AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷ: ಲೇಹ್​​ಗೆ ಹೊರಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ದೆಹಲಿ(Delhi)ಯಿಂದ ಲೇಹ್​ಗೆ ಹೊರಟಿದ್ದ ಇಂಡಿಗೋ(IndiGo) ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ದೆಹಲಿಯಲ್ಲೇ ತುರ್ತು ಭೂಸ್ಪರ್ಶ ಮಾಡಲಾಗಿದೆ. ಇಂಡಿಗೋ ವಿಮಾನ 6E 2006 ಗುರುವಾರ ದೆಹಲಿಯಿಂದ ಲೇಹ್‌ಗೆ ಹೊರಟಿತ್ತು.ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಮಾನದಲ್ಲಿ 180 ಪ್ರಯಾಣಿಕರಿದ್ದರು. ಎಲ್ಲರೂ ಸುರಕ್ಷಿತವಾಗಿದ್ದಾರೆ.

ತಾಂತ್ರಿಕ ದೋಷ: ಲೇಹ್​​ಗೆ ಹೊರಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ
ಇಂಡಿಗೋ Image Credit source: Hindustan Times
ನಯನಾ ರಾಜೀವ್
|

Updated on: Jun 19, 2025 | 10:27 AM

Share

ನವದೆಹಲಿ, ಜೂನ್ 19: ದೆಹಲಿ(Delhi)ಯಿಂದ ಲೇಹ್​ಗೆ ಹೊರಟಿದ್ದ ಇಂಡಿಗೋ(IndiGo) ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ದೆಹಲಿಯಲ್ಲೇ ತುರ್ತು ಭೂಸ್ಪರ್ಶ ಮಾಡಲಾಗಿದೆ. ಇಂಡಿಗೋ ವಿಮಾನ 6E 2006 ಗುರುವಾರ ದೆಹಲಿಯಿಂದ ಲೇಹ್‌ಗೆ ಹೊರಟಿತ್ತು.ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಮಾನದಲ್ಲಿ 180 ಪ್ರಯಾಣಿಕರಿದ್ದರು, ಎಲ್ಲರೂ ಸುರಕ್ಷಿತವಾಗಿದ್ದಾರೆ.

ವಿಮಾನ ತುರ್ತು ಭೂಸ್ಪರ್ಶದ ನಂತರ, ಇಂಡಿಗೋದಿಂದ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ವಿಮಾನದಲ್ಲಿ ಯಾವ ತಾಂತ್ರಿಕ ದೋಷ ಕಂಡುಬಂದಿದೆ ಎಂಬುದರ ಕುರಿತು ಇಂಡಿಗೋ ಇನ್ನೂ ಯಾವುದೇ ಮಾಹಿತಿಯನ್ನು ನೀಡಿಲ್ಲ.

ಕೊಚ್ಚಿ-ದೆಹಲಿ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಜೂನ್ 17 ರ ಮಂಗಳವಾರ, ಕೊಚ್ಚಿಯಿಂದ ದೆಹಲಿಗೆ ಹೋಗುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಬಾಂಬ್ ಬೆದರಿಕೆ ಬಂದ ನಂತರ, ವಿಮಾನವನ್ನು ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಬೆಳಗ್ಗೆ 9.31ಕ್ಕೆ ಕೊಚ್ಚಿಯಿಂದ ವಿಮಾನ ಹೊರಟ ಕೂಡಲೇ ವಿಮಾನಯಾನ ಸಂಸ್ಥೆಯ ಅಧಿಕೃತ ಐಡಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿತ್ತು. ಈ ಸಮಯದಲ್ಲಿ ವಿಮಾನವು ಮಸ್ಕತ್‌ನಿಂದ ಕೊಚ್ಚಿ ತಲುಪಿತ್ತು. ನಂತರ ಅದು ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು. ವಿಮಾನದಲ್ಲಿ 157 ಪ್ರಯಾಣಿಕರು ಮತ್ತು 6 ಸಿಬ್ಬಂದಿ ಇದ್ದರು.

ಹಾರಾಟದ ಸಮಯದಲ್ಲಿ ಪ್ರಕ್ಷುಬ್ಧತೆಯ ಅನುಭವ ಜೂನ್ 16 ರಂದು, ಗೋವಾದಿಂದ ಲಕ್ನೋಗೆ ಹೊರಟಿದ್ದ ಇಂಡಿಗೋ ವಿಮಾನವು ಹವಾಮಾನ ಬದಲಾವಣೆಯಿಂದಾಗಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತು ಎನ್ನುವ ಮಾಹಿತಿ ಲಭ್ಯವಾಗಿದೆ. ಆದಾಗ್ಯೂ, ವಿಮಾನವು ಸುರಕ್ಷಿತವಾಗಿ ಇಳಿಯಿತು ಎಂದು ವಿಮಾನಯಾನ ಸಂಸ್ಥೆ ದೃಢಪಡಿಸಿತು. ಬಲವಾದ ಗಾಳಿಯಿಂದ ವಿಮಾನದಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದರು.

ಮತ್ತಷ್ಟು ಓದಿ: ಬಾಂಬ್ ಬೆದರಿಕೆ: ಕೊಚ್ಚಿಯಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಬುಧವಾರ ತಾಂತ್ರಿಕ ದೋಷ ಉಂಟಾಗಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ದೆಹಲಿ-ರಾಯ್‌ಪುರ ಇಂಡಿಗೊ ವಿಮಾನದ ಬಾಗಿಲು ಜಾಮ್ ಆಗಿ ಸುಮಾರು 40 ನಿಮಿಷಗಳ ಕಾಲ ಪ್ರಯಾಣಿಕರು ವಿಮಾನದೊಳಗೆ ಸಿಲುಕಿಕೊಂಡಿದ್ದರು.

ಮಧ್ಯಾಹ್ನ 2.25 ಕ್ಕೆ ನಿಗದಿತ ಸಮಯಕ್ಕೆ ಇಳಿದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ವಿಮಾನದ ನಿರ್ಗಮನ ದ್ವಾರ ಜಾಮ್ ಆಗಿ, ಇಳಿಯುವ ಪ್ರಕ್ರಿಯೆ ವಿಳಂಬವಾಯಿತು. ಲ್ಯಾಂಡಿಂಗ್ ಸರಾಗವಾಗಿ ನಡೆದರೂ, ಪ್ರಯಾಣಿಕರು ಅರ್ಧ ಗಂಟೆಗೂ ಹೆಚ್ಚು ಕಾಲ ಕ್ಯಾಬಿನ್‌ನಲ್ಲಿ ಕುಳಿತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ