AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ವಿಮಾನದ ಮುಂಭಾಗದ ವಿಂಡ್​ಶೀಲ್ಡ್​​ನಲ್ಲಿ ಬಿರುಕು

ಚೆನ್ನೈನಲ್ಲಿ ಇಂಡಿಗೋ ವಿಮಾನ ಇಳಿಯುವ ಮುನ್ನ ವಿಮಾನ ಮುಂಭಾಗದ ವಿಂಡ್​ಶೀಲ್ಡ್​​ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ತಕ್ಷಣ ಪೈಲಟ್ ಗಮನಕ್ಕೆ ಬಂದಿದೆ. 76 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರಾತ್ರಿ 11.12 ಕ್ಕೆ ಸುರಕ್ಷಿತವಾಗಿ ಇಳಿಯಿತು. ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಪೈಲಟ್ ಬಿರುಕು ಗಮನಿಸಿದ ತಕ್ಷಣ ವಾಯು ಸಂಚಾರ ನಿಯಂತ್ರಣ (ಎಟಿಸಿ) ಗೆ ಎಚ್ಚರಿಕೆ ನೀಡಿದರು.

ಇಂಡಿಗೋ ವಿಮಾನದ ಮುಂಭಾಗದ ವಿಂಡ್​ಶೀಲ್ಡ್​​ನಲ್ಲಿ ಬಿರುಕು
ಇಂಡಿಗೋ
ನಯನಾ ರಾಜೀವ್
|

Updated on: Oct 11, 2025 | 9:24 AM

Share

ಚೆನ್ನೈ, ಅಕ್ಟೋಬರ್ 11: ಚೆನ್ನೈನಲ್ಲಿ ಇಂಡಿಗೋ ವಿಮಾನ(IndiGO Flight) ಇಳಿಯುವ ಮುನ್ನ ವಿಮಾನ ಮುಂಭಾಗದ ವಿಂಡ್​ಶೀಲ್ಡ್​​ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ತಕ್ಷಣ ಪೈಲಟ್ ಗಮನಕ್ಕೆ ಬಂದಿದೆ. 76 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರಾತ್ರಿ 11.12 ಕ್ಕೆ ಸುರಕ್ಷಿತವಾಗಿ ಇಳಿಯಿತು. ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಪೈಲಟ್ ಬಿರುಕು ಗಮನಿಸಿದ ತಕ್ಷಣ ವಾಯು ಸಂಚಾರ ನಿಯಂತ್ರಣ (ಎಟಿಸಿ) ಗೆ ಎಚ್ಚರಿಕೆ ನೀಡಿದರು.

ಸುರಕ್ಷತಾ ಪ್ರೋಟೋಕಾಲ್‌ಗಳನ್ನು ತ್ವರಿತವಾಗಿ ಪ್ರಾರಂಭಿಸಲಾಯಿತು, ಸುರಕ್ಷಿತ ಲ್ಯಾಂಡಿಂಗ್ ಮಾಡಲಾಗಿದೆ. ಮಧುರೈನಿಂದ ಆಗಮಿಸುತ್ತಿದ್ದ ಇಂಡಿಗೋ ವಿಮಾನದ ಮುಂಭಾಗದ ವಿಂಡ್ ಷೀಲ್ಡ್ ನಲ್ಲಿ ಬಿರುಕು ಕಂಡುಬಂದಿದೆ. ಯಾವುದೇ ತೊಂದರೆಯಿಲ್ಲದೆ ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.

ಲ್ಯಾಂಡಿಂಗ್ ನಂತರ, ವಿಮಾನವನ್ನು ಬೇ ನಂ. 95 ಕ್ಕೆ ಸ್ಥಳಾಂತರಿಸಲಾಯಿತು, ಅಲ್ಲಿ ತಾಂತ್ರಿಕ ತಂಡಗಳು ಹಾನಿಗೊಳಗಾದ ಗಾಜು ಬದಲಾಯಿಸಲು ಸಿದ್ಧತೆಗಳನ್ನು ಪ್ರಾರಂಭಿಸಿದವು. ಬಿರುಕಿಗೆ ಕಾರಣ ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ.

ಮತ್ತಷ್ಟು ಓದಿ: ಬೆಂಗಳೂರಿನಿಂದ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದ ಕಾಕ್​ಪಿಟ್ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ಸುರಕ್ಷತಾ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಒತ್ತಿ ಹೇಳಿದರು.ಹಬ್ಬದ ಸೀಸನ್​ಗೂ ಮುಂಚಿತವಾಗಿ ವಿಮಾನದ ಸುರಕ್ಷತೆ, ಕಾರ್ಯಾಚರಣೆ ಕುರಿತು ಮಾಹಿತಿ ಪಡೆಯಲು ನಾಯ್ಡು ತೆರಳಿದ್ದರು.

ಮತ್ತೊಂದು ಘಟನೆ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನ ಸುರಕ್ಷಿತವಾಗಿ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಿಮಾನವನ್ನು ಎಂಜಿನಿಯರಿಂಗ್ ತಂಡವು ತಪಾಸಣೆ ನಡೆಸುತ್ತಿದ್ದು, ಪರಿಶೀಲನೆ ಬಳಿಕ ಸೇವೆಗೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಅಕ್ಟೋಬರ್ 10ರಂದು ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿತ್ತು . ವಿಮಾನವು ಸುರಕ್ಷಿತವಾಗಿ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು.

ಹಕ್ಕಿ ಡಿಕ್ಕಿ ಹೊಡೆದ ವಿಮಾನವು ದೆಹಲಿಯಿಂದ ಗೋವಾಕ್ಕೆ ಹಾರಾಟ ನಡೆಸಲು ನಿರ್ಧರಿಸಲಾಗಿತ್ತು. ಮೂಲಗಳ ಪ್ರಕಾರ, ಈ ಮಾರ್ಗಕ್ಕೆ ಮತ್ತೊಂದು ವಿಮಾನವನ್ನು ನಿಯೋಜಿಸಲಾಗಿದ್ದರಿಂದ ಈ ಸೇವೆ ಕೆಲವು ಗಂಟೆಗಳ ಕಾಲ ವಿಳಂಬವಾಯಿತು.

ವಿಮಾನಯಾನ ಸಂಸ್ಥೆಯು ಪ್ರಯಾಣಿಕರ ಸಂಖ್ಯೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಆದರೆ, ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್