Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ವಿಮಾನ ಬೆಂಗಳೂರಿಗೆ ಟೇಕ್​ ಆಫ್​ ಆಗುವ ಹೊತ್ತಲ್ಲಿ ಎಮರ್ಜೆನ್ಸಿ ಎಕ್ಸಿಟ್ ತೆರೆದ ಪ್ರಯಾಣಿಕ

ಇಂಡಿಗೋ ವಿಮಾನವು ರಾಜಸ್ಥಾನದಿಂದ ಬೆಂಗಳೂರಿಗೆ ಟೇಕ್​ ಆಫ್ ಆಗುವ ಹೊತ್ತಲ್ಲಿ ಪ್ರಯಾಣಿಕರೊಬ್ಬರು ಎಮರ್ಜೆನ್ಸಿ ಎಕ್ಸಿಟ್ ತೆರೆದಿರುವ ಘಟನೆ ವರದಿಯಾಗಿದೆ. ವಿಮಾನವು ಬೆಳಗ್ಗೆ 10.10 ಹಾರಾಟ ಆರಂಭಿಸಬೇಕಿತ್ತು, ಆದರೆ ಇದ್ದಕ್ಕಿದ್ದಂತೆ, ಪ್ರಯಾಣಿಕರೊಬ್ಬರು ಫ್ಲಾಪ್ ಅನ್ನು ಎಳೆದು ತುರ್ತು ನಿರ್ಗಮನ ದ್ವಾರವನ್ನು ತೆರೆದರು. ಈ ಘಟನೆಯ ನಂತರ, ವಿಮಾನದಲ್ಲಿ ಗೊಂದಲ, ಭಯ ಸೃಷ್ಟಿಯಾಗಿತ್ತು. ಪ್ರಯಾಣಿಕನನ್ನು ಬಂಧಿಸಿ ಸಿಐಎಸ್‌ಎಫ್‌ಗೆ ಒಪ್ಪಿಸಲಾಗಿದೆ. ಆಕ್ಸಿಸ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿರುವ ಸಿರಾಜ್ ಕಿದ್ವಾಯಿ ಅವರು ತಪ್ಪಾಗಿ ಫ್ಲಾಪ್ ಅನ್ನು ಎಳೆದಿದ್ದಾರೆ ಅವರಿಗೆ ಮಾಹಿತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ.

ಇಂಡಿಗೋ ವಿಮಾನ ಬೆಂಗಳೂರಿಗೆ ಟೇಕ್​ ಆಫ್​ ಆಗುವ ಹೊತ್ತಲ್ಲಿ ಎಮರ್ಜೆನ್ಸಿ ಎಕ್ಸಿಟ್ ತೆರೆದ ಪ್ರಯಾಣಿಕ
ಇಂಡಿಗೋ ವಿಮಾನ Image Credit source: Business Standard
Follow us
ನಯನಾ ರಾಜೀವ್
|

Updated on:Jan 29, 2025 | 10:45 AM

ಇಂಡಿಗೋ ವಿಮಾನ ಇನ್ನೇನು ಟೇಕ್​ ಆಫ್​ ಆಗಬೇಕು ಎನ್ನುವ ಹೊತ್ತಲ್ಲಿ ಪ್ರಯಾಣಿಕರೊಬ್ಬರು ಎಮರ್ಜೆನ್ಸಿ ಎಕ್ಸಿಟ್ ತೆರೆದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಜೋಧ್‌ಪುರದಿಂದ ಇಂಡಿಗೋ ವಿಮಾನ ಬೆಂಗಳೂರಿಗೆ ಟೇಕ್ ಆಫ್ ಆಗಲು ಸಿದ್ಧವಾಗಿತ್ತು. ಎಲ್ಲಾ ಪ್ರಯಾಣಿಕರು ವಿಮಾನವನ್ನು ಹತ್ತಿದ್ದರು ಮತ್ತು ಕ್ಯಾಬಿನ್ ಸಿಬ್ಬಂದಿ ವಿಮಾನ ಸುರಕ್ಷತಾ ಸೂಚನೆಗಳನ್ನು ಪ್ರಾರಂಭಿಸಿದರು.

ವಿಮಾನವು ಬೆಳಗ್ಗೆ 10.10 ಹಾರಾಟ ಆರಂಭಿಸಬೇಕಿತ್ತು, ಆದರೆ ಇದ್ದಕ್ಕಿದ್ದಂತೆ, ಪ್ರಯಾಣಿಕರೊಬ್ಬರು ಫ್ಲಾಪ್ ಅನ್ನು ಎಳೆದು ತುರ್ತು ನಿರ್ಗಮನ ದ್ವಾರವನ್ನು ತೆರೆದರು. ಈ ಘಟನೆಯ ನಂತರ, ವಿಮಾನದಲ್ಲಿ ಗೊಂದಲ, ಭಯ ಸೃಷ್ಟಿಯಾಗಿತ್ತು. ಪ್ರಯಾಣಿಕನನ್ನು ಬಂಧಿಸಿ ಸಿಐಎಸ್‌ಎಫ್‌ಗೆ ಒಪ್ಪಿಸಲಾಗಿದೆ. ಆಕ್ಸಿಸ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿರುವ ಸಿರಾಜ್ ಕಿದ್ವಾಯಿ ಅವರು ತಪ್ಪಾಗಿ ಫ್ಲಾಪ್ ಅನ್ನು ಎಳೆದಿದ್ದಾರೆ ಅವರಿಗೆ ಮಾಹಿತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ.

ತುರ್ತು ನಿರ್ಗಮನ ಗೇಟ್ ತೆರೆದ ನಂತರ, ಪೈಲಟ್‌ಗೆ ನೇರ ಸಂದೇಶವನ್ನು ನೀಡಲಾಯಿತು ಮತ್ತು ನಂತರ ಭದ್ರತಾ ಅಧಿಕಾರಿಗಳು ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿದರು. ಈ ಘಟನೆಯನ್ನು ವಿವರಿಸಿರುವ ಇಂಡಿಗೋ ಅಧಿಕಾರಿಗಳು, ಜೋಧ್‌ಪುರದಿಂದ ಬೆಂಗಳೂರಿಗೆ 6E 6033 ವಿಮಾನವು ಹೊರಡುವ ಮೊದಲು ಸುರಕ್ಷತಾ ಬ್ರೀಫಿಂಗ್ ಸಮಯದಲ್ಲಿ ಯಾಣಿಕರೊಬ್ಬರು ತುರ್ತು ನಿರ್ಗಮನದ ಫ್ಲಾಪ್ ಅನ್ನು ತೆರೆದರು. ಪ್ರಯಾಣಿಕನನ್ನು ಕೆಳಗಿಳಿಸಿ ಕಾನೂನಿಗೆ ಒಪ್ಪಿಸಲಾಯಿತು.

ಮತ್ತಷ್ಟು ಓದಿ: ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ವಿಮಾನದಲ್ಲಿ ಇತರ ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ನಾವು ವಿಷಾದಿಸುತ್ತೇವೆ ಮತ್ತು ನಮ್ಮ ಎಲ್ಲಾ ಕಾರ್ಯಾಚರಣೆಗಳಲ್ಲಿ ಸುರಕ್ಷತೆಯ ಅತ್ಯುನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಮ್ಮ ಬದ್ಧತೆಯನ್ನು ಕಾಯ್ದುಕೊಳ್ಳುತ್ತೇವೆ ಎಂದು ಹೇಳಿದೆ.

ಜೋಧ್‌ಪುರ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಸಿಐಎಸ್‌ಎಫ್ ಸಿಬ್ಬಂದಿ ಪ್ರಯಾಣಿಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯಿಂದಾಗಿ ಟೇಕ್ ಆಫ್ ಆಗಲು 20 ನಿಮಿಷಗಳ ಕಾಲ ವಿಳಂಬವಾಯಿತು ಮತ್ತು ವಿಮಾನದಲ್ಲಿ ಆತಂಕ ಸೃಷ್ಟಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:45 am, Wed, 29 January 25

ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಹೈಲೈಟ್ಸ್
ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಹೈಲೈಟ್ಸ್