ಒಂದೇ ರನ್​ವೇನಲ್ಲಿ ಮುಖಾಮುಖಿಯಾದ ಏರ್​ ಇಂಡಿಯಾ, ಇಂಡಿಗೋ ವಿಮಾನ

ಎರಡು ವಿಮಾನಗಳು ಒಂದೇ ರನ್​ವೇನಲ್ಲಿ ಮುಖಾಮುಖಿಯಾಗಿದ್ದು ಅಪಘಾತ ಸ್ವಲ್ಪದರಲ್ಲೇ ತಪ್ಪಿದೆ. ಮುಂಬೈನ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ.

ಒಂದೇ ರನ್​ವೇನಲ್ಲಿ ಮುಖಾಮುಖಿಯಾದ ಏರ್​ ಇಂಡಿಯಾ, ಇಂಡಿಗೋ ವಿಮಾನ
ಏರ್​ಪೋರ್ಟ್​
Follow us
|

Updated on: Jun 09, 2024 | 12:49 PM

ಒಂದೇ ರನ್​ವೇನಲ್ಲಿ ಒಂದೇ ಸಮಯದಲ್ಲಿ ಎರಡು ವಿಮಾನಗಳು ಮುಖಾಮುಖಿಯಾಗಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಅಪಘಾತ ತಪ್ಪಿದೆ. ಇಂಡಿಗೋ(IndiGo) ಹಾಗೂ ಏರ್​ ಇಂಡಿಯಾ(Air India) ವಿಮಾನಗಳು ಒಂದೇ ಟೈಂನಲ್ಲಿ ಒಂದೇ ರನ್​ವೇ ಪ್ರವೇಶಿಸಿದ್ದು, ಸ್ವಲ್ಪದರಲ್ಲೇ ಘರ್ಷಣೆ ತಪ್ಪಿದೆ.

ಮಾಹಿತಿ ಪ್ರಕಾರ ಇಂಡಿಗೋ ವಿಮಾನವು ವಿಮಾನ ನಿಲ್ದಾಣದ ರನ್​ವೇನಲ್ಲಿ ಇಳಿಯುತ್ತಿತ್ತು, ಆದರೆ ಇಂಡಿಯಾ ವಿಮಾನ ಟೇಕ್​ ಆಫ್​ ಆಗಲು ಅದೇ ರನ್​ವೇನಲ್ಲಿ ಓಡುತ್ತಿತ್ತು. ಶನಿವಾರ ಬೆಳಗ್ಗೆ ಈ ಘಟನೆ ನಡೆದಿದೆ ಎನ್ನಲಾಗಿದೆ, ಇಂಡಿಗೋ ಫ್ಲೈಟ್ 5053 ರನ್​ವೇ 27ರಲ್ಲಿ ಇಳಿಯಬೇಕಿತ್ತು, ಆದರೆ ಏರ್​ ಇಂಡಿಯಾ ವಿಮಾನವು 657 ಆ ಸಮಯದಲ್ಲಿ ಟೇಕ್ ಆಫ್ ಆಗಿತ್ತು. ಏರ್ ಇಂಡಿಯಾ ವಿಮಾನ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟೇಕ್ ಆಫ್​ ಆಗಬೇಕಿತ್ತು.

ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏರ್ ಇಂಡಿಯಾ ವಿಮಾನವು ರನ್​ ವೇನಲ್ಲಿ ವೇಗವಾಗಿ ಚಲಿಸುತ್ತಿರುವುದನ್ನು ಕಾಣಬಹುದು. ಇಂಡಿಗೋ ವಿಮಾನವು ಹಿಂದಿನಿಂದ ಲ್ಯಾಂಡ್​ ಆಗುತ್ತಿರುವುದು ದೃಶ್ಯಾವಳಿಯಲ್ಲಿ ಗೋಚರಿಸುತ್ತದೆ. ಆದರೆ, ಇಂಡಿಗೋ ವಿಮಾನವು ಏರ್​ ಇಂಡಿಯಾ ವಿಮಾನದ ಸಮೀಪಕ್ಕೆ ಬರುವಷ್ಟರಲ್ಲಿ ಅದು ಟೇಕ್ ಆಫ್​ ಆಗಿತ್ತು, ಇಲ್ಲದಿದ್ದರೆ ದೊಡ್ಡ ಅಪಘಾತವೇ ಸಂಭವಿಸುತ್ತಿತ್ತು.

ಮತ್ತಷ್ಟು ಓದಿ: ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್

ಇಂಡಿಗೋ ವಿಮಾನದ ಪ್ರಕಾರ, ಇಂದೋರ್​ನಿಂದ ಇಂಡಿಗೋ ವಿಮಾನ ಮುಂಬೈ ಏರ್​ಪೋರ್ಟ್​ಗೆ ಬರುತ್ತಿತ್ತು ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಕ್ಲಿಯರೆನ್ಸ್ ದೊರೆತಿತ್ತು ಆ ಸೂಚನೆ ಪ್ರಕಾರ ವಿಮಾನ ಕೆಳಗಿಳಿಸಲಾಯಿತು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್