AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಗೆ ಮತ್ತೆ ವಿಶ್ವದ ಅತ್ಯಂತ ಕಲುಷಿತ ನಗರವೆಂಬ ಹಣೆಪಟ್ಟಿ

ದೆಹಲಿಗೆ ಮತ್ತೆ ವಿಶ್ವದ ಅತ್ಯಂತ ಕಲುಷಿತ ನಗರ ಎನ್ನುವ ಹಣೆ ಪಟ್ಟಿ ಸಿಕ್ಕಿದೆ. ಕಲುಷಿತ ಗಾಳಿಯಿಂದ ಅಸ್ತಮಾ, ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಮತ್ತು ಮಧುಮೇಹ ಸೇರಿದಂತೆ ಅಸ್ತಿತ್ವದಲ್ಲಿರುವ ಕಾಯಿಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ದೆಹಲಿಗೆ ಮತ್ತೆ ವಿಶ್ವದ ಅತ್ಯಂತ ಕಲುಷಿತ ನಗರವೆಂಬ ಹಣೆಪಟ್ಟಿ
ದೆಹಲಿ ವಾಯುಮಾಲಿನ್ಯ
Follow us
ನಯನಾ ರಾಜೀವ್
|

Updated on: Mar 19, 2024 | 8:05 AM

ದೆಹಲಿ ಮತ್ತೊಮ್ಮೆ ವಿಶ್ವದ ಅತ್ಯಂತ ಕಲುಷಿತ ನಗರ ಎನಿಸಿಕೊಂಡಿದೆ. ಹೊಸ ವರದಿಯ ಪ್ರಕಾರ, ಬಿಹಾರದ ಬೇಗುಸರಾಯ್ ವಿಶ್ವದ ಅತ್ಯಂತ ಕಲುಷಿತ ಮೆಟ್ರೋಪಾಲಿಟನ್ ಪ್ರದೇಶವಾಗಿ ಹೊರಹೊಮ್ಮಿದೆ, ಆದರೆ ದೆಹಲಿಯು ಅತ್ಯಂತ ಕೆಟ್ಟ ಗಾಳಿಯ ಗುಣಮಟ್ಟ ಹೊಂದಿರುವ ನಗರ ಎನ್ನುವ ಕುಖ್ಯಾತಿಗೆ ಪಾತ್ರವಾಗಿದೆ.

ದೇಶದಲ್ಲಿ ಅದೆಷ್ಟೋ ನಗರಗಳು ಮಾಲಿನ್ಯದಲ್ಲಿ ಮುಳುಗಿ ಹೋಗಿವೆ. ಆದರೂ ರಾಜಧಾನಿ ದೆಹಲಿ ಎಲ್ಲಾ ನಗರಗಳನ್ನೂ ಮೀರಿಸಿ ಮುನ್ನುಗ್ಗುತ್ತಿದೆ. ಅಲ್ಲಿ ವಾಸ ಮಾಡುವ ಜನಗಳಿಗೆ ಉಸಿರು ಬಿಗಿಹಿಡಿದು ಬದುಕುವ ಪರಿಸ್ಥಿತಿ ಇದೆ.

ಸಾಮಾನ್ಯವಾಗಿ ಚಳಿಗಾಲದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯನ್ನ ನರಕ ಎಂದು ಕರೆಯುವುದು ಮಾಮೂಲು. ಏಕೆಂದರೆ ಅಲ್ಲಿ ಹೊಗೆ, ಮಂಜು ದೆಹಲಿ ಜನರನ್ನ ಇನ್ನಿಲ್ಲದ ರೀತಿ ಬಾಧಿಸುತ್ತದೆ.

ಮತ್ತಷ್ಟು ಓದಿ: Bangalore Air Quality: ಭಾರತದ ಅತ್ಯಂತ ಕಲುಷಿತ ನಗರಗಳಲ್ಲಿ ಬೆಂಗಳೂರು ನಗರಕ್ಕೆ 6ನೇ ಸ್ಥಾನ

ದೆಹಲಿ ನಿವಾಸಿಗಳ ಪೈಕಿ ಬಹುತೇಕರು ಚಳಿಗಾಲ ಬಂದಾಗ ದಕ್ಷಿಣ ಭಾರತ ಅಥವಾ ಈಶಾನ್ಯ ಭಾರತದ ಕಡೆ ಪ್ರಯಾಣ ಬೆಳೆಸುತ್ತಾರೆ. ಪ್ರತಿ ಘನ ಮೀಟರ್‌ಗೆ ಸರಾಸರಿ 54.4 ಮೈಕ್ರೋಗ್ರಾಂಗಳಷ್ಟು PM2.5 ಸಾಂದ್ರತೆಯೊಂದಿಗೆ, ಬಾಂಗ್ಲಾದೇಶ (ಪ್ರತಿ ಘನ ಮೀಟರ್‌ಗೆ 79.9 ಮೈಕ್ರೊಗ್ರಾಂ) ಮತ್ತು ಪಾಕಿಸ್ತಾನ (73.7 ಮೈಕ್ರೋಗ್ರಾಂ ಪ್ರತಿ ಘನ ಮೀಟರ್) ನಂತರ 2023 ರಲ್ಲಿ 134 ದೇಶಗಳಲ್ಲಿ ಭಾರತವು ಮೂರನೇ-ಕೆಟ್ಟ ಗಾಳಿಯ ಗುಣಮಟ್ಟವನ್ನು ಹೊಂದಿತ್ತು.

ಸ್ವಿಸ್ ಸಂಸ್ಥೆ IQAir 2023ನೇ ಸಾಲಿನ ವಿಶ್ವ ವಾಯು ಗುಣಮಟ್ಟ ವರದಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಈ ಎಲ್ಲಾ ಅಂಶಗಳಿವೆ. 2022 ರಲ್ಲಿ, ಪ್ರತಿ ಘನ ಮೀಟರ್‌ಗೆ ಸರಾಸರಿ 53.3 ಮೈಕ್ರೋಗ್ರಾಂಗಳಷ್ಟು PM2.5 ಸಾಂದ್ರತೆಯೊಂದಿಗೆ ಭಾರತವು ಎಂಟನೇ ಅತ್ಯಂತ ಕಲುಷಿತ ರಾಷ್ಟ್ರವಾಗಿತ್ತು.

ಬೇಗುಸರಾಯ್ ಪ್ರತಿ ಘನ ಮೀಟರ್‌ಗೆ ಸರಾಸರಿ 118.9 ಮೈಕ್ರೋಗ್ರಾಂಗಳಷ್ಟು PM2.5 ಸಾಂದ್ರತೆಯೊಂದಿಗೆ ಜಾಗತಿಕವಾಗಿ ಅತ್ಯಂತ ಕಲುಷಿತ ಮೆಟ್ರೋಪಾಲಿಟನ್ ಪ್ರದೇಶವಾಗಿದೆ. ನಗರವು 2022 ರ ಶ್ರೇಯಾಂಕದಲ್ಲಿ ಕಾಣಿಸಿಕೊಂಡಿಲ್ಲ.

ಪಿಎಂ2.5 ವಾಯುಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಅಸ್ತಮಾ, ಕ್ಯಾನ್ಸರ್, ಪಾರ್ಶ್ವವಾಯು ಮತ್ತು ಶ್ವಾಸಕೋಶದ ಕಾಯಿಲೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳು ತಲೆದೋರುತ್ತವೆ. ಮಾನಸಿಕ ಸಮಸ್ಯೆಗಳನ್ನು ಕೂಡ ಉಂಟು ಮಾಡುವ ಸಾಧ್ಯತೆ ಇರುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ