AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಚಕ್ಕರ್ ಹೊಡೆದು ಒಟ್ಟಿಗೇ ವಿಷ ಕುಡಿದ ಮೂವರು ಬಾಲಕಿಯರು; ಇಬ್ಬರು ಸಾವು, ಒಬ್ಬಳು ಬಚಾವ್

ಇಂದೋರ್​​ಗೆ ಹೋಗಿ ವಿಷ ಖರೀದಿಸಿದ ಅವರು ಆ ವಿಷ ಕುಡಿದಿದ್ದಾರೆ. ಮೂವರಲ್ಲಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದು, ಇನ್ನೊಬ್ಬಳ ಸ್ಥಿತಿ ಚಿಂತಾಜನಕವಾಗಿದೆ. ವಿಷ ಸೇವಿಸಲು ಕಾರಣವೇನೆಂದು ಇನ್ನೂ ಖಚಿತವಾಗಿಲ್ಲ.

ಶಾಲೆಗೆ ಚಕ್ಕರ್ ಹೊಡೆದು ಒಟ್ಟಿಗೇ ವಿಷ ಕುಡಿದ ಮೂವರು ಬಾಲಕಿಯರು; ಇಬ್ಬರು ಸಾವು, ಒಬ್ಬಳು ಬಚಾವ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 29, 2022 | 11:57 AM

Share

ಇಂದೋರ್: ಶಾಲೆಗೆ ಬಂಕ್ ಮಾಡಿದ ಮೂವರು ಬಾಲಕಿಯರು ಒಟ್ಟಿಗೇ ವಿಷ ಸೇವಿಸಿರುವ ಘಟನೆ ಇಂದೋರ್​​ನಲ್ಲಿ (Indore) ನಡೆದಿದೆ. ಇಲ್ಲಿನ 16 ವರ್ಷದ ಮೂವರು ಬಾಲಕಿಯರು ಶಾಲೆಗೆ ಚಕ್ಕರ್ ಹಾಕಿದ್ದರು. ಪೇಟೆಗೆ ಹೋಗಿ ವಿಷ ಖರೀದಿಸಿದ ಅವರು ಆ ವಿಷ ಕುಡಿದಿದ್ದಾರೆ. ಮೂವರಲ್ಲಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದು, ಇನ್ನೊಬ್ಬಳ ಸ್ಥಿತಿ ಚಿಂತಾಜನಕವಾಗಿದೆ. ವಿಷ ಸೇವಿಸಲು ಕಾರಣವೇನೆಂದು ಇನ್ನೂ ಖಚಿತವಾಗಿಲ್ಲ.

ಹೆಚ್ಚುವರಿ ಡಿಸಿಪಿ ಪ್ರಶಾಂತ್ ಚೌಬೆ ಈ ಬಗ್ಗೆ ಮಾಹಿತಿ ನೀಡಿದ್ದು, ಹುಡುಗಿಯರು ಮೊದಲೇ ವಿಷವನ್ನು ಖರೀದಿಸಿ, ಇಂದೋರ್‌ಗೆ 120 ಕಿಮೀ ಪ್ರಯಾಣಿಸಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಆದರೆ, ಇದಕ್ಕೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ತನಿಖಾ ವರದಿಯ ಪ್ರಕಾರ, ಆ ಮೂವರಲ್ಲಿ ಒಬ್ಬಳು ಹುಡುಗಿ ತನ್ನ ಗೆಳೆಯನನ್ನು ಭೇಟಿಯಾಗಲು ಬಂದಿದ್ದಳು. ಒಂದುವೇಳೆ ಅವನು ತನ್ನನ್ನು ಭೇಟಿಯಾಗಲು ನಿರಾಕರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳಲು ವಿಷವನ್ನು ತೆಗೆದುಕೊಂಡು ಹೋಗಿದ್ದಳು. ಅವಳ ಜೊತೆ ಹೋಗಿದ್ದ ಇನ್ನೊಬ್ಬಳು ಹುಡುಗಿ ಕೌಟುಂಬಿಕ ಕಲಹಗಳಿಂದಾಗಿ ಆತ್ಮಹತ್ಯೆಗೆ ನಿರ್ಧರಿಸಿದ್ದಳು. ತನ್ನ ಇಬ್ಬರು ಸ್ನೇಹಿತೆಯರು ವಿಷ ಕುಡಿದಿದ್ದನ್ನು ನೋಡಿ ಮೂರನೆಯ ಬಾಲಕಿ ವಿಷ ಸೇವಿಸಿದ್ದಾಳೆ ಎನ್ನಲಾಗಿದೆ.

ಇದನ್ನೂ ಓದಿ: ತೋಟದಲ್ಲಿ ವಿಷ ಬೆರೆಸಿಟ್ಟಿದ್ದ ಅಕ್ಕಿಯನ್ನು ತಿಂದು 5 ಜಾನುವಾರುಗಳು ಸಾವು: ಕಣ್ಣೀರಿಟ್ಟ ಮಾಲೀಕರು

ಆ ಹುಡುಗಿಯರು ಇಂದೋರ್ ನಗರದಲ್ಲಿ ಸ್ವಲ್ಪ ಸಮಯದವರೆಗೆ ಸುತ್ತಾಡಿದರು. ನಂತರ ಭನ್ವಾರ್ಕುವಾನ್ ಪ್ರದೇಶದ ಆಸ್ಪತ್ರೆಯೊಂದರ ಬಳಿಯ ಪಾರ್ಕ್​ನಲ್ಲಿ ವಿಷ ಸೇವಿಸಿದರು. ತಕ್ಷಣ ಮೂವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ವೇಳೆ ಇಬ್ಬರು ಮೃತಪಟ್ಟಿದ್ದಾರೆ. ಅವರ ಕುಟುಂಬಸ್ಥರಿಗೆ ವಿಷಯ ತಿಳಿಸಲಾಗಿದ್ದು, ತನಿಖೆ ಮುಂದುವರೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ