Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ-ಗುವಾಹಟಿ ಇಂಡಿಗೋ ವಿಮಾನದಲ್ಲಿ ಸಹ ಪ್ರಯಾಣಿಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಮುಂಬೈ-ಗುವಾಹಟಿ ಇಂಡಿಗೋ ವಿಮಾನದಲ್ಲಿ ಮಹಿಳೆಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಆ ವ್ಯಕ್ತಿ ಸೀಟಿನ ಆರ್ಮ್​ರೆಸ್ಟ್​ ಅನ್ನು ಮೇಲಕ್ಕೆತ್ತಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಕಿರುಕುಳ ನೀಡುತ್ತಿದ್ದ. ಎಫ್‌ಐಆರ್ ದಾಖಲಾಗಿದ್ದು, ವ್ಯಕ್ತಿಯನ್ನು ಗುವಾಹಟಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಇಂಡಿಗೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ 2 ತಿಂಗಳಲ್ಲಿ ಪ್ರಯಾಣಿಕರು ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವುದು ಇದು ನಾಲ್ಕನೇ ಘಟನೆಯಾಗಿದೆ.

ಮುಂಬೈ-ಗುವಾಹಟಿ ಇಂಡಿಗೋ ವಿಮಾನದಲ್ಲಿ ಸಹ ಪ್ರಯಾಣಿಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
ಇಂಡಿಗೋ ವಿಮಾನ
Follow us
ನಯನಾ ರಾಜೀವ್
|

Updated on:Sep 11, 2023 | 12:49 PM

ಮುಂಬೈ-ಗುವಾಹಟಿ ಇಂಡಿಗೋ ವಿಮಾನ(IndiGO Flight)ದಲ್ಲಿ ಮಹಿಳೆಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಆ ವ್ಯಕ್ತಿ ಸೀಟಿನ ಆರ್ಮ್​ರೆಸ್ಟ್​ ಅನ್ನು ಮೇಲಕ್ಕೆತ್ತಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಕಿರುಕುಳ ನೀಡುತ್ತಿದ್ದ. ಎಫ್‌ಐಆರ್ ದಾಖಲಾಗಿದ್ದು, ವ್ಯಕ್ತಿಯನ್ನು ಗುವಾಹಟಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಇಂಡಿಗೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ 2 ತಿಂಗಳಲ್ಲಿ ಪ್ರಯಾಣಿಕರು ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವುದು ಇದು ನಾಲ್ಕನೇ ಘಟನೆಯಾಗಿದೆ.

ಮುಂಬೈ-ಗುವಾಹಟಿ ಇಂಡಿಗೋ ವಿಮಾನದಲ್ಲಿ ಇತ್ತೀಚಿನ ಘಟನೆ ಘಟನೆ ಇದಾಗಿದೆ. ವಿಮಾನ, 6E-5319 ಮುಂಬೈನಿಂದ ರಾತ್ರಿ 9 ಗಂಟೆಗೆ ಹೊರಟು 12.15 ಕ್ಕೆ ಗುವಾಹಟಿ ತಲುಪಿತು. ಮಹಿಳೆ ಮಲಗುವಾಗ ಆರ್ಮ್​ರೆಸ್ಟ್​ ಕೆಳಕ್ಕೆ ಇಳಿಸಿ ಮಲಗಿದ್ದಳು, ಆಕೆಗೆ ಎಚ್ಚರವಾಗುವಷ್ಟರಲ್ಲಿ ಆರ್ಮ್​ರೆಸ್ಟ್ ಮೇಲೆಕ್ಕೆತ್ತಿತ್ತು ಹಾಗೂ ಸಹ ಪ್ರಯಾಣಿಕ ಆಕೆಯ ಮೇಲೆ ಒರಗಿ ನಿದ್ರಿಸುತ್ತಿದ್ದ. ಆಗ ಮತ್ತೊಮ್ಮೆ ಅವರು ಹ್ಯಾಂಡ್​​ರೆಸ್ಟ್​ ಕೆಳಗಿಳಿಸಿದ್ದಾರೆ.

ವ್ಯಕ್ತಿ ತನ್ನ ಸ್ಪರ್ಶಿಸಿದ್ದರಿಂದ ಆಕೆ ಎಚ್ಚರಗೊಂಡಿದ್ದಾಳೆ. ಉದ್ದೇಶಪೂರ್ವಕವಾಗಿ ಮುಟ್ಟುತ್ತಿದ್ದಾನೋ ಅಥವಾ ಅಜಾಗರೂಕತೆಯಿಂದ ಮಾಡುತ್ತಿದ್ದಾನೋ ಎಂದು ಖಚಿತಪಡಿಸಿಕೊಳ್ಳಲು ನಿದ್ರಿಸುವಂತೆ ನಟಿಸಿದ್ದರು, ಸ್ವಲ್ಪ ಸಮಯದ ಬಳಿಕ ಆತ ಪ್ರಜ್ಞಾಪೂರ್ವಕವಾಗಿಯೇ ಆಕೆಯನ್ನು ಮುಟ್ಟುತ್ತಿರುವುದು ಗೊತ್ತಾಗಿದೆ.

ಮತ್ತಷ್ಟು ಓದಿ: ಬೆಂಗಳೂರು: ಗಗನಸಖಿ ಮೇಲೆ ಕೈ ಹಾಕಿ, ನಿನ್ನ ರೇಟ್ ಎಷ್ಟು, ಎಷ್ಟಕ್ಕೆ ಬರುತ್ತೀಯಾ? ಎಂದಿದ್ದ ವಿದೇಶಿ ಪ್ರಜೆಯ ಬಂಧನ

ಮತ್ತೊಮ್ಮೆ ಆಕೆಯನ್ನು ಸ್ಪರ್ಶಿಸಲು ಬಂದಾಗ ಆತನ ಕೈ ಹಿಡಿದು ಕಿರುಚಿಕೊಂಡಳು, ಸೀಟ್ ಲೈಟ್ ಆನ್ ಮಾಡಿ ಸಿಬ್ಬಂದಿಯನ್ನು ಕರೆದಿದ್ದಾರೆ. ಆಕೆ ಘಟನೆಯನ್ನು ವಿವರಿಸುತ್ತಿರುವಾಗ ಕ್ಷಮೆಯಾಚಿಸಿಲು ಪ್ರಾರಂಭಿಸಿದ್ದ, ಮಹಿಳೆ ಅತನ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದಾರೆ. ಆತನನ್ನು ಗುವಾಹಟಿ ಪೊಲೀಸರಿಗೆ ಒಪ್ಪಿಸಲಾಯಿತು. ಇಂಡಿಗೋ ಪೊಲೀಸರೊಂದಿಗೆ ಸಹಕರಿಸುವುದಾಗಿ ಮತ್ತು ತನಿಖೆಯಲ್ಲಿ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:48 pm, Mon, 11 September 23

25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್