AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಲಸಿಕೆ ಪಡೆದವರಿಗೆ ಪ್ರಯಾಣ ಶುಲ್ಕದಲ್ಲಿ ಶೇ.10ರಷ್ಟು ರಿಯಾಯಿತಿ; ವಿಶೇಷ ಕೊಡುಗೆ ನೀಡಿದ ಇಂಡಿಗೋ ಏರ್​ಲೈನ್ಸ್​​

18ವರ್ಷ ಮೇಲ್ಪಟ್ಟ ಭಾರತೀಯರಿಗೆ ಈ ಕೊಡುಗೆ ಅನ್ವಯ ಆಗುತ್ತದೆ. ಟಿಕೆಟ್​ ಬುಕ್ಕಿಂಗ್​ ಮಾಡುವಾಗ ಅವರು ಭಾರತದಲ್ಲೇ ಇರಬೇಕು ಮತ್ತು ಭಾರತದಲ್ಲಿ ಮಾನ್ಯತೆ ಪಡೆದ ಕೊವಿಡ್ ಲಸಿಕೆಯ ಒಂದು ಅಥವಾ ಎರಡೂ ಡೋಸ್ ಲಸಿಕೆ ಪಡೆದಿರಬೇಕು.

ಕೊವಿಡ್​ 19 ಲಸಿಕೆ ಪಡೆದವರಿಗೆ ಪ್ರಯಾಣ ಶುಲ್ಕದಲ್ಲಿ ಶೇ.10ರಷ್ಟು ರಿಯಾಯಿತಿ; ವಿಶೇಷ ಕೊಡುಗೆ ನೀಡಿದ ಇಂಡಿಗೋ ಏರ್​ಲೈನ್ಸ್​​
ಇಂಡಿಗೋ ಸಂಸ್ಥೆಯ ವಿಮಾನ
TV9 Web
| Edited By: |

Updated on:Jun 23, 2021 | 2:54 PM

Share

ಭಾರತದ ಲಸಿಕಾ ಅಭಿಯಾನವನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಇಂಡಿಗೋ ವಿಮಾನಯಾನ ಸಂಸ್ಥೆ ಮಹತ್ವದ ನಿರ್ಧಾರ ಘೋಷಿಸಿದೆ. ಲಸಿಕೆಯನ್ನು ಪಡೆದ ಗ್ರಾಹಕರಿಗೆ ಪ್ರಯಾಣದ ವೆಚ್ಚದಲ್ಲಿ ಡಿಸ್​ಕೌಂಟ್​ ನೀಡುವುದಾಗಿ ತಿಳಿಸಿದೆ. ಅಂದರೆ ಲಸಿಕೆಯನ್ನು ಪಡೆದ (ಒಂದೇ ಡೋಸ್​ ಇರಲಿ, ಎರಡು ಡೋಸ್​ ಆಗಿರಲಿ) ಗ್ರಾಹಕರಿಗೆ ಇಂಡಿಗೋ ಪ್ರಯಾಣದ ಶುಲ್ಕದಲ್ಲಿ ಶೇ.10ರಷ್ಟು ಡಿಸ್​ಕೌಂಟ್ ನೀಡುವುದಾಗಿ ಹೇಳಿದೆ. ಇಂದಿನಿಂದಲೇ ಇದು ಅನ್ವಯ ಆಗಲಿದ್ದು, ಭಾರತದಲ್ಲಿ ವ್ಯಾಕ್ಸಿನ್​ ಪಡೆದವರಿಗೆ ಪ್ರಯಾಣ ಶುಲ್ಕದಲ್ಲಿ ರಿಯಾಯಿತಿ ನೀಡಿದ ಮೊದಲ ವಿಮಾನಯಾನ ಸಂಸ್ಥೆ ಆಗಿದೆ.

ಶದಲ್ಲೇ ಅತ್ಯಂತ ದೊಡ್ಡ ವಿಮಾನಸಂಸ್ಥೆ ನಮ್ಮದು. ಕೊರೊನಾ ವಿರುದ್ಧ ಹೋರಾಟದಲ್ಲಿ ನಾವೂ ಪಾಲ್ಗೊಂಡಿದ್ದೇವೆ. ಹಾಗೇ, ಲಸಿಕಾ ಅಭಿಯಾನವನ್ನು ಉತ್ತೇಜಿಸುವುದೂ ಸಹ ನಮ್ಮ ಜವಾಬ್ದಾರಿಯಾಗಿದೆ. ಹಾಗಾಗಿ ನಾವೂ ಸಹ ವಿಶೇಷ ಕೊಡುಗೆ ಘೋಷಣೆ ಮಾಡಿದ್ದೇವೆ. ನಮ್ಮ ಈ ಕೊಡುಗೆಯಿಂದ ಹೆಚ್ಚೆಚ್ಚು ಜನರು ಲಸಿಕೆಯನ್ನು ಪಡೆಯಬಹುದು. ಅಲ್ಲದೆ, ಕಡಿಮೆ ದರದಲ್ಲಿ, ಸುರಕ್ಷಿತವಾಗಿ ಇಂಡಿಗೋದಲ್ಲಿ ಪ್ರಯಾಣ ಮಾಡಬಹುದು ಎಂಬ ನಂಬಿಕೆಯೂ ಅವರಲ್ಲಿ ಹುಟ್ಟುತ್ತದೆ ಎಂದು ಇಂಡಿಗೋದ ಕಂದಾಯ ಅಧಿಕಾರಿ ಸಂಜಯ್​ ಕುಮಾರ್​ ತಿಳಿಸಿದ್ದಾರೆ.

18ವರ್ಷ ಮೇಲ್ಪಟ್ಟ ಭಾರತೀಯರಿಗೆ ಈ ಕೊಡುಗೆ ಅನ್ವಯ ಆಗುತ್ತದೆ. ಟಿಕೆಟ್​ ಬುಕ್ಕಿಂಗ್​ ಮಾಡುವಾಗ ಅವರು ಭಾರತದಲ್ಲೇ ಇರಬೇಕು ಮತ್ತು ಭಾರತದಲ್ಲಿ ಮಾನ್ಯತೆ ಪಡೆದ ಕೊವಿಡ್ ಲಸಿಕೆಯ ಒಂದು ಅಥವಾ ಎರಡೂ ಡೋಸ್ ಲಸಿಕೆ ಪಡೆದಿರಬೇಕು ಎಂದೂ ಇಂಡಿಗೋ ಸಂಸ್ಥೆ ಸ್ಪಷ್ಟಪಡಿಸಿದೆ. ಹಾಗೇ, ಪ್ರಯಾಣಿಕರು ತಮ್ಮ ಆರೋಗ್ಯ ಸೇತು ಆ್ಯಪ್​ನಲ್ಲಿ ಲಸಿಕೆ ಪಡೆದ ಮಾಹಿತಿಯನ್ನು ಏರ್​ಪೋರ್ಟ್​​ನ ಚೆಕ್​ ಇನ್​ ಕೌಂಟರ್​ ಮತ್ತು ಬೋರ್ಡಿಂಗ್​ ಗೇಟ್​ ಬಳಿ ಅಧಿಕಾರಿಗಳಿಗೆ ತೋರಿಸಬೇಕು ಎಂದೂ ತಿಳಿಸಿದೆ. ಸದ್ಯ ಈ ಕೊಡುಗೆಯಡಿ ಸೀಮಿತ ಟಿಕೆಟ್​ಗಳಷ್ಟೇ ಲಭ್ಯವಿದ್ದು, ಅದಕ್ಕೆ ತಕ್ಕಂತೆ ನೀಡುತ್ತೇವೆ ಎಂದೂ ಕಂಪನಿ ಹೇಳಿದೆ.

ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ನೀಡಿದ ಆ ಒಂದು ಕರೆಗೆ ಪವಾಡವೇ ನಡೆದು ಹೋಯ್ತು

IndiGo rolls out 10 Percent discount for vaccinated customers first in Country

Published On - 2:51 pm, Wed, 23 June 21

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್