗೆ ವಿಧಿಸುವ ದಂಡವನ್ನು ಕೋಟಿಯಿಂದ 5 ಕೋಟಿ ರೂ. ಏರಿಸಲಾಗಿದ್ದು, ಅಂತಹ ಸಂಸ್ಥೆಗಳನ್ನು 8 ವರ್ಷಗಳ ಕಾಲ ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ.

ಸಂಘಟಿತ ಅಪರಾಧಕ್ಕೆ ಬ್ರೇಕ್: ಪರೀಕ್ಷಾ ಹಗರಣಗಳಲ್ಲಿ ಸಂಘಟಿತ ಅಪರಾಧವೆಂದು ಸಾಬೀತಾದರೆ 10 ಕೋಟಿ ರೂ. ವರೆಗೆ ದಂಡ ಮತ್ತು 7 ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಎಸ್‌ಟಿಎಫ್ (STF) ಅಥವಾ ಯಾವುದೇ ಕೇಂದ್ರ ತನಿಖಾ ಸಂಸ್ಥೆಯು ಪರೀಕ್ಷಾ ಅಕ್ರಮದ ತನಿಖೆಯನ್ನು ಕೇವಲ 2 ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಕಾಲಮಿತಿ ನಿಗದಿಪಡಿಸಲಾಗಿದೆ.

ಮತ್ತಷ್ಟು ಓದಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ, ಇನ್ನಷ್ಟು ತಲೆದಂಡ ಸಾಧ್ಯತೆ

ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಗಳಿಂದ ನಡೆದ ತೀವ್ರ ಪ್ರತಿಭಟನೆಗಳು ಹಾಗೂ ಶಿಕ್ಷಣ ಸಚಿವರ ರಾಜೀನಾಮೆಗೆ ಕಾರಣವಾದ ಪರೀಕ್ಷಾ ಹಗರಣಗಳ ಬೆನ್ನಲ್ಲೇ ಸರ್ಕಾರ ಈ ಕಠಿಣ ಕಾನೂನು ರೂಪಿಸುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರಿಗೆ ಜಾಮೀನು ಸಿಗದಂತೆ ಕಠಿಣ ನಿಬಂಧನೆಗಳನ್ನು ತರಲು ಮತ್ತು ಯುವಕರ ಭವಿಷ್ಯದೊಂದಿಗೆ ಚೆಲ್ಲಾಟವಾಡುವವರಿಗೆ ತಕ್ಕ ಶಾಸ್ತಿ ಮಾಡಲು ಈ ಮಸೂದೆ ಅತ್ಯಂತ ನಿರ್ಣಾಯಕವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:14 am, Mon, 27 July 26

Follow Us
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?