AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indigo Refunds Ordered: ನಾಳೆ ರಾತ್ರಿ 8 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

ಇಂಡಿಗೋ ವಿಮಾನಗಳ ಹಾರಾಟ ರದ್ದತಿ ಮತ್ತು ಪ್ರಯಾಣಿಕರ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ವಿಮಾನಯಾನ ಸಚಿವಾಲಯವು ಇಂಡಿಗೋ ಸಂಸ್ಥೆಗೆ ಬಾಕಿ ಹಣವನ್ನು ನಾಳೆ ರಾತ್ರಿ 8 ಗಂಟೆಯೊಳಗೆ ಮರುಪಾವತಿಸುವಂತೆ ಸೂಚಿಸಿದೆ. ವಿಫಲವಾದರೆ ಕ್ರಮದ ಎಚ್ಚರಿಕೆ ನೀಡಿದೆ. ಅಲ್ಲದೆ, ಟಿಕೆಟ್ ದರ ಏರಿಕೆಯನ್ನು ನಿಯಂತ್ರಿಸಲು ಎಲ್ಲಾ ಏರ್‌ಲೈನ್ಸ್‌ಗಳಿಗೆ ಏಕರೂಪ ದರ ನಿಗದಿಪಡಿಸಿದೆ.

Indigo Refunds Ordered: ನಾಳೆ ರಾತ್ರಿ 8 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Dec 06, 2025 | 5:42 PM

Share

ದೆಹಲಿ, ಡಿ.6: ಇಂಡಿಗೋ ವಿಮಾನ ಸಂಸ್ಥೆಯ (Indigo flight) ಎಡವಟ್ಟಿನಿಂದ ಪ್ರಯಾಣಿಕರು ಸಂಕಷ್ಟಕ್ಕೆ ಒಳಲಾಗಿದ್ದರು. ಇದೀಗ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇಂಡಿಗೋ ಏರ್​ಲೈನ್ಸ್ ವಿಮಾನಗಳ ಹಾರಾಟ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕರಿಗೆ ಬಾಕಿ ಹಣ ಪಾವತಿಸಿದ ಇಂಡಿಗೋ ಏರ್​ಲೈನ್ಸ್​​ಗೆ ಖಡಕ್​​ ಸಂದೇಶವನ್ನು ಕೇಂದ್ರ ವಿಮಾನಯಾನ ಸಚಿವಾಲಯವು ನೀಡಿದೆ. ನಾಳೆ ರಾತ್ರಿ 8 ಗಂಟೆಯೊಳಗೆ ಬಾಕಿ ಹಣವನ್ನು ಮರುಪಾವತಿಸುವಂತೆ ಸೂಚನೆ ನೀಡಿದೆ. ಒಂದು ವೇಳೆ ಮರುಪಾವತಿ ಮಾಡದಿದ್ದರೆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ. ಇದರ ಜತೆಗೆ ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ಇತರ ವಿಮಾನಗಳ ಟಿಕೆಟ್‌ ದರ ಹೆಚ್ಚಳ ಮಾಡಲಾಗಿದೆ. ಅದಕ್ಕಾಗಿ ಈ ಬಿಕ್ಕಟ್ಟು ಪರಿಹಾರ ಆಗುವವರೆಗೆ ವಿಮಾನಯಾನ ಸಚಿವಾಲಯ ಎಲ್ಲಾ ಏರ್‌ಲೈನ್ಸ್‌ಗಳಿಗೆ ಅನ್ವಯವಾಗುವಂತೆ ಏಕರೂಪ ದರ ನಿಗದಿ ಮಾಡಿದೆ.

ಕೇಂದ್ರ ವಿಮಾನಯಾನ ಸಚಿವಾಲಯವು ಎಲ್ಲಾ ಏರ್‌ಲೈನ್ಸ್‌ಗಳಿಗೆ ಅನ್ವಯವಾಗುವಂತೆ ಬೆಲೆಯೊಂದನ್ನು ನಿಗದಿ ಮಾಡಿದೆ. 500-1000 ಕಿ.ಮೀ.ವರೆಗೆ ಗರಿಷ್ಠ 12 ಸಾವಿರ ರೂಪಾಯಿ ದರ ಇರಬೇಕು. ಹಾಗೂ 1000-1500 ಕಿ.ಮೀ.ವರೆಗೆ ಗರಿಷ್ಠ 15 ಸಾವಿರ ರೂಪಾಯಿ ದರ ಇರಬೇಕು ಎಂದು ಹೇಳಿದೆ. ಈ ನಿಗದಿಪಡಿಸಿದ ಟಿಕೆಟ್‌ ದರಕ್ಕಿಂತ ಹೆಚ್ಚಿನ ಹಣ ಪಡೆಯದಂತೆ ಸೂಚನೆ. ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.  ಇದರ ಜತೆಗೆ ಸಚಿವಾಲಯವು ಇಂಡಿಗೋ ಏರ್​ಲೈನ್ಸ್ ವಿಮಾನಗಳ ಹಾರಾಟ ರದ್ದಾಗಿರುವುದಕ್ಕೆ ಕಾರಣ ಏನು ಎಂಬುದನ್ನು ತಿಳಿಸಿ ಎಂದು ಇಂಡಿಗೋ ಏರ್​ಲೈನ್ಸ್ ಅಧಿಕಾರಿಗಳಿಗೆ ಸೂಚನೆಯನ್ನು ಕೂಡ ನೀಡಿದೆ. ಸಂಜೆ 6 ಗಂಟೆಗೆ ಸಚಿವಾಲಯಕ್ಕೆ ಬರುವಂತೆ ಅಧಿಕಾರಿಗಳಿಗೆ ಸಮನ್ಸ್‌ ನೀಡಲಾಗಿತ್ತು.ಇದೀಗ ಇಂಡಿಗೋ ವಿಮಾನ ಸಂಸ್ಥೆಯ ಅಧಿಕಾರಿಗಳು ವಿಮಾನಯಾನ ಸಚಿವಾಲಯಕ್ಕೆ ಭೇಟಿ ನೀಡಿದ್ದಾರೆ. ಇನ್ನು ಕೆಲವೇ ಕ್ಷಣದಲ್ಲಿ ಇಂಡಿಗೋ ವಿಮಾನ ಸಂಸ್ಥೆಯ ಅಧಿಕಾರಿಗಳ ಜತೆಗೆ ಸಭೆ ನಡೆಯಲಿದೆ.

ಇದನ್ನೂ ಓದಿ: ಇಂಡಿಗೋ ವಿಮಾನ ಎಡವಟ್ಟು: ದೆಹಲಿಯಿಂದ ಕೊಚ್ಚಿಯಲ್ಲಿ ಬಂದು ಇಳಿದ್ರೂ ತಲುಪಲಿಲ್ಲ ಮಹಿಳೆಯ ಸೂಟ್‌ಕೇಸ್

ಟ್ವೀಟ್​​ ಇಲ್ಲಿದೆ ನೋಡಿ:

ರದ್ದಾದ ವಿಮಾನಗಳ ಪ್ರಯಾಣಿಕರಿಗೆ ಹಣ ವಾಪಸ್ ಮಾಡುವುದರ ಜತೆಗೆ ಲಗೇಜ್ ಹಾಗೂ  ವಸ್ತುಗಳನ್ನು ಸುರಕ್ಷಿತವಾಗಿ ಪ್ರಯಾಣಿಕರಿಗೆ 48 ಗಂಟೆಯೊಳಗೆ ತಲುಪಿಸುವಂತೆ ಆದೇಶ ನೀಡಿದೆ. ಕಳೆದ ಐದು ದಿನಗಳಿಂದ ಇಂಡಿಗೋ ವಿಮಾನ ರದ್ದಾಗಿತ್ತು. ಹಾರಾಟ ರದ್ದಿನಿಂದ ಹಣ ನೀಡಿ ಟಿಕೆಟ್ ಖರೀದಿಸಿದ್ದ ಪ್ರಯಾಣಿಕರು ಪರದಾಡಿದ್ರು, ಹೀಗಾಗಿ ಬುಕ್ ಆಗಿದ್ದ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡವರಿಗೆ ಹಣ ವಾಪಸ್ ಆಗಿರಲಿಲ್ಲ. ಇದೀಗ ಈ ಗೊಂದಲಕ್ಕೆ ಸರ್ಕಾರ ಹಸ್ತಕ್ಷೇಪ ಮಾಡಿದ್ದು, ನಾಳೆ ರಾತ್ರಿ 8 ಗಂಟೆಯೊಳಗೆ ಹಣ ನೀಡುವಂತೆ. ಹಾಗೂ ಮರು ಬುಕ್ಕಿಂಗ್ ಮಾಡಿಕೊಳ್ಳುವವರಿಗೆ ಯಾವುದೇ ಶುಲ್ಕವಿಲ್ಲದೆ ಟಿಕೆಟ್ ಬುಕ್ ಮಾಡಿಕೊಡುವಂತೆ ಆದೇಶ ನೀಡಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Sat, 6 December 25

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್