AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು, 36 ಮಂದಿ ಸಾವು ಪ್ರಕರಣ, ಅಕ್ರಮ ನಿರ್ಮಾಣ ತೆರವು ಕಾರ್ಯ ಆರಂಭ

ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು 36 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯು ಅಕ್ರಮ ನಿರ್ಮಾಣ ತೆರವು ಕಾರ್ಯಕ್ಕೆ ಮುಂದಾಗಿದೆ.

ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು, 36 ಮಂದಿ ಸಾವು ಪ್ರಕರಣ, ಅಕ್ರಮ ನಿರ್ಮಾಣ ತೆರವು ಕಾರ್ಯ ಆರಂಭ
ದೇವಸ್ಥಾನImage Credit source: NDTV
ನಯನಾ ರಾಜೀವ್
|

Updated on: Apr 03, 2023 | 10:03 AM

Share

ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು 36 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯು ಅಕ್ರಮ ನಿರ್ಮಾಣ ತೆರವು ಕಾರ್ಯಕ್ಕೆ ಮುಂದಾಗಿದೆ. ಇಂದೋರ್‌ನ ಪಟೇಲ್ ನಗರ ಪ್ರದೇಶದ ಬೆಳೇಶ್ವರ ಜುಲೇಲಾಲ್ ಮಹಾದೇವ ದೇವಸ್ಥಾನದಲ್ಲಿ ರಾಮ ನವಮಿ ಆಚರಣೆ ಸಂದರ್ಭದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ, ಪುರಾತನವಾದ ಮೆಟ್ಟಿಲುಬಾವಿಯ ಮೇಲ್ಛಾವಣೆ ಕುಸಿದು 35 ಮಂದಿ ಮೃತಪಟ್ಟಿದ್ದರು ಹಲವು ಮಂದಿ ತೀವ್ರವಾಗಿ ಗಾಯಗೊಂಡಿದ್ದರು.

ಬಾವಿಯ ಮೇಲ್ಛಾವಣಿ ಕುಸಿದಾಗ ಹತ್ತಾರು ಜನರು ಕೆಸರಿನ ನೀರಿನಲ್ಲಿ ಬಿದ್ದಿದ್ದರು. 35 ಜನರನ್ನು ಬಲಿ ಪಡೆದ ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣಗಳು ಕಾರಣ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಆರೋಪಿಸಿದ್ದರು.

ಮತ್ತಷ್ಟು ಓದಿ: ಇಂದೋರ್ ದೇವಸ್ಥಾನದ ಮೆಟ್ಟಿಲುಬಾವಿ ಮೇಲ್ಛಾವಣಿ ಕುಸಿದು ದುರಂತ: ಸಾವಿನ ಸಂಖ್ಯೆ 35ಕ್ಕೆ ಏರಿಕೆ

ಆಡಳಿತಾರೂಢ ಭಾರತೀಯ ಜನತಾ ಪಕ್ಷದ(ಬಿಜೆಪಿ) ಒತ್ತಡಕ್ಕೆ ಮಣಿದು ಸ್ಥಳೀಯ ಮಹಾನಗರ ಪಾಲಿಕೆ ಮೆಟ್ಟಿಲುಬಾವಿಯ ಮೇಲಿನ ಅನಧಿಕೃತ ನಿರ್ಮಾಣಗಳನ್ನು ಕೆಡವಲಿಲ್ಲ ಎಂದ ಕಮಲ್ ನಾಥ್ ಅವರು, ಮುಂದಿನ ಏಳು ದಿನಗಳಲ್ಲಿ ಅಕ್ರಮ ನಿರ್ಮಾಣಗಳನ್ನು ತೆರವು ಮಾಡದಿದ್ದರೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಪಟೇಲ್ ನಗರದ ಬಾಳೇಶ್ವರ ಮಹಾದೇವ ಜುಲೇಲಾಲ್ ದೇವಸ್ಥಾನದಲ್ಲಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಕಮಲ್ ನಾಥ್, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ಪರಿಶೋಧನೆ ಕಡ್ಡಾಯಗೊಳಿಸಲು ಕಾನೂನು ಜಾರಿಗೆ ತರಲಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?