ಪ್ರೀತಿ ವಿಚಾರ ಹುಡುಗಿ ಮನೆಗೆ ಗೊತ್ತಾಯ್ತು, ಅವ್ರು ಒಪ್ಪದಿದ್ರೆ ಮಗ ಏನಾದ್ರೂ ಮಾಡಿಕೊಂಡಾನು ಎಂದು ತಂದೆ ಜತೆನೇ ಇದ್ರೂ ಉಳಿಸಲಾಗಲಿಲ್ಲ

ಮನೆಯವರಿಗೆ ವಿಡಿಯೋ ಕಾಲ್ ಮಾಡಿ ಬಳಿಕ ವಿದ್ಯಾರ್ಥಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಶನಿವಾರ ಸಂಜೆ ಎಂಐಜಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಬಿ.ಫಾರ್ಮಾ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .

ಪ್ರೀತಿ ವಿಚಾರ ಹುಡುಗಿ ಮನೆಗೆ ಗೊತ್ತಾಯ್ತು, ಅವ್ರು ಒಪ್ಪದಿದ್ರೆ ಮಗ ಏನಾದ್ರೂ ಮಾಡಿಕೊಂಡಾನು ಎಂದು ತಂದೆ ಜತೆನೇ ಇದ್ರೂ ಉಳಿಸಲಾಗಲಿಲ್ಲ
ವಿದ್ಯಾರ್ಥಿ

Updated on: Apr 05, 2026 | 8:22 AM

ಇಂದೋರ್, ಏಪ್ರಿಲ್ 5: ಮನೆಯವರಿಗೆ ವಿಡಿಯೋ ಕಾಲ್ ಮಾಡಿ ಬಳಿಕ ವಿದ್ಯಾರ್ಥಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಶನಿವಾರ ಸಂಜೆ ಎಂಐಜಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಬಿ.ಫಾರ್ಮಾ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .

ಸಂಜೆ 6.30 ರ ಸುಮಾರಿಗೆ ವಿದ್ಯಾರ್ಥಿಯ ತಂದೆ ತರಕಾರಿ ಖರೀದಿಸಲು ಹೊರಗೆ ಹೋಗಿದ್ದರು, ಮನೆಯಲ್ಲಿ ಪಿಸ್ತೂಲ್ ಇತ್ತು. ಮನೆಯವರಿಗೆ ವೀಡಿಯೊ ಕರೆ ಮಾಡಿದ ಸ್ವಲ್ಪ ಸಮಯದ ನಂತರ ಬಾಲಕ ಈ ತಪ್ಪು ನಿರ್ಧಾರ ತೆಗೆದುಕೊಂಡಿದ್ದಾನೆ. ಎಸಿಪಿ ಹಿಮಾನಿ ಮಿಶ್ರಾ ಅವರ ಪ್ರಕಾರ, ಮೃತರನ್ನು ಸೌರಭ್ ಪಟೇಲ್ ಎಂದು ಗುರುತಿಸಲಾಗಿದ್ದು, ಅವರು ಮೈಹಾರ್ ಮೂಲದವರಾಗಿದ್ದು, ನೆಹರು ನಗರದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಬಿ.ಫಾರ್ಮಾ ವಿದ್ಯಾರ್ಥಿಯಾಗಿದ್ದರು. ಸ್ಥಳದಿಂದ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ.

ಘಟನೆ ನಡೆದ ಸಮಯದಲ್ಲಿ, ಸೌರಭ್‌ನ ರೂಮ್‌ಮೇಟ್‌ಗಳು ಮುಂಭಾಗದ ಕೋಣೆಯಲ್ಲಿ ಲ್ಯಾಪ್‌ಟಾಪ್‌ನಲ್ಲಿ ಐಪಿಎಲ್ ಪಂದ್ಯವನ್ನು ವೀಕ್ಷಿಸುತ್ತಿದ್ದರು. ಅವನು ತನ್ನ ಕುಟುಂಬದೊಂದಿಗೆ ವೀಡಿಯೊ ಕರೆ ಮಾಡಲು ಹೋಗಿದ್ದ.

ಮತ್ತಷ್ಟು ಓದಿ: ಪ್ರತ್ಯೇಕ ಪ್ರಕರಣ: ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಯುವಕರು ಆತ್ಮಹತ್ಯೆ

ಆತನ ರೂಮ್ ಮೇಟ್ ನಯನ್ ಮಾತನಾಡಿ, ನಮಗೆ ದೊಡ್ಡ ಶಬ್ದ ಕೇಳಿತ್ತು ಮೊದಲು ಮೊಬೈಲ್ ಫೋನ್ ಸ್ಫೋಟಗೊಂಡಿದೆ ಎಂದು ಭಾವಿಸಿದ್ದೆವು. ನಾವು ಅಡುಗೆಮನೆಗೆ ಬಂದಾಗ ಸೌರಭ್ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡೆವು. ಅವನು ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಹೇಳಿದರು.

ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವಿವರವಾದ ತನಿಖೆ ನಡೆಯುತ್ತಿದೆ. ಸೌರಭ್ ತನ್ನ ಊರಿನ ಹುಡುಗಿಯನ್ನು ಪ್ರೀತಿಸುತ್ತಿದ್ದ ಎಂದು ಸ್ನೇಹಿತರು ಹೇಳಿದ್ದಾರೆ, ಅಷ್ಟೇ ಅಲ್ಲದೆ ಇದು ಇತ್ತೀಚೆಗೆ ಆಕೆಯ ಕುಟುಂಬದ ಗಮನಕ್ಕೆ ಇದು ಬಂದಿತ್ತು.

ಇದರ ನಂತರ, ಅವನ ತಂದೆ ಕಳೆದ 15 ದಿನಗಳಿಂದ ಅವನೊಂದಿಗೆ ಇದ್ದರು. ಸೌರಭ್ ಎಂದಿನಂತೆಯೇ ಒದ್ದ, ಈ ರೀತಿಯ ನಿರ್ಧಾರ ತೆಗೆದುಕೊಳ್ಳುವ ಯಾವುದೇ ಲಕ್ಷಣಗಳೂ ಮುಖದಲ್ಲಿ ಗೋಚರಿಸಿರಲಿಲ್ಲ ಎಂದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us