AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ವಿಮಾನದಲ್ಲಿ ಎಸಿ ಆನ್​ ಮಾಡಲಿಲ್ಲ, ಬೆವರು ಒರೆಸಿಕೊಳ್ಳಿ ಎಂದು ಟಿಶ್ಯೂ ಕೊಟ್ಟಿದ್ರು: ಕಾಂಗ್ರೆಸ್ ನಾಯಕ

ಪಂಜಾಬ್​ನ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ತಮಗೆ ಇಂಡಿಗೋ(IndiGo) ವಿಮಾನದಲ್ಲಾದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಅವರು ಚಂಡೀಗಢದಿಂದ ಜೈಪುರಕ್ಕೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಿದ್ದಾರೆ,

ಇಂಡಿಗೋ ವಿಮಾನದಲ್ಲಿ ಎಸಿ ಆನ್​ ಮಾಡಲಿಲ್ಲ, ಬೆವರು ಒರೆಸಿಕೊಳ್ಳಿ ಎಂದು ಟಿಶ್ಯೂ ಕೊಟ್ಟಿದ್ರು: ಕಾಂಗ್ರೆಸ್ ನಾಯಕ
ವಿಮಾನImage Credit source: India Today
ನಯನಾ ರಾಜೀವ್
|

Updated on: Aug 06, 2023 | 9:36 AM

Share

ಪಂಜಾಬ್​ನ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ತಮಗೆ ಇಂಡಿಗೋ(IndiGo) ವಿಮಾನದಲ್ಲಾದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಅವರು ಚಂಡೀಗಢದಿಂದ ಜೈಪುರಕ್ಕೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಿದ್ದಾರೆ, ವಿಮಾನದಲ್ಲಿ ಎಸಿ ಇರಲಿಲ್ಲ, ವಿಮಾನ ಸಿಬ್ಬಂದಿ ಬೆವರು ಒರೆಸಿಕೊಳ್ಳಲು ಪ್ರಯಾಣಿಕರಿಗೆ ಟಿಶ್ಯೂ ನೀಡಿದ್ದರು ಎಂದು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ. ಈ 90 ನಿಮಿಷಗಳ ಪ್ರಯಾಣ ಅತ್ಯಂತ ಭಯಾನಕವಾಗಿತ್ತು ಎಂದು ಹೇಳಿಕೊಂಡಿದ್ದಾರೆ.

ಈ ಬಗ್ಗೆ ದೂರಿದ ಕಾಂಗ್ರೆಸ್ ಮುಖಂಡರು, ಮೊದಲು ಪ್ರಯಾಣಿಕರನ್ನು ಬಿಸಿಲಿನ ತಾಪದಲ್ಲಿ ಸುಮಾರು 10-15 ನಿಮಿಷಗಳ ಕಾಲ ಸರದಿಯಲ್ಲಿ ಕಾಯುವಂತೆ ಮಾಡಲಾಯಿತು ಮತ್ತು ನಂತರ ಎಸಿಗಳು ಆನ್ ಮಾಡದೆಯೇ ವಿಮಾನ ಟೇಕ್ ಆಫ್ ಆಯಿತು ಎಂದು ಹೇಳಿದರು. ಟೇಕ್‌ಆಫ್‌ನಿಂದ ಲ್ಯಾಂಡಿಂಗ್‌ವರೆಗೆ, AC ಗಳು ಆಫ್ ಆಗಿದ್ದವು ಮತ್ತು ಎಲ್ಲಾ ಪ್ರಯಾಣಿಕರು ಕಷ್ಟ ಪಡುವಂತಾಗಿತ್ತು.

ಮತ್ತಷ್ಟು ಓದಿ: IndiGO Flight: ಪಾಟ್ನಾದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ವೀಡಿಯೋದಲ್ಲಿ ಪ್ರಯಾಣಿಕರಿಗೆ ಟಿಶ್ಯೂ ಪೇಪರ್ ಕೊಡುತ್ತಿರುವುದನ್ನು ಕಾಣಬಹುದು. ಸಿಂಗ್ ಅವರು ನಾಗರಿಕ ವಿಮಾನಯಾನ ನಿರ್ದೇಶನಾಲಯ ಹಾಗೂ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವನ್ನು ಟ್ಯಾಗ್ ಮಾಡಿ, ವಿಮಾನಯಾನ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ವಾರದಲ್ಲಿ ಎರಡನೇ ಬಾರಿ ಇಂತಹ ಘಟನೆ ನಡೆದಿದೆ, ದೆಹಲಿಗೆ ಹಾರುತ್ತಿದ್ದ ಇಂಡಿಗೋ ವಿಮಾನದ ಇಂಜಿನ್‌ನಲ್ಲಿ ದೋಷ ಕಾಣಿಸಿಕೊಂಡ ಕಾರಣ ಶುಕ್ರವಾರ ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ವಿಮಾನ ಟೇಕ್ ಆಫ್ ಆದ ಕೇವಲ ಮೂರು ನಿಮಿಷಗಳ ನಂತರ ಈ ಘಟನೆ ಸಂಭವಿಸಿದೆ. ಪಾಟ್ನಾದ ಜಯಪ್ರಕಾಶ್ ನಾರಾಯಣ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 9.11ರ ಸುಮಾರಿಗೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ