AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣಕ್ಕಾಗಿ ಮೊಬೈಲ್ ಕದ್ದ PUC ವಿದ್ಯಾರ್ಥಿನಿಗೆ, ಅದರ ಮಾಲೀಕ ಮಾಡಿದ್ದೇನು ಗೊತ್ತಾ?

ಇಂದೋರ್: 16 ವರ್ಷದ ಯುವತಿಯೊಬ್ಬಳು ತನ್ನ ವಿದ್ಯಾಭ್ಯಾಸಕ್ಕಾಗಿ ಕಾಲೇಜಿನ ಶುಲ್ಕ ಪಾವತಿಸಲು, ತನ್ನ ತಾಯಿ ಕೆಲಸ ಮಾಡಲು ತೆರಳಿದ್ದ ಮನೆ ಯಜಮಾನನ ಫೋನ್ ಕದ್ದು ಅಡಮಾನ ಇಟ್ಟಿರುವ ಘಟನೆ ಇಂದೋರ್ ನಲ್ಲಿ ನಡೆದಿದೆ. ಫೋನ್ ಕಾಣದಾದಾಗ ಗಾಬರಿಗೊಂಡ ಮನೆ ಯಜಮಾನ ಧೀರಜ್ ದುಬೆ ಈ ವಿಚಾರವಾಗಿ ದ್ವಾರಕಪುರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಪೊಲೀಸರಿಂದ ಯಾವುದೇ ಪ್ರಯೋಜನ ಆಗದ್ದನ್ನು ಕಂಡ ಫೋನ್ ಮಾಲಿಕ, ಫೋನ್ ಕಳ್ಳತನವಾದ ದಿನದಂದು ತನ್ನ ಮನೆಗೆ ಬಂದಿದ್ದ ಜನರ ಪಟ್ಟಿ ಮಾಡಿದ್ದಾನೆ. […]

ಶಿಕ್ಷಣಕ್ಕಾಗಿ ಮೊಬೈಲ್ ಕದ್ದ PUC ವಿದ್ಯಾರ್ಥಿನಿಗೆ, ಅದರ ಮಾಲೀಕ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​
|

Updated on: Aug 10, 2020 | 2:01 PM

Share

ಇಂದೋರ್: 16 ವರ್ಷದ ಯುವತಿಯೊಬ್ಬಳು ತನ್ನ ವಿದ್ಯಾಭ್ಯಾಸಕ್ಕಾಗಿ ಕಾಲೇಜಿನ ಶುಲ್ಕ ಪಾವತಿಸಲು, ತನ್ನ ತಾಯಿ ಕೆಲಸ ಮಾಡಲು ತೆರಳಿದ್ದ ಮನೆ ಯಜಮಾನನ ಫೋನ್ ಕದ್ದು ಅಡಮಾನ ಇಟ್ಟಿರುವ ಘಟನೆ ಇಂದೋರ್ ನಲ್ಲಿ ನಡೆದಿದೆ.

ಫೋನ್ ಕಾಣದಾದಾಗ ಗಾಬರಿಗೊಂಡ ಮನೆ ಯಜಮಾನ ಧೀರಜ್ ದುಬೆ ಈ ವಿಚಾರವಾಗಿ ದ್ವಾರಕಪುರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಪೊಲೀಸರಿಂದ ಯಾವುದೇ ಪ್ರಯೋಜನ ಆಗದ್ದನ್ನು ಕಂಡ ಫೋನ್ ಮಾಲಿಕ, ಫೋನ್ ಕಳ್ಳತನವಾದ ದಿನದಂದು ತನ್ನ ಮನೆಗೆ ಬಂದಿದ್ದ ಜನರ ಪಟ್ಟಿ ಮಾಡಿದ್ದಾನೆ. ಆ ದಿನದಂದು ಮನೆ ಕೆಲಸ ಮಾಡಲು ಬಂದಿದ್ದ ಮಹಿಳೆಯ ಜೊತೆ ಇದ್ದ ಹುಡುಗಿ ತನ್ನ ಮೊಬೈಲನ್ನು ಸ್ವಿಚ್ ಆಫ್ ಮಾಡಿ ತೆಗೆದುಕೊಂಡು ಹೋಗಿರಬಹುದೆಂದು ಶಂಕಿಸಿದ್ದಾನೆ.

ಕೂಡಲೇ ಆ ಹುಡುಗಿಯನ್ನು ಪ್ರಶ್ನಿಸಿದಾಗ ಈ ವಿಚಾರ ನಿಜಾಂಶ ಬೆಳಕಿಗೆ ಬಂದಿದೆ. ಹುಡುಗಿ ತನ್ನ 12ನೇ ತರಗತಿಯ ಶಾಲಾ ಶುಲ್ಕವನ್ನು ಪಾವತಿ ಮಾಡಲು ಹಣವಿಲ್ಲದಿದ್ದರಿಂದ, ಮೊಬೈಲ್ ಕದ್ದು, ಅಡಮಾನ ಇಟ್ಟಿರುವುದಾಗಿ ಹೇಳಿದ್ದಾಳೆ.ಜೊತೆಗೆ ಅಡಮಾನವಿಟ್ಟು ಬಂದಿದ್ದ ಹಣದಲ್ಲಿ 1,600 ರೂಪಾಯಿಯನ್ನು ಶಾಲಾ ಶುಲ್ಕ ಕಟ್ಟಿರುವ ರಶೀದಿ ತೋರಿಸಿದ್ದಾಳೆ. ಹಾಗೂ ನಾನು ಕೆಲಸಕ್ಕೆ ಸೇರಿದ ನಂತರ ಅದನ್ನು ಬಿಡಿಸಿ ಕೊಡಲು ಯೋಚಿಸಿದ್ದಳು ಎಂದು ತಿಳಿಸಿದ್ದಾಳೆ.

ಈ ವಿಚಾರ ತಿಳಿದ ಫೋನ್ ಮಾಲಿಕ ಸ್ವಲ್ಪ ಸಮಯ ದಿಗ್ಬ್ರಾಂತನಾಗಿದ್ದಾನೆ. ನಂತರ ಹುಡುಗಿಯ ಶಾಲಾ ಶುಲ್ಕವನ್ನು ಪೂರ್ತಿಯಾಗಿ ಪಾವತಿಸುವ ಜೊತೆಗೆ, ಹುಡುಗಿಯ ಮೇಲೆ ದೂರು ನೀಡದಿರಲು ನಿಶ್ಚಯಿಸಿದ್ದಾನೆ. ನಂತರ ಈ ವಿಚಾರ ತಿಳಿದ ಸ್ವಲ್ಪ ಜನ, ಹುಡುಗಿಯ ವಿದ್ಯಾಭ್ಯಾಸಕ್ಕಾಗಿ ಸಹಾಯ ಮಾಡಲು ಮುಂದೆ ಬಂದಿದ್ದಾರೆ ಎಂದೂ ತಿಳಿದುಬಂದಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ