AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷ: ಲೇಹ್​​ಗೆ ಹೊರಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ದೆಹಲಿ(Delhi)ಯಿಂದ ಲೇಹ್​ಗೆ ಹೊರಟಿದ್ದ ಇಂಡಿಗೋ(IndiGo) ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ದೆಹಲಿಯಲ್ಲೇ ತುರ್ತು ಭೂಸ್ಪರ್ಶ ಮಾಡಲಾಗಿದೆ. ಇಂಡಿಗೋ ವಿಮಾನ 6E 2006 ಗುರುವಾರ ದೆಹಲಿಯಿಂದ ಲೇಹ್‌ಗೆ ಹೊರಟಿತ್ತು.ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಮಾನದಲ್ಲಿ 180 ಪ್ರಯಾಣಿಕರಿದ್ದರು. ಎಲ್ಲರೂ ಸುರಕ್ಷಿತವಾಗಿದ್ದಾರೆ.

ತಾಂತ್ರಿಕ ದೋಷ: ಲೇಹ್​​ಗೆ ಹೊರಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ
ಇಂಡಿಗೋ Image Credit source: Hindustan Times
Follow us
ನಯನಾ ರಾಜೀವ್
|

Updated on: Jun 19, 2025 | 10:27 AM

ನವದೆಹಲಿ, ಜೂನ್ 19: ದೆಹಲಿ(Delhi)ಯಿಂದ ಲೇಹ್​ಗೆ ಹೊರಟಿದ್ದ ಇಂಡಿಗೋ(IndiGo) ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ದೆಹಲಿಯಲ್ಲೇ ತುರ್ತು ಭೂಸ್ಪರ್ಶ ಮಾಡಲಾಗಿದೆ. ಇಂಡಿಗೋ ವಿಮಾನ 6E 2006 ಗುರುವಾರ ದೆಹಲಿಯಿಂದ ಲೇಹ್‌ಗೆ ಹೊರಟಿತ್ತು.ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಮಾನದಲ್ಲಿ 180 ಪ್ರಯಾಣಿಕರಿದ್ದರು, ಎಲ್ಲರೂ ಸುರಕ್ಷಿತವಾಗಿದ್ದಾರೆ.

ವಿಮಾನ ತುರ್ತು ಭೂಸ್ಪರ್ಶದ ನಂತರ, ಇಂಡಿಗೋದಿಂದ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ವಿಮಾನದಲ್ಲಿ ಯಾವ ತಾಂತ್ರಿಕ ದೋಷ ಕಂಡುಬಂದಿದೆ ಎಂಬುದರ ಕುರಿತು ಇಂಡಿಗೋ ಇನ್ನೂ ಯಾವುದೇ ಮಾಹಿತಿಯನ್ನು ನೀಡಿಲ್ಲ.

ಕೊಚ್ಚಿ-ದೆಹಲಿ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಜೂನ್ 17 ರ ಮಂಗಳವಾರ, ಕೊಚ್ಚಿಯಿಂದ ದೆಹಲಿಗೆ ಹೋಗುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಬಾಂಬ್ ಬೆದರಿಕೆ ಬಂದ ನಂತರ, ವಿಮಾನವನ್ನು ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಬೆಳಗ್ಗೆ 9.31ಕ್ಕೆ ಕೊಚ್ಚಿಯಿಂದ ವಿಮಾನ ಹೊರಟ ಕೂಡಲೇ ವಿಮಾನಯಾನ ಸಂಸ್ಥೆಯ ಅಧಿಕೃತ ಐಡಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿತ್ತು. ಈ ಸಮಯದಲ್ಲಿ ವಿಮಾನವು ಮಸ್ಕತ್‌ನಿಂದ ಕೊಚ್ಚಿ ತಲುಪಿತ್ತು. ನಂತರ ಅದು ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು. ವಿಮಾನದಲ್ಲಿ 157 ಪ್ರಯಾಣಿಕರು ಮತ್ತು 6 ಸಿಬ್ಬಂದಿ ಇದ್ದರು.

ಹಾರಾಟದ ಸಮಯದಲ್ಲಿ ಪ್ರಕ್ಷುಬ್ಧತೆಯ ಅನುಭವ ಜೂನ್ 16 ರಂದು, ಗೋವಾದಿಂದ ಲಕ್ನೋಗೆ ಹೊರಟಿದ್ದ ಇಂಡಿಗೋ ವಿಮಾನವು ಹವಾಮಾನ ಬದಲಾವಣೆಯಿಂದಾಗಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತು ಎನ್ನುವ ಮಾಹಿತಿ ಲಭ್ಯವಾಗಿದೆ. ಆದಾಗ್ಯೂ, ವಿಮಾನವು ಸುರಕ್ಷಿತವಾಗಿ ಇಳಿಯಿತು ಎಂದು ವಿಮಾನಯಾನ ಸಂಸ್ಥೆ ದೃಢಪಡಿಸಿತು. ಬಲವಾದ ಗಾಳಿಯಿಂದ ವಿಮಾನದಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದರು.

ಮತ್ತಷ್ಟು ಓದಿ: ಬಾಂಬ್ ಬೆದರಿಕೆ: ಕೊಚ್ಚಿಯಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಬುಧವಾರ ತಾಂತ್ರಿಕ ದೋಷ ಉಂಟಾಗಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ದೆಹಲಿ-ರಾಯ್‌ಪುರ ಇಂಡಿಗೊ ವಿಮಾನದ ಬಾಗಿಲು ಜಾಮ್ ಆಗಿ ಸುಮಾರು 40 ನಿಮಿಷಗಳ ಕಾಲ ಪ್ರಯಾಣಿಕರು ವಿಮಾನದೊಳಗೆ ಸಿಲುಕಿಕೊಂಡಿದ್ದರು.

ಮಧ್ಯಾಹ್ನ 2.25 ಕ್ಕೆ ನಿಗದಿತ ಸಮಯಕ್ಕೆ ಇಳಿದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ವಿಮಾನದ ನಿರ್ಗಮನ ದ್ವಾರ ಜಾಮ್ ಆಗಿ, ಇಳಿಯುವ ಪ್ರಕ್ರಿಯೆ ವಿಳಂಬವಾಯಿತು. ಲ್ಯಾಂಡಿಂಗ್ ಸರಾಗವಾಗಿ ನಡೆದರೂ, ಪ್ರಯಾಣಿಕರು ಅರ್ಧ ಗಂಟೆಗೂ ಹೆಚ್ಚು ಕಾಲ ಕ್ಯಾಬಿನ್‌ನಲ್ಲಿ ಕುಳಿತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!