AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು, 36 ಮಂದಿ ಸಾವು ಪ್ರಕರಣ, ಅಕ್ರಮ ನಿರ್ಮಾಣ ತೆರವು ಕಾರ್ಯ ಆರಂಭ

ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು 36 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯು ಅಕ್ರಮ ನಿರ್ಮಾಣ ತೆರವು ಕಾರ್ಯಕ್ಕೆ ಮುಂದಾಗಿದೆ.

ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು, 36 ಮಂದಿ ಸಾವು ಪ್ರಕರಣ, ಅಕ್ರಮ ನಿರ್ಮಾಣ ತೆರವು ಕಾರ್ಯ ಆರಂಭ
ದೇವಸ್ಥಾನImage Credit source: NDTV
ನಯನಾ ರಾಜೀವ್
|

Updated on: Apr 03, 2023 | 10:03 AM

Share

ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು 36 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯು ಅಕ್ರಮ ನಿರ್ಮಾಣ ತೆರವು ಕಾರ್ಯಕ್ಕೆ ಮುಂದಾಗಿದೆ. ಇಂದೋರ್‌ನ ಪಟೇಲ್ ನಗರ ಪ್ರದೇಶದ ಬೆಳೇಶ್ವರ ಜುಲೇಲಾಲ್ ಮಹಾದೇವ ದೇವಸ್ಥಾನದಲ್ಲಿ ರಾಮ ನವಮಿ ಆಚರಣೆ ಸಂದರ್ಭದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ, ಪುರಾತನವಾದ ಮೆಟ್ಟಿಲುಬಾವಿಯ ಮೇಲ್ಛಾವಣೆ ಕುಸಿದು 35 ಮಂದಿ ಮೃತಪಟ್ಟಿದ್ದರು ಹಲವು ಮಂದಿ ತೀವ್ರವಾಗಿ ಗಾಯಗೊಂಡಿದ್ದರು.

ಬಾವಿಯ ಮೇಲ್ಛಾವಣಿ ಕುಸಿದಾಗ ಹತ್ತಾರು ಜನರು ಕೆಸರಿನ ನೀರಿನಲ್ಲಿ ಬಿದ್ದಿದ್ದರು. 35 ಜನರನ್ನು ಬಲಿ ಪಡೆದ ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣಗಳು ಕಾರಣ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಆರೋಪಿಸಿದ್ದರು.

ಮತ್ತಷ್ಟು ಓದಿ: ಇಂದೋರ್ ದೇವಸ್ಥಾನದ ಮೆಟ್ಟಿಲುಬಾವಿ ಮೇಲ್ಛಾವಣಿ ಕುಸಿದು ದುರಂತ: ಸಾವಿನ ಸಂಖ್ಯೆ 35ಕ್ಕೆ ಏರಿಕೆ

ಆಡಳಿತಾರೂಢ ಭಾರತೀಯ ಜನತಾ ಪಕ್ಷದ(ಬಿಜೆಪಿ) ಒತ್ತಡಕ್ಕೆ ಮಣಿದು ಸ್ಥಳೀಯ ಮಹಾನಗರ ಪಾಲಿಕೆ ಮೆಟ್ಟಿಲುಬಾವಿಯ ಮೇಲಿನ ಅನಧಿಕೃತ ನಿರ್ಮಾಣಗಳನ್ನು ಕೆಡವಲಿಲ್ಲ ಎಂದ ಕಮಲ್ ನಾಥ್ ಅವರು, ಮುಂದಿನ ಏಳು ದಿನಗಳಲ್ಲಿ ಅಕ್ರಮ ನಿರ್ಮಾಣಗಳನ್ನು ತೆರವು ಮಾಡದಿದ್ದರೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಪಟೇಲ್ ನಗರದ ಬಾಳೇಶ್ವರ ಮಹಾದೇವ ಜುಲೇಲಾಲ್ ದೇವಸ್ಥಾನದಲ್ಲಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಕಮಲ್ ನಾಥ್, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ಪರಿಶೋಧನೆ ಕಡ್ಡಾಯಗೊಳಿಸಲು ಕಾನೂನು ಜಾರಿಗೆ ತರಲಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್