AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ರನ್​ವೇನಲ್ಲಿ ಮುಖಾಮುಖಿಯಾದ ಏರ್​ ಇಂಡಿಯಾ, ಇಂಡಿಗೋ ವಿಮಾನ

ಎರಡು ವಿಮಾನಗಳು ಒಂದೇ ರನ್​ವೇನಲ್ಲಿ ಮುಖಾಮುಖಿಯಾಗಿದ್ದು ಅಪಘಾತ ಸ್ವಲ್ಪದರಲ್ಲೇ ತಪ್ಪಿದೆ. ಮುಂಬೈನ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ.

ಒಂದೇ ರನ್​ವೇನಲ್ಲಿ ಮುಖಾಮುಖಿಯಾದ ಏರ್​ ಇಂಡಿಯಾ, ಇಂಡಿಗೋ ವಿಮಾನ
ಏರ್​ಪೋರ್ಟ್​
ನಯನಾ ರಾಜೀವ್
|

Updated on: Jun 09, 2024 | 12:49 PM

Share

ಒಂದೇ ರನ್​ವೇನಲ್ಲಿ ಒಂದೇ ಸಮಯದಲ್ಲಿ ಎರಡು ವಿಮಾನಗಳು ಮುಖಾಮುಖಿಯಾಗಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಅಪಘಾತ ತಪ್ಪಿದೆ. ಇಂಡಿಗೋ(IndiGo) ಹಾಗೂ ಏರ್​ ಇಂಡಿಯಾ(Air India) ವಿಮಾನಗಳು ಒಂದೇ ಟೈಂನಲ್ಲಿ ಒಂದೇ ರನ್​ವೇ ಪ್ರವೇಶಿಸಿದ್ದು, ಸ್ವಲ್ಪದರಲ್ಲೇ ಘರ್ಷಣೆ ತಪ್ಪಿದೆ.

ಮಾಹಿತಿ ಪ್ರಕಾರ ಇಂಡಿಗೋ ವಿಮಾನವು ವಿಮಾನ ನಿಲ್ದಾಣದ ರನ್​ವೇನಲ್ಲಿ ಇಳಿಯುತ್ತಿತ್ತು, ಆದರೆ ಇಂಡಿಯಾ ವಿಮಾನ ಟೇಕ್​ ಆಫ್​ ಆಗಲು ಅದೇ ರನ್​ವೇನಲ್ಲಿ ಓಡುತ್ತಿತ್ತು. ಶನಿವಾರ ಬೆಳಗ್ಗೆ ಈ ಘಟನೆ ನಡೆದಿದೆ ಎನ್ನಲಾಗಿದೆ, ಇಂಡಿಗೋ ಫ್ಲೈಟ್ 5053 ರನ್​ವೇ 27ರಲ್ಲಿ ಇಳಿಯಬೇಕಿತ್ತು, ಆದರೆ ಏರ್​ ಇಂಡಿಯಾ ವಿಮಾನವು 657 ಆ ಸಮಯದಲ್ಲಿ ಟೇಕ್ ಆಫ್ ಆಗಿತ್ತು. ಏರ್ ಇಂಡಿಯಾ ವಿಮಾನ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟೇಕ್ ಆಫ್​ ಆಗಬೇಕಿತ್ತು.

ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏರ್ ಇಂಡಿಯಾ ವಿಮಾನವು ರನ್​ ವೇನಲ್ಲಿ ವೇಗವಾಗಿ ಚಲಿಸುತ್ತಿರುವುದನ್ನು ಕಾಣಬಹುದು. ಇಂಡಿಗೋ ವಿಮಾನವು ಹಿಂದಿನಿಂದ ಲ್ಯಾಂಡ್​ ಆಗುತ್ತಿರುವುದು ದೃಶ್ಯಾವಳಿಯಲ್ಲಿ ಗೋಚರಿಸುತ್ತದೆ. ಆದರೆ, ಇಂಡಿಗೋ ವಿಮಾನವು ಏರ್​ ಇಂಡಿಯಾ ವಿಮಾನದ ಸಮೀಪಕ್ಕೆ ಬರುವಷ್ಟರಲ್ಲಿ ಅದು ಟೇಕ್ ಆಫ್​ ಆಗಿತ್ತು, ಇಲ್ಲದಿದ್ದರೆ ದೊಡ್ಡ ಅಪಘಾತವೇ ಸಂಭವಿಸುತ್ತಿತ್ತು.

ಮತ್ತಷ್ಟು ಓದಿ: ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್

ಇಂಡಿಗೋ ವಿಮಾನದ ಪ್ರಕಾರ, ಇಂದೋರ್​ನಿಂದ ಇಂಡಿಗೋ ವಿಮಾನ ಮುಂಬೈ ಏರ್​ಪೋರ್ಟ್​ಗೆ ಬರುತ್ತಿತ್ತು ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಕ್ಲಿಯರೆನ್ಸ್ ದೊರೆತಿತ್ತು ಆ ಸೂಚನೆ ಪ್ರಕಾರ ವಿಮಾನ ಕೆಳಗಿಳಿಸಲಾಯಿತು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ