AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ರದ್ದತಿಯಿಂದ ತೀವ್ರ ತೊಂದರೆಗೊಳಗಾದ ಪ್ರಯಾಣಿಕರಿಗೆ ಇಂಡಿಗೋದಿಂದ 10,000 ರೂ. ಪ್ರಯಾಣ ವೋಚರ್‌

ಡಿಸೆಂಬರ್ 3 ಮತ್ತು 5ರ ನಡುವೆ ಸಾವಿರಾರು ಇಂಡಿಗೋ ವಿಮಾನಗಳು ರದ್ದಾದ ಕಾರಣದಿಂದ ಲಕ್ಷಾಂತರ ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸಿದ್ದರು. ಇದೀಗ ನಿಧಾನವಾಗಿ ಇಂಡಿಗೋ ವಿಮಾನ ಸಂಚಾರ ಸಹಜಸ್ಥಿತಿಗೆ ಮರಳುತ್ತಿದೆ. ಇಂಡಿಗೋ ವಿಮಾನ ರದ್ದಾಗಿದ್ದರಿಂದ ತೀವ್ರವಾದ ತೊಂದರೆಗಳನ್ನು ಅನುಭವಿಸಿದ ಪ್ರಯಾಣಿಕರಿಗೆ ಇಂಡಿಗೋ ಇಂದು ಪರಿಹಾರವನ್ನು ಘೋಷಿಸಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ವಿಮಾನ ರದ್ದತಿಯಿಂದ ತೀವ್ರ ತೊಂದರೆಗೊಳಗಾದ ಪ್ರಯಾಣಿಕರಿಗೆ ಇಂಡಿಗೋದಿಂದ 10,000 ರೂ. ಪ್ರಯಾಣ ವೋಚರ್‌
Indigo Passengeres Luggage
ಸುಷ್ಮಾ ಚಕ್ರೆ
|

Updated on: Dec 11, 2025 | 3:30 PM

Share

ನವದೆಹಲಿ, ಡಿಸೆಂಬರ್ 11: ಸಿಬ್ಬಂದಿ ಕೊರತೆಯ ಬಿಕ್ಕಟ್ಟಿನಿಂದ ಡಿಸೆಂಬರ್ 3ರಿಂದ 5ರ ನಡುವೆ ಸಾವಿರಾರು ಇಂಡಿಗೋ ವಿಮಾನಗಳು (IndiGo Planes) ರದ್ದಾಗಿದ್ದವು. ಉಂಟಾದ ವಿಮಾನ ನಿಲ್ದಾಣದ ದಟ್ಟಣೆಯ ನಡುವೆ ಗಂಟೆಗಟ್ಟಲೆ ಸಿಲುಕಿಕೊಂಡ ಹಾಗೂ ತೀವ್ರ ರೀತಿಯಲ್ಲಿ ತೊಂದರೆಗಳನ್ನು ಅನುಭವಿಸಿದ ಗ್ರಾಹಕರಿಗೆ 10,000 ರೂ. ಪ್ರಯಾಣ ವೋಚರ್‌ಗಳನ್ನು ನೀಡುವುದಾಗಿ ಇಂಡಿಗೋ ಘೋಷಿಸಿದೆ. ಮುಂದಿನ 12 ತಿಂಗಳುಗಳಲ್ಲಿ ಯಾವುದೇ ಇಂಡಿಗೋ ವಿಮಾನಕ್ಕೆ ಆ ವೋಚರ್‌ಗಳನ್ನು ಬಳಸಬಹುದು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಆದರೆ, ಇಂಡಿಗೋ ಹೇಳಿರುವ ಆ “ತೀವ್ರವಾಗಿ ಪರಿಣಾಮ ಎದುರಿಸಿದ” ಪ್ರಯಾಣಿಕರು ಯಾರು? ಇದರ ಮಾನದಂಡವೇನು? ಅಂತಹ ಗ್ರಾಹಕರನ್ನು ಹೇಗೆ ಗುರುತಿಸಲಾಗುತ್ತದೆ? ಎಂಬುದನ್ನು ಇಂಡಿಗೋ ಸ್ಪಷ್ಟಪಡಿಸಿಲ್ಲ. ಈಗಾಗಲೇ ರದ್ದಾದ ವಿಮಾನಗಳಿಗೆ ಅಗತ್ಯವಾದ ಮರುಪಾವತಿಯನ್ನು ಇಂಡಿಗೋ ಪ್ರಯಾಣಿಕರಿಗೆ ಮಾಡಿದೆ.

ಇದನ್ನೂ ಓದಿ: ಇಂಡಿಗೋ ಬಿಕ್ಕಟ್ಟು, ಪ್ರಯಾಣಿಕರಿಗೆ 610 ಕೋಟಿ ರೂ.ಮೊತ್ತದ ಟಿಕೆಟ್ ಹಣ ಮರುಪಾವತಿಸಿದ ವಿಮಾನಯಾನ ಸಂಸ್ಥೆ

“ಡಿಸೆಂಬರ್ 3, 4, 5ರಂದು ಪ್ರಯಾಣಿಸುತ್ತಿದ್ದ ನಮ್ಮ ಗ್ರಾಹಕರಲ್ಲಿ ಕೆಲವರು ಕೆಲವು ವಿಮಾನ ನಿಲ್ದಾಣಗಳಲ್ಲಿ ಹಲವು ಗಂಟೆಗಳ ಕಾಲ ಸಿಲುಕಿಕೊಂಡಿದ್ದರು. ಅವರಲ್ಲಿ ಹಲವರು ತೀವ್ರವಾಗಿ ಪರಿಣಾಮ ಎದುರಿಸಿದ್ದರು ಎಂಬುದನ್ನು ಇಂಡಿಗೋ ವಿಷಾದದಿಂದ ಒಪ್ಪಿಕೊಳ್ಳುತ್ತದೆ ಮತ್ತು ಕ್ಷಮೆಯನ್ನೂ ಕೋರುತ್ತದೆ. ಅಂತಹ ತೀವ್ರ ಪರಿಣಾಮ ಬೀರಿದ ಗ್ರಾಹಕರಿಗೆ ನಾವು 10,000 ರೂ. ಮೌಲ್ಯದ ಪ್ರಯಾಣ ವೋಚರ್‌ಗಳನ್ನು ನೀಡುತ್ತೇವೆ” ಎಂದು ಇಂಡಿಗೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮುಂದಿನ 12 ತಿಂಗಳೊಳಗೆ ಯಾವುದೇ ಇಂಡಿಗೋ ಪ್ರಯಾಣಕ್ಕೆ ಈ ವೋಚರ್‌ಗಳನ್ನು ಬಳಸಬಹುದು. “ಇಂಡಿಗೋದಲ್ಲಿ ನಿಮಗೆ ಮತ್ತೆ ಸೇವೆ ಸಲ್ಲಿಸಲು ನಮಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು” ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್