AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಸಿ ಬಾಂಬ್ ಕರೆ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರನ್​ವೇನಿಂದ ಹಿಂದಿರುಗಿದ ಇಂಡಿಗೋ ವಿಮಾನ

ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ನಿಲ್ದಾಣದ ರನ್​ವೇನಿಂದ ವಾಪಸ್ ಕರೆಸಲಾಗಿದೆ. ಪ್ರಯಾಣಿಕರು ವಿಮಾನದೊಳಗೆ ಕುಳಿತಿದ್ದರು, ಅವರನ್ನು ವಿಮಾನದಿಂದ ಇಳಿಸಿ, ಅವರ ಲಗೇಜ್​ಗಳನ್ನು ಗೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಿ ಸಂಪೂರ್ಣ ಹುಡುಕಾಟ ನಡೆಸಿದಾಗ ಸುಳ್ಳು ಎಂಬುದು ತಿಳಿದುಬಂದಿದೆ. ಮಧ್ಯಾಹ್ನ 1 ಗಂಟೆಯ ಮೊದಲು, ವಿಮಾನವು ಬೆಂಗಳೂರಿಗೆ ಹೊರಟಿತು.

ಹುಸಿ ಬಾಂಬ್ ಕರೆ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರನ್​ವೇನಿಂದ ಹಿಂದಿರುಗಿದ ಇಂಡಿಗೋ ವಿಮಾನ
ವಿಮಾನImage Credit source: Siasat.com
ನಯನಾ ರಾಜೀವ್
|

Updated on: Aug 28, 2023 | 2:53 PM

Share

ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ನಿಲ್ದಾಣದ ರನ್​ವೇನಿಂದ ವಾಪಸ್ ಕರೆಸಲಾಗಿದೆ. ಪ್ರಯಾಣಿಕರು ವಿಮಾನದೊಳಗೆ ಕುಳಿತಿದ್ದರು, ಅವರನ್ನು ವಿಮಾನದಿಂದ ಇಳಿಸಿ, ಅವರ ಲಗೇಜ್​ಗಳನ್ನು ಗೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಿ ಸಂಪೂರ್ಣ ಹುಡುಕಾಟ ನಡೆಸಿದಾಗ ಸುಳ್ಳು ಎಂಬುದು ತಿಳಿದುಬಂದಿದೆ. ಮಧ್ಯಾಹ್ನ 1 ಗಂಟೆಯ ಮೊದಲು, ವಿಮಾನವು ಬೆಂಗಳೂರಿಗೆ ಹೊರಟಿತು.

ಇಂಡಿಗೋ ವಿಮಾನವು ಕೊಚ್ಚಿಯಿಂದ ಬೆಂಗಳೂರಿಗೆ ಹೊರಟಿದ್ದಾಗ ಬಾಂಬ್ ಬೆದರಿಕೆ ಬಂದಿತ್ತು. ಬೆದರಿಕೆ ಕರೆ ಬಂದ ಕೂಡಲೇ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ವಿಮಾನವನ್ನು ತಪಾಸಣೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

6E6482 ವಿಮಾನವು ಬೆಳಗ್ಗೆ 10.30ಕ್ಕೆ ಬೆಂಗಳೂರಿಗೆ ಹೊರಡಬೇಕಿತ್ತು, ಬಾಂಬ್ ಬೆದರಿಕೆ ಬಂದಿತ್ತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸೋಮವಾರ ಬೆಂಗಳೂರಿಗೆ ಹೋಗುವ ಇಂಡಿಗೋ ವಿಮಾನಕ್ಕೆ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ಪಿಟಿಐಗೆ ತಿಳಿಸಿವೆ.

ಮತ್ತಷ್ಟು ಓದಿ: ಬೆಂಗಳೂರು: ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್, ವಿಮಾನದ ಟಾಯ್ಲೆಟ್ ನಲ್ಲಿ ಸಿಕ್ಕ ಟಿಶ್ಯೂ ಪೇಪರ್ ಮೇಲೆ ಗೀಚಿದ ಬರಹದಿಂದ ಅವಾಂತರ!

ಇಂಡಿಗೋ ವಿಮಾನ 6E6482 ಕೊಚ್ಚಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಮಾಡಲು ತಯಾರಿ ನಡೆಸುತ್ತಿದ್ದಾಗ ಸುಮಾರು ಬೆಳಗ್ಗೆ 10.30ರ ವೇಳೆಗೆ ಕರೆ ಬಂದಿತ್ತು. ಬಾಂಬ್ ಬೆದರಿಕೆ ವರದಿಯಾದ ಕೂಡಲೇ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರು ಜಂಟಿ ತನಿಖೆ ನಡೆಸಿದ್ದು, ವಿಮಾನದೊಳಗೆ ಸಂಪೂರ್ಣ ಶೋಧ ನಡೆಸಲಾಗಿದೆ. ಆದರೆ, ನಂತರ ಅಧಿಕಾರಿಗಳು ಬಾಂಬ್ ಬೆದರಿಕೆ ಸುಳ್ಳು ಎಂದು ಖಚಿತಪಡಿಸಿದರು. ಸುಮಾರು ಮೂರು ಗಂಟೆಗಳ ಕಾಲ ತಡವಾಗಿ ಇಂಡಿಗೋ ವಿಮಾನವು ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿಗೆ ಹೊರಟಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ