AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ, ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ

ಇಂಡಿಗೋ ವಿಮಾನದ ಶೌಚಾಲಯದೊಳಗೆ ಬೀಡಿ ಸೇದಿದ ಆರೋಪದ ಮೇಲೆ 42 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ದೆಹಲಿ-ಮುಂಬೈ-ರಿಯಾದ್ ವಿಮಾನ ಲ್ಯಾಂಡ್ ಆದ ಬಳಿಕ ಕ್ಯಾಬಿನ್ ಸಿಬ್ಬಂದಿ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇಂಡಿಗೋ ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ, ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ
ಇಂಡಿಗೋ ವಿಮಾನImage Credit source: Travel News
ನಯನಾ ರಾಜೀವ್
|

Updated on:Mar 06, 2024 | 10:30 AM

Share

ಇಂಡಿಗೋ ವಿಮಾನ(IndiGo)ದಲ್ಲಿ ಬೀಡಿ ಸೇದಿದ ಆರೋಪದ ಮೇಲೆ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಇಂಡಿಗೋ ವಿಮಾನದಲ್ಲಿ ದೆಹಲಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಮೊಹಮ್ಮದ್ ಫಕ್ರುದ್ದೀನ್ ಮೊಹಮ್ಮದ್ ಅಮ್ರುದ್ದೀನ್ ಎಂದು ಗುರುತಿಸಲಾದ ಪ್ರಯಾಣಿಕರು ಶೌಚಾಲಯದೊಳಗೆ ಬೀಡಿ ಸೇದುತ್ತಿದ್ದರು.

ಬೀಡಿಯ ತೀವ್ರ ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಶೌಚಾಲಯದೊಳಗೆ ಬೀಡಿ ಪತ್ತೆಯಾಗಿದೆ. ವಿಚಾರಣೆಗೆ ಒಳಪಡಿಸಿದಾಗ, ಅಮೃದ್ದೀನ್ ತಾನು ಬೀಡಿ ಸೇದುತ್ತಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ ಮತ್ತು ವಿಮಾನ ಮುಂಬೈಗೆ ಬಂದಿಳಿದಾಗ ಸಹರ್ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಐಪಿಸಿಯ ಸೆಕ್ಷನ್ 336 ಮತ್ತು ಏರ್‌ಕ್ರಾಫ್ಟ್ ಆಕ್ಟ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ತಾನು ರಿಯಾದ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದೇನೆ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ವಿಚಾರಣೆ ವೇಳೆ ಆತ ತನ್ನ ಪ್ಯಾಂಟ್ ಜೇಬಿನಲ್ಲಿ ಬೀಡಿ ಮತ್ತು ಲೈಟರ್ ಬಚ್ಚಿಟ್ಟಿದ್ದಾಗಿ ತಿಳಿಸಿದ್ದಾನೆ. ಇದೇ ರೀತಿಯ ಘಟನೆಯಲ್ಲಿ, ಕಳೆದ ವರ್ಷ ಮೇ ತಿಂಗಳಲ್ಲಿ ವಿಮಾನದಲ್ಲಿ ಬೀಡಿ ಸೇದುತ್ತಿದ್ದ 56 ವರ್ಷದ ವ್ಯಕ್ತಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

ಮತ್ತಷ್ಟು ಓದಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡಿ ಬೇಕೆಂದು ವ್ಯಕ್ತಿ ರಂಪಾಟ; ವಿಡಿಯೋ ನೋಡಿ

ರಾಜಸ್ಥಾನದ ಮಾರ್ವಾರ್ ಪ್ರದೇಶದ ಪ್ರವೀಣ್ ಕುಮಾರ್ ಎಂಬ ವ್ಯಕ್ತಿ ಅಹಮದಾಬಾದ್‌ನಿಂದ ಆಕಾಶ ಏರ್ ವಿಮಾನವನ್ನು ಹತ್ತಿದ್ದರು ಮತ್ತು ಏರ್‌ಲೈನ್‌ನ ಸಿಬ್ಬಂದಿಯು ಪ್ರಯಾಣಿಕರ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿರುವುದು ಕಂಡರು, ತಾನು ಮೊದಲ ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದೇನೆ ನನಗೆ ನಿಯಮಗಳು ತಿಳಿದಿಲ್ಲ ಎಂದು ಆತ ಪೊಲೀಸರಿಗೆ ಹೇಳಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:29 am, Wed, 6 March 24

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ