AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಸಿ ಬಾಂಬ್ ಕರೆ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರನ್​ವೇನಿಂದ ಹಿಂದಿರುಗಿದ ಇಂಡಿಗೋ ವಿಮಾನ

ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ನಿಲ್ದಾಣದ ರನ್​ವೇನಿಂದ ವಾಪಸ್ ಕರೆಸಲಾಗಿದೆ. ಪ್ರಯಾಣಿಕರು ವಿಮಾನದೊಳಗೆ ಕುಳಿತಿದ್ದರು, ಅವರನ್ನು ವಿಮಾನದಿಂದ ಇಳಿಸಿ, ಅವರ ಲಗೇಜ್​ಗಳನ್ನು ಗೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಿ ಸಂಪೂರ್ಣ ಹುಡುಕಾಟ ನಡೆಸಿದಾಗ ಸುಳ್ಳು ಎಂಬುದು ತಿಳಿದುಬಂದಿದೆ. ಮಧ್ಯಾಹ್ನ 1 ಗಂಟೆಯ ಮೊದಲು, ವಿಮಾನವು ಬೆಂಗಳೂರಿಗೆ ಹೊರಟಿತು.

ಹುಸಿ ಬಾಂಬ್ ಕರೆ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರನ್​ವೇನಿಂದ ಹಿಂದಿರುಗಿದ ಇಂಡಿಗೋ ವಿಮಾನ
ವಿಮಾನImage Credit source: Siasat.com
ನಯನಾ ರಾಜೀವ್
|

Updated on: Aug 28, 2023 | 2:53 PM

Share

ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ನಿಲ್ದಾಣದ ರನ್​ವೇನಿಂದ ವಾಪಸ್ ಕರೆಸಲಾಗಿದೆ. ಪ್ರಯಾಣಿಕರು ವಿಮಾನದೊಳಗೆ ಕುಳಿತಿದ್ದರು, ಅವರನ್ನು ವಿಮಾನದಿಂದ ಇಳಿಸಿ, ಅವರ ಲಗೇಜ್​ಗಳನ್ನು ಗೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಿ ಸಂಪೂರ್ಣ ಹುಡುಕಾಟ ನಡೆಸಿದಾಗ ಸುಳ್ಳು ಎಂಬುದು ತಿಳಿದುಬಂದಿದೆ. ಮಧ್ಯಾಹ್ನ 1 ಗಂಟೆಯ ಮೊದಲು, ವಿಮಾನವು ಬೆಂಗಳೂರಿಗೆ ಹೊರಟಿತು.

ಇಂಡಿಗೋ ವಿಮಾನವು ಕೊಚ್ಚಿಯಿಂದ ಬೆಂಗಳೂರಿಗೆ ಹೊರಟಿದ್ದಾಗ ಬಾಂಬ್ ಬೆದರಿಕೆ ಬಂದಿತ್ತು. ಬೆದರಿಕೆ ಕರೆ ಬಂದ ಕೂಡಲೇ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ವಿಮಾನವನ್ನು ತಪಾಸಣೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

6E6482 ವಿಮಾನವು ಬೆಳಗ್ಗೆ 10.30ಕ್ಕೆ ಬೆಂಗಳೂರಿಗೆ ಹೊರಡಬೇಕಿತ್ತು, ಬಾಂಬ್ ಬೆದರಿಕೆ ಬಂದಿತ್ತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸೋಮವಾರ ಬೆಂಗಳೂರಿಗೆ ಹೋಗುವ ಇಂಡಿಗೋ ವಿಮಾನಕ್ಕೆ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ಪಿಟಿಐಗೆ ತಿಳಿಸಿವೆ.

ಮತ್ತಷ್ಟು ಓದಿ: ಬೆಂಗಳೂರು: ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್, ವಿಮಾನದ ಟಾಯ್ಲೆಟ್ ನಲ್ಲಿ ಸಿಕ್ಕ ಟಿಶ್ಯೂ ಪೇಪರ್ ಮೇಲೆ ಗೀಚಿದ ಬರಹದಿಂದ ಅವಾಂತರ!

ಇಂಡಿಗೋ ವಿಮಾನ 6E6482 ಕೊಚ್ಚಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಮಾಡಲು ತಯಾರಿ ನಡೆಸುತ್ತಿದ್ದಾಗ ಸುಮಾರು ಬೆಳಗ್ಗೆ 10.30ರ ವೇಳೆಗೆ ಕರೆ ಬಂದಿತ್ತು. ಬಾಂಬ್ ಬೆದರಿಕೆ ವರದಿಯಾದ ಕೂಡಲೇ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರು ಜಂಟಿ ತನಿಖೆ ನಡೆಸಿದ್ದು, ವಿಮಾನದೊಳಗೆ ಸಂಪೂರ್ಣ ಶೋಧ ನಡೆಸಲಾಗಿದೆ. ಆದರೆ, ನಂತರ ಅಧಿಕಾರಿಗಳು ಬಾಂಬ್ ಬೆದರಿಕೆ ಸುಳ್ಳು ಎಂದು ಖಚಿತಪಡಿಸಿದರು. ಸುಮಾರು ಮೂರು ಗಂಟೆಗಳ ಕಾಲ ತಡವಾಗಿ ಇಂಡಿಗೋ ವಿಮಾನವು ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿಗೆ ಹೊರಟಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ