ಕೊವಿಡ್​ 19 ಲಸಿಕೆ ಪಡೆದವರಿಗೆ ಪ್ರಯಾಣ ಶುಲ್ಕದಲ್ಲಿ ಶೇ.10ರಷ್ಟು ರಿಯಾಯಿತಿ; ವಿಶೇಷ ಕೊಡುಗೆ ನೀಡಿದ ಇಂಡಿಗೋ ಏರ್​ಲೈನ್ಸ್​​

18ವರ್ಷ ಮೇಲ್ಪಟ್ಟ ಭಾರತೀಯರಿಗೆ ಈ ಕೊಡುಗೆ ಅನ್ವಯ ಆಗುತ್ತದೆ. ಟಿಕೆಟ್​ ಬುಕ್ಕಿಂಗ್​ ಮಾಡುವಾಗ ಅವರು ಭಾರತದಲ್ಲೇ ಇರಬೇಕು ಮತ್ತು ಭಾರತದಲ್ಲಿ ಮಾನ್ಯತೆ ಪಡೆದ ಕೊವಿಡ್ ಲಸಿಕೆಯ ಒಂದು ಅಥವಾ ಎರಡೂ ಡೋಸ್ ಲಸಿಕೆ ಪಡೆದಿರಬೇಕು.

ಕೊವಿಡ್​ 19 ಲಸಿಕೆ ಪಡೆದವರಿಗೆ ಪ್ರಯಾಣ ಶುಲ್ಕದಲ್ಲಿ ಶೇ.10ರಷ್ಟು ರಿಯಾಯಿತಿ; ವಿಶೇಷ ಕೊಡುಗೆ ನೀಡಿದ ಇಂಡಿಗೋ ಏರ್​ಲೈನ್ಸ್​​
ಇಂಡಿಗೋ ಸಂಸ್ಥೆಯ ವಿಮಾನ
Follow us
| Updated By: Lakshmi Hegde

Updated on:Jun 23, 2021 | 2:54 PM

ಭಾರತದ ಲಸಿಕಾ ಅಭಿಯಾನವನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಇಂಡಿಗೋ ವಿಮಾನಯಾನ ಸಂಸ್ಥೆ ಮಹತ್ವದ ನಿರ್ಧಾರ ಘೋಷಿಸಿದೆ. ಲಸಿಕೆಯನ್ನು ಪಡೆದ ಗ್ರಾಹಕರಿಗೆ ಪ್ರಯಾಣದ ವೆಚ್ಚದಲ್ಲಿ ಡಿಸ್​ಕೌಂಟ್​ ನೀಡುವುದಾಗಿ ತಿಳಿಸಿದೆ. ಅಂದರೆ ಲಸಿಕೆಯನ್ನು ಪಡೆದ (ಒಂದೇ ಡೋಸ್​ ಇರಲಿ, ಎರಡು ಡೋಸ್​ ಆಗಿರಲಿ) ಗ್ರಾಹಕರಿಗೆ ಇಂಡಿಗೋ ಪ್ರಯಾಣದ ಶುಲ್ಕದಲ್ಲಿ ಶೇ.10ರಷ್ಟು ಡಿಸ್​ಕೌಂಟ್ ನೀಡುವುದಾಗಿ ಹೇಳಿದೆ. ಇಂದಿನಿಂದಲೇ ಇದು ಅನ್ವಯ ಆಗಲಿದ್ದು, ಭಾರತದಲ್ಲಿ ವ್ಯಾಕ್ಸಿನ್​ ಪಡೆದವರಿಗೆ ಪ್ರಯಾಣ ಶುಲ್ಕದಲ್ಲಿ ರಿಯಾಯಿತಿ ನೀಡಿದ ಮೊದಲ ವಿಮಾನಯಾನ ಸಂಸ್ಥೆ ಆಗಿದೆ.

ಶದಲ್ಲೇ ಅತ್ಯಂತ ದೊಡ್ಡ ವಿಮಾನಸಂಸ್ಥೆ ನಮ್ಮದು. ಕೊರೊನಾ ವಿರುದ್ಧ ಹೋರಾಟದಲ್ಲಿ ನಾವೂ ಪಾಲ್ಗೊಂಡಿದ್ದೇವೆ. ಹಾಗೇ, ಲಸಿಕಾ ಅಭಿಯಾನವನ್ನು ಉತ್ತೇಜಿಸುವುದೂ ಸಹ ನಮ್ಮ ಜವಾಬ್ದಾರಿಯಾಗಿದೆ. ಹಾಗಾಗಿ ನಾವೂ ಸಹ ವಿಶೇಷ ಕೊಡುಗೆ ಘೋಷಣೆ ಮಾಡಿದ್ದೇವೆ. ನಮ್ಮ ಈ ಕೊಡುಗೆಯಿಂದ ಹೆಚ್ಚೆಚ್ಚು ಜನರು ಲಸಿಕೆಯನ್ನು ಪಡೆಯಬಹುದು. ಅಲ್ಲದೆ, ಕಡಿಮೆ ದರದಲ್ಲಿ, ಸುರಕ್ಷಿತವಾಗಿ ಇಂಡಿಗೋದಲ್ಲಿ ಪ್ರಯಾಣ ಮಾಡಬಹುದು ಎಂಬ ನಂಬಿಕೆಯೂ ಅವರಲ್ಲಿ ಹುಟ್ಟುತ್ತದೆ ಎಂದು ಇಂಡಿಗೋದ ಕಂದಾಯ ಅಧಿಕಾರಿ ಸಂಜಯ್​ ಕುಮಾರ್​ ತಿಳಿಸಿದ್ದಾರೆ.

18ವರ್ಷ ಮೇಲ್ಪಟ್ಟ ಭಾರತೀಯರಿಗೆ ಈ ಕೊಡುಗೆ ಅನ್ವಯ ಆಗುತ್ತದೆ. ಟಿಕೆಟ್​ ಬುಕ್ಕಿಂಗ್​ ಮಾಡುವಾಗ ಅವರು ಭಾರತದಲ್ಲೇ ಇರಬೇಕು ಮತ್ತು ಭಾರತದಲ್ಲಿ ಮಾನ್ಯತೆ ಪಡೆದ ಕೊವಿಡ್ ಲಸಿಕೆಯ ಒಂದು ಅಥವಾ ಎರಡೂ ಡೋಸ್ ಲಸಿಕೆ ಪಡೆದಿರಬೇಕು ಎಂದೂ ಇಂಡಿಗೋ ಸಂಸ್ಥೆ ಸ್ಪಷ್ಟಪಡಿಸಿದೆ. ಹಾಗೇ, ಪ್ರಯಾಣಿಕರು ತಮ್ಮ ಆರೋಗ್ಯ ಸೇತು ಆ್ಯಪ್​ನಲ್ಲಿ ಲಸಿಕೆ ಪಡೆದ ಮಾಹಿತಿಯನ್ನು ಏರ್​ಪೋರ್ಟ್​​ನ ಚೆಕ್​ ಇನ್​ ಕೌಂಟರ್​ ಮತ್ತು ಬೋರ್ಡಿಂಗ್​ ಗೇಟ್​ ಬಳಿ ಅಧಿಕಾರಿಗಳಿಗೆ ತೋರಿಸಬೇಕು ಎಂದೂ ತಿಳಿಸಿದೆ. ಸದ್ಯ ಈ ಕೊಡುಗೆಯಡಿ ಸೀಮಿತ ಟಿಕೆಟ್​ಗಳಷ್ಟೇ ಲಭ್ಯವಿದ್ದು, ಅದಕ್ಕೆ ತಕ್ಕಂತೆ ನೀಡುತ್ತೇವೆ ಎಂದೂ ಕಂಪನಿ ಹೇಳಿದೆ.

ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ನೀಡಿದ ಆ ಒಂದು ಕರೆಗೆ ಪವಾಡವೇ ನಡೆದು ಹೋಯ್ತು

IndiGo rolls out 10 Percent discount for vaccinated customers first in Country

Published On - 2:51 pm, Wed, 23 June 21

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು