AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೋರ್: HIV ಸೋಂಕಿತ ಎಂದು ಹೇಳದೇ ಇದ್ದುದಕ್ಕೆ ರೋಗಿಗೆ ಥಳಿಸಿದ ವೈದ್ಯ ಅಮಾನತು

ಎಂವೈಎಚ್ ನಗರದ ಸರ್ಕಾರಿ ಮಹಾತ್ಮಾ ಗಾಂಧಿ ಸ್ಮಾರಕ ವೈದ್ಯಕೀಯ ಕಾಲೇಜಿನೊಂದಿಗೆ ಸಂಯೋಜಿತವಾಗಿದೆ, ಅದರ ಡೀನ್ ಡಾ. ಸಂಜಯ್ ದೀಕ್ಷಿತ್ ಅವರು ಪ್ರಕರಣದ ತನಿಖೆ ಮತ್ತು ಮೂರು ದಿನಗಳಲ್ಲಿ ವರದಿಯನ್ನು ಸಲ್ಲಿಸಲು ಮೂರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ ಎಂದು ಡಾ ಠಾಕೂರ್ ಹೇಳಿದರು.

ಇಂದೋರ್: HIV ಸೋಂಕಿತ ಎಂದು ಹೇಳದೇ ಇದ್ದುದಕ್ಕೆ ರೋಗಿಗೆ ಥಳಿಸಿದ ವೈದ್ಯ ಅಮಾನತು
ಮಹಾರಾಜ ಯಶವಂತರಾವ್ ಆಸ್ಪತ್ರೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Oct 28, 2023 | 9:37 PM

Share

ಇಂದೋರ್ ಅಕ್ಟೋಬರ್ 28: ಇಂದೋರ್‌ನಲ್ಲಿರುವ (Indore) ಸರ್ಕಾರಿ ಸ್ವಾಮ್ಯದ ಮಹಾರಾಜ ಯಶವಂತರಾವ್ ಆಸ್ಪತ್ರೆಯ (MYH) ಕಿರಿಯ ವೈದ್ಯರೊಬ್ಬರು ಎಚ್‌ಐವಿ ಸೋಂಕಿತ (HIV-infected) ವ್ಯಕ್ತಿಗೆ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೊ ಶನಿವಾರ ವೈರಲ್ ಆದ ನಂತರ ವೈದ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 45 ವರ್ಷದ ಎಚ್‌ಐವಿ ಸೋಂಕಿತ ವ್ಯಕ್ತಿಯನ್ನು ಉಜ್ಜಯಿನಿಯ ಆಸ್ಪತ್ರೆಯಿಂದ ಎಂವೈಎಚ್‌ಗೆ ಮೂಳೆ ಮುರಿತಕ್ಕೆ ಚಿಕಿತ್ಸೆ ನೀಡಲು ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮೂಳೆ ಮುರಿತದ ಚಿಕಿತ್ಸೆಯನ್ನು ಪ್ರಾರಂಭಿಸುವ ಮೊದಲು ಎಚ್‌ಐವಿ ಸೋಂಕಿನ ಬಗ್ಗೆ ರೋಗಿ ಅಥವಾ ಆತನ ಕುಟುಂಬದವರ ಹೇಳದಿದ್ದಕ್ಕಾಗಿ ಕಿರಿಯ ವೈದ್ಯರು ಕೋಪಗೊಂಡಿದ್ದಾರೆ. ಕಿರಿಯ ವೈದ್ಯರು ರೋಗಿಗೆ ಸ್ಟ್ರೆಚರ್‌ನಲ್ಲಿ ನಿರಂತರವಾಗಿ ಕಪಾಳಮೋಕ್ಷ ಮಾಡಿ ಬೈಯುತ್ತಿರುವುದು ವಿಡಿಯೊದಲ್ಲಿದೆ. ಆರ್ಥೋಪೆಡಿಕ್ಸ್ ಮತ್ತು ಟ್ರಾಮಾಟಾಲಜಿ ವಿಭಾಗದಲ್ಲಿ ನೇಮಕಗೊಂಡ ವೈದ್ಯರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಎಂವೈಎಚ್ ಅಧೀಕ್ಷಕ ಡಾ.ಪ್ರಮೇಂದ್ರ ಠಾಕೂರ್ ಹೇಳಿದ್ದಾರೆ.

ಎಂವೈಎಚ್ ನಗರದ ಸರ್ಕಾರಿ ಮಹಾತ್ಮಾ ಗಾಂಧಿ ಸ್ಮಾರಕ ವೈದ್ಯಕೀಯ ಕಾಲೇಜಿನೊಂದಿಗೆ ಸಂಯೋಜಿತವಾಗಿದೆ, ಅದರ ಡೀನ್ ಡಾ. ಸಂಜಯ್ ದೀಕ್ಷಿತ್ ಅವರು ಪ್ರಕರಣದ ತನಿಖೆ ಮತ್ತು ಮೂರು ದಿನಗಳಲ್ಲಿ ವರದಿಯನ್ನು ಸಲ್ಲಿಸಲು ಮೂರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ ಎಂದು ಡಾ ಠಾಕೂರ್ ಹೇಳಿದರು.

ಇದನ್ನೂ ಓದಿ: ಸೂರತ್: ಕೊಟ್ಟ ಸಾಲ ವಾಪಸ್ ಸಿಗದೆ ಆರ್ಥಿಕ ಸಂಕಷ್ಟದಿಂದ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ

ಮೂಳೆ ಮುರಿತಕ್ಕೆ ಚಿಕಿತ್ಸೆ ನೀಡಲು ನಾವು ರೋಗಿಯನ್ನು ಎಂವೈಎಚ್‌ಗೆ ಕರೆತಂದಿದ್ದೇವೆ. ಆತನಿಗೆ ಈಗಾಗಲೇ ಎಚ್‌ಐವಿ ಸೋಂಕು ತಗುಲಿದೆ. ಎಚ್‌ಐವಿ ಸೋಂಕಿನ ಬಗ್ಗೆ ಹೇಳದಿದ್ದಕ್ಕೆ ಕಿರಿಯ ವೈದ್ಯರು ಆತನಿಗೆ ಥಳಿಸಿದ್ದಾರೆ. ಹಲ್ಲೆ ತಡೆಯಲು ಮಧ್ಯಪ್ರವೇಶಿಸಿದಾಗ ನನಗೂ ಪೆಟ್ಟು ಬಿದ್ದಿದೆ ಎಂದು ರೋಗಿಯ ಸಂಬಂಧಿ ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಸಹಾಯವಾಣಿಗೆ ದೂರು ಸಲ್ಲಿಸಿರುವುದಾಗಿ ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!