AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನದ ಮೂಲ ಆಶಯ ತಿರುಚಲು ಮುಂದಾಗಿದ್ದ ಇಂದಿರಾ ಗಾಂಧಿ: ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ

ಆರ್​ಎಸ್​ಎಸ್ ಮತ್ತು ಬಿಜೆಪಿ ಸಂವಿಧಾನದ ಮೂಲ ಆಶಯವನ್ನು ಬದಲಾಯಿಸಲು ಸಂಚು ಹೂಡುತ್ತಿವೆ ಎಂಬ ಕಾಂಗ್ರೆಸ್ ಆರೋಪಕ್ಕೆ ಭಾರತೀಯ ಜನತಾ ಪಕ್ಷ ಸಾಕ್ಷಿ ಸಮೇತ ತಿರುಗೇಟು ನೀಡಿದೆ. ತುರ್ತು ಪರಿಸ್ಥಿತಿ ಸಂದರ್ಭದ ಪತ್ರಿಕಾ ವರದಿ ಉಲ್ಲೇಖಿಸಿ ಟ್ವೀಟ್ ಮಾಡಿರುವ ಬಿಜೆಪಿ ವಕ್ತಾರರು, ಇಂದಿರಾ ಗಾಂಧಿ ಸಂವಿಧಾನದ ಮೂಲ ಆಶಯವನ್ನೇ ಮಾರ್ಪಾಟು ಮಾಡಲು ಉದ್ದೇಶಿಸಿದ್ದರು. ಆದರೆ, ದೇಶವು ಅದರಿಂದ ಸ್ವಲ್ಪದರಲ್ಲೇ ಬಚಾವಾಯಿತು ಎಂದಿದ್ದಾರೆ.

ಸಂವಿಧಾನದ ಮೂಲ ಆಶಯ ತಿರುಚಲು ಮುಂದಾಗಿದ್ದ ಇಂದಿರಾ ಗಾಂಧಿ: ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ
ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ
Ganapathi Sharma
|

Updated on: Jun 28, 2025 | 10:42 AM

Share

ನವದೆಹಲಿ, ಜೂನ್ 28: ಭಾರತೀಯ ಸಂವಿಧಾನದಲ್ಲಿರುವ (Indian Constitution) ‘‘ಜಾತ್ಯತೀತ’’ ಮತ್ತು ‘‘ಸಮಾಜವಾದ’’ ವಿಚಾರಗಳ ಬಗ್ಗೆ ಆರ್​ಎಸ್​ಎಸ್ ನಾಯಕ ದತ್ತಾತ್ರೇಯ ಹೊಸ ಬಾಳೆ ನೀಡಿರುವ ಹೇಳಿಕೆಯ ನಂತರ ಬಿಜೆಪಿ (BJP) ಮತ್ತು ಸಂಘ ಪರಿವಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ತೀವ್ರಗೊಳಿಸಿದೆ‌. ಆದರೆ ಇದೇ ಸಂದರ್ಭದಲ್ಲಿ, ತುರ್ತು ಪರಿಸ್ಥಿತಿಯ ಕಾಲಘಟ್ಟದ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಕೂಡ ಕಾಂಗ್ರೆಸ್​ಗೆ (Congress) ತೀಕ್ಷ್ಣವಾದ ತಿರುಗೇಟು ನೀಡಿದೆ. ತುರ್ತು ಪರಿಸ್ಥಿತಿಯ ಕಾಲದಲ್ಲಿ ಸಂವಿಧಾನದ ಮೂಲ ಆಶಯವನ್ನೇ ಬದಲಾಯಿಸಲು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಮುಂದಾಗಿದ್ದರು ಎಂಬ ಅಂದಿನ ಪತ್ರಿಕಾ ತುಣುಕನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ.

ಸಂವಿಧಾನದ ಮೂಲ ಅಶಯವನ್ನು ಬದಲಾಯಿಸಲು ಇಂದಿರಾಗಾಂಧಿ ಮುಂದಾಗಿದ್ದರು ಎಂಬ ‘‘ಟೈಮ್ಸ್ ಆಫ್ ಇಂಡಿಯಾ’’ ಪತ್ರಿಕೆಯ ವರದಿಯನ್ನು ಉಲ್ಲೇಖಿಸಿ ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಟೀಕಾ ಪ್ರಹಾರ ಮಾಡಿದ್ದಾರೆ.

ಇದನ್ನೂ ಓದಿ
Image
ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆ.! ಅನುಮಾನ ಸೃಷ್ಟಿಸಿದ ಇನ್ಸ್ಟಾ ಪೋಸ್ಟ್‌
Image
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ; 500ಕ್ಕೂ ಹೆಚ್ಚು ಭಕ್ತರಿಗೆ ಗಾಯ
Image
ಭಾರತದ ವಿರುದ್ಧ ಚೀನಾದ ಗೌಪ್ಯ ಮಾಹಿತಿಯನ್ನು ಒಪ್ಪಿಕೊಂಡ ಪಾಕ್ ರಕ್ಷಣಾ ಸಚಿವ
Image
ಚರ್ಚೆ ಹುಟ್ಟು ಹಾಕಿದ ಹೊಸಬಾಳೆ 'ಸಮಾಜವಾದ-ಜಾತ್ಯಾತೀತ' ಹೇಳಿಕೆ

ಸಂವಿಧಾನದ ಆತ್ಮವನ್ನೇ ಮರಳಿ ಬರೆಯಲು ಇಂದಿರಾಗಾಂಧಿ ಉದ್ದೇಶಿಸಿದ್ದರು. ಇದು ಯಾರೋ ಹೇಳಿದ ಮಾತಲ್ಲ. 1975 ಡಿಸೆಂಬರ್ 30 ರಂದು ಪ್ರಕಟವಾದ ‘‘ಟೈಮ್ಸ್ ಆಫ್ ಇಂಡಿಯಾ’’ ಪತ್ರಿಕೆಯ ವರದಿಯ ತುಣುಕು. ಭಾರತೀಯ ಜನರ ಪ್ರಜಾಪ್ರಭುತ್ವದ ಕಾಳಜಿಗೆ ಧನ್ಯವಾದಗಳು. ಕಾಂಗ್ರೆಸ್ ಆಡಳಿತದಲ್ಲಿ ಸಂಪೂರ್ಣ ಪರಮಾಧಿಕಾರದತ್ತ ಹೊರಳುವುದರಲ್ಲಿದ್ದ ದೇಶ ಸ್ವಲ್ಪದರಲ್ಲೇ ಬಚಾವಾಯಿತು ಎಂದು ಭಂಡಾರಿ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಪ್ರದೀಪ್ ಭಂಡಾರಿ ಎಕ್ಸ್ ಸಂದೇಶ

‘ಸಂವಿಧಾನವು ದೇಶದ ಜನರಿಗೆ ಸೇವೆ ಒದಗಿಸಬಲ್ಲುದೇ’ ಎಂದು ಇಂದಿರಾಗಾಂಧಿ ಪ್ರಶ್ನಿಸಿದ್ದಕ್ಕೆ ಸಂಬಂಧಿಸಿದ ‘‘ಟೈಮ್ ಆಫ್’’ ಇಂಡಿಯಾ ಪತ್ರಿಕೆಯ ವರದಿಯನ್ನು ಕೂಡ ಅವರು ಎಕ್ಸ್ ಸಂದೇಶದಲ್ಲಿ ಲಗತ್ತಿಸಿದ್ದಾರೆ.

ಸಂವಿಧಾನದಲ್ಲಿ ಸಮಾಜವಾದ ಮತ್ತು ಜಾತ್ಯತೀತ ಪದಗಳನ್ನು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೇರಿಸಲಾಗಿತ್ತು. ಆ ವಿಚಾರದ ಬಗ್ಗೆ ಚರ್ಚೆ ಆಗಬೇಕಿದೆ ಎಂದು ಆರೆಸ್ಸೆಸ್ ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕರಿಂದ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ಆರೆಸ್ಸೆಸ್ ಮತ್ತು ಬಿಜೆಪಿ ಸಂವಿಧಾನದ ಮೂಲ ಆಶಯಗಳನ್ನು ಬದಲಾಯಿಸಲು ಸಂಚು ಮಾಡುತ್ತಿದೆ. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಹೇಳಿತ್ತು.

ಇದನ್ನೂ ಓದಿ: ಚರ್ಚೆ ಹುಟ್ಟು ಹಾಕಿದ ಹೊಸಬಾಳೆ ‘ಸಮಾಜವಾದ-ಜಾತ್ಯಾಜೀತ’ ಹೇಳಿಕೆ: ಸಂವಿಧಾನ ವಿರೋಧಿ ಎಂದ ಕೈಗೆ ಸಂತೋಷ್ ಕೌಂಟರ್

ಆದರೆ ಮತ್ತೊಂದೆಡೆ, ಸಂವಿಧಾನದ ಮೂಲ ಆಶಯವನ್ನು ಬದಲಾಯಿಸಿದ್ದು, ಮತ್ತು ಮತ್ತಷ್ಟು ಬದಲಾಯಿಸು ಮುಂದಾಗಿದ್ದೇ ಕಾಂಗ್ರೆಸ್. ಅಂಬೇಡ್ಕರ್ ರೂಪಿಸಿದ್ದ ಸಂವಿಧಾನದ ಮೂಲ ವಿಚಾರಗಳನ್ನು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಾಂಗ್ರೆಸ್ ತಿದ್ದುಪಡಿ ಮಾಡಿತ್ತು ಎಂದು ಬಿಜೆಪಿ ತಿರುಗೇಟು ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ