AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indigo Offers | ಇಂಡಿಗೋ ಪ್ರಯಾಣಿಕರಿಗೆ ಭರ್ಜರಿ ಆಫರ್; ಕೇವಲ 915 ರೂ.ಗೆ ವಿಮಾನದ ಟಿಕೆಟ್!

Indigo Flight Ticket Sale: 2021ರ ಸೆಪ್ಟೆಂಬರ್ 1 ಮತ್ತು 2022ರ ಮಾರ್ಚ್ 22ರವರೆಗೆ ಇಂಡಿಗೋದಲ್ಲಿ ಪ್ರಯಾಣ ಮಾಡುವ ಅದೃಷ್ಟಶಾಲಿ ಪ್ರಯಾಣಿಕರಿಗೆ 915 ರೂ.ಗೆ ಟಿಕೆಟ್ ಲಭ್ಯವಾಗಲಿದೆ

Indigo Offers | ಇಂಡಿಗೋ ಪ್ರಯಾಣಿಕರಿಗೆ ಭರ್ಜರಿ ಆಫರ್; ಕೇವಲ 915 ರೂ.ಗೆ ವಿಮಾನದ ಟಿಕೆಟ್!
ಸಂಗ್ರಹ ಚಿತ್ರ
TV9 Web
| Edited By: |

Updated on: Aug 04, 2021 | 7:36 PM

Share

ನವದೆಹಲಿ: ಇಂಡಿಗೋ ವಿಮಾನದ ಪ್ರಯಾಣಿಕರಿಗೆ ಗುಡ್​ ನ್ಯೂಸ್ ಒಂದು ಇಲ್ಲಿದೆ. 15ನೇ ವರ್ಷದ ಸಂಭ್ರಮದಲ್ಲಿರುವ ಇಂಡಿಗೋ ಏರ್​ಲೈನ್ಸ್​ ತನ್ನ ಪ್ರಯಾಣಿಕರಿಗೆ ಭರ್ಜರಿ ಆಫರ್ ಒಂದನ್ನು ಘೋಷಿಸಿದೆ. ಕೇವಲ 915 ರೂ.ಗೆ ಟಿಕೆಟ್ ಬುಕ್ ಮಾಡುವ ಅವಕಾಶ ನೀಡಿದೆ. 2021ರ ಸೆಪ್ಟೆಂಬರ್ 1 ಮತ್ತು 2022ರ ಮಾರ್ಚ್ 22ರವರೆಗೆ ಇಂಡಿಗೋದಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರು ಈ ಟಿಕೆಟ್ ಅನ್ನು ಖರೀದಿಸಬಹುದು. ತನ್ನ 15ನೇ ವರ್ಷದ ವಾರ್ಷಿಕೋತ್ಸವದ ನೆನಪಿಗಾಗಿ ಮೂರು ದಿನಗಳ ಕಾಲ ಭರ್ಜರಿ ಸೇಲ್ ಹಾಕಿದೆ.

ಇಂದಿನಿಂದ ಆಗಸ್ಟ್ 6ರವರೆಗೆ ಈ ರಿಯಾಯಿತಿ ದರದ ಟಿಕೆಟ್ ಅನ್ನು ಇಂಡಿಗೋ ಮಾರಾಟ ಮಾಡಲಿದೆ. ಅದೃಷ್ಟಶಾಲಿ ಪ್ರಯಾಣಿಕರಿಗೆ 915 ರೂ. ಟಿಕೆಟ್ ಲಭ್ಯವಾಗಲಿದೆ. ಹೆಚ್ಚುವರಿಯಾಗಿ, ಫಾಸ್ಟ್ ಫಾರ್ವರ್ಡ್, 6 ಇ-ಫ್ಲೆಕ್ಸ್, 6-ಇ ಸೇರಿದಂತೆ 6E ಆಡ್-ಆನ್​ಗಳು ಬ್ಯಾಗ್​ಪೋರ್ಟ್ ಅನ್ನು 315 ರೂ.ಗಳಲ್ಲಿ ನೀಡಲಾಗುವುದು. ಈ ಆಫರ್ ಡೊಮೆಸ್ಟಿಕ್ ವಿಮಾನ ಪ್ರಯಾಣಕ್ಕೆ ಮಾತ್ರ ಅನ್ವಯವಾಗಲಿದೆ. ಪ್ರಯಾಣಿಕರು ಎಲ್ಲಿಂದ ಎಲ್ಲಿಗೆ ಪ್ರಯಾಣಿಸುತ್ತಾರೆ, ಯಾವ ಕ್ಲಾಸ್​ನಲ್ಲಿ ಪ್ರಯಾಣಿಸುತ್ತಾರೆ ಎಂಬುದರ ಆಧಾರದಲ್ಲಿ ಬೆಲೆಯಲ್ಲೂ ಬದಲಾವಣೆಯಾಗಲಿದೆ.

ಏರ್​ಲೈನ್ಸ್ ವೆಬ್​ಸೈಟ್ ಅಥವಾ ಮೊಬೈಲ್ ಆ್ಯಪ್ ಮೂಲಕ ಇಂಡಿಗೋ ವಿಮಾನದ ಟಿಕೆಟ್ ಬುಕ್ ಮಾಡಿದರೆ ಶೇ. 5ರಷ್ಟು ಕ್ಯಾಶ್​ಬ್ಯಾಕ್ ಕೂಡ ಸಿಗಲಿದೆ. ಹಾಗೇ ಹೆಚ್​ಎಸ್​ಬಿಸಿ ಕ್ರೆಡಿಟ್ ಕಾರ್ಡ್ ಮೂಲಕ ಟಿಕೆಟ್ ಬುಕ್ ಮಾಡಿದರೆ ಶೇ. 5ರಷ್ಟು ಕ್ಯಾಶ್​ಬ್ಯಾಕ್ ಸಿಗಲಿದೆ. ಈ ಆಫರ್ ಗರಿಷ್ಟ 30,000 ರೂ.ವರೆಗಿನ ಟಿಕೆಟ್ ಬುಕಿಂಗ್​ಗೆ ಕ್ಯಾಶ್​ಬ್ಯಾಕ್ ಸಿಗಲಿದೆ ಎಂದು ಇಂಡಿಗೋ ವಿಮಾನ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Indigo plane: ಹುಬ್ಬಳ್ಳಿಯಲ್ಲಿ ಇಳಿಯುವಾಗ ಇಂಡಿಗೋ ವಿಮಾನದ ಟೈರ್​ ಪಂಕ್ಚರ್; ಪ್ರಯಾಣಿಕರು ಸುರಕ್ಷಿತ

Air India Flight: ವಿಮಾನದ ಕಿಟಕಿಯಲ್ಲಿ ಬಿರುಕು; ಸೌದಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್​ ತುರ್ತು ಭೂಸ್ಪರ್ಶ

(Indigo airfare sale Indigo Special Offers Flight Ticket from 915 Rupees in sale on 15th birthday)

Follow Us
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು