AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ರನ್​ವೇನಲ್ಲಿ ಮುಖಾಮುಖಿಯಾದ ಏರ್​ ಇಂಡಿಯಾ, ಇಂಡಿಗೋ ವಿಮಾನ

ಎರಡು ವಿಮಾನಗಳು ಒಂದೇ ರನ್​ವೇನಲ್ಲಿ ಮುಖಾಮುಖಿಯಾಗಿದ್ದು ಅಪಘಾತ ಸ್ವಲ್ಪದರಲ್ಲೇ ತಪ್ಪಿದೆ. ಮುಂಬೈನ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ.

ಒಂದೇ ರನ್​ವೇನಲ್ಲಿ ಮುಖಾಮುಖಿಯಾದ ಏರ್​ ಇಂಡಿಯಾ, ಇಂಡಿಗೋ ವಿಮಾನ
ಏರ್​ಪೋರ್ಟ್​
ನಯನಾ ರಾಜೀವ್
|

Updated on: Jun 09, 2024 | 12:49 PM

Share

ಒಂದೇ ರನ್​ವೇನಲ್ಲಿ ಒಂದೇ ಸಮಯದಲ್ಲಿ ಎರಡು ವಿಮಾನಗಳು ಮುಖಾಮುಖಿಯಾಗಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಅಪಘಾತ ತಪ್ಪಿದೆ. ಇಂಡಿಗೋ(IndiGo) ಹಾಗೂ ಏರ್​ ಇಂಡಿಯಾ(Air India) ವಿಮಾನಗಳು ಒಂದೇ ಟೈಂನಲ್ಲಿ ಒಂದೇ ರನ್​ವೇ ಪ್ರವೇಶಿಸಿದ್ದು, ಸ್ವಲ್ಪದರಲ್ಲೇ ಘರ್ಷಣೆ ತಪ್ಪಿದೆ.

ಮಾಹಿತಿ ಪ್ರಕಾರ ಇಂಡಿಗೋ ವಿಮಾನವು ವಿಮಾನ ನಿಲ್ದಾಣದ ರನ್​ವೇನಲ್ಲಿ ಇಳಿಯುತ್ತಿತ್ತು, ಆದರೆ ಇಂಡಿಯಾ ವಿಮಾನ ಟೇಕ್​ ಆಫ್​ ಆಗಲು ಅದೇ ರನ್​ವೇನಲ್ಲಿ ಓಡುತ್ತಿತ್ತು. ಶನಿವಾರ ಬೆಳಗ್ಗೆ ಈ ಘಟನೆ ನಡೆದಿದೆ ಎನ್ನಲಾಗಿದೆ, ಇಂಡಿಗೋ ಫ್ಲೈಟ್ 5053 ರನ್​ವೇ 27ರಲ್ಲಿ ಇಳಿಯಬೇಕಿತ್ತು, ಆದರೆ ಏರ್​ ಇಂಡಿಯಾ ವಿಮಾನವು 657 ಆ ಸಮಯದಲ್ಲಿ ಟೇಕ್ ಆಫ್ ಆಗಿತ್ತು. ಏರ್ ಇಂಡಿಯಾ ವಿಮಾನ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟೇಕ್ ಆಫ್​ ಆಗಬೇಕಿತ್ತು.

ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏರ್ ಇಂಡಿಯಾ ವಿಮಾನವು ರನ್​ ವೇನಲ್ಲಿ ವೇಗವಾಗಿ ಚಲಿಸುತ್ತಿರುವುದನ್ನು ಕಾಣಬಹುದು. ಇಂಡಿಗೋ ವಿಮಾನವು ಹಿಂದಿನಿಂದ ಲ್ಯಾಂಡ್​ ಆಗುತ್ತಿರುವುದು ದೃಶ್ಯಾವಳಿಯಲ್ಲಿ ಗೋಚರಿಸುತ್ತದೆ. ಆದರೆ, ಇಂಡಿಗೋ ವಿಮಾನವು ಏರ್​ ಇಂಡಿಯಾ ವಿಮಾನದ ಸಮೀಪಕ್ಕೆ ಬರುವಷ್ಟರಲ್ಲಿ ಅದು ಟೇಕ್ ಆಫ್​ ಆಗಿತ್ತು, ಇಲ್ಲದಿದ್ದರೆ ದೊಡ್ಡ ಅಪಘಾತವೇ ಸಂಭವಿಸುತ್ತಿತ್ತು.

ಮತ್ತಷ್ಟು ಓದಿ: ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್

ಇಂಡಿಗೋ ವಿಮಾನದ ಪ್ರಕಾರ, ಇಂದೋರ್​ನಿಂದ ಇಂಡಿಗೋ ವಿಮಾನ ಮುಂಬೈ ಏರ್​ಪೋರ್ಟ್​ಗೆ ಬರುತ್ತಿತ್ತು ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಕ್ಲಿಯರೆನ್ಸ್ ದೊರೆತಿತ್ತು ಆ ಸೂಚನೆ ಪ್ರಕಾರ ವಿಮಾನ ಕೆಳಗಿಳಿಸಲಾಯಿತು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ