AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು, 36 ಮಂದಿ ಸಾವು ಪ್ರಕರಣ, ಅಕ್ರಮ ನಿರ್ಮಾಣ ತೆರವು ಕಾರ್ಯ ಆರಂಭ

ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು 36 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯು ಅಕ್ರಮ ನಿರ್ಮಾಣ ತೆರವು ಕಾರ್ಯಕ್ಕೆ ಮುಂದಾಗಿದೆ.

ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು, 36 ಮಂದಿ ಸಾವು ಪ್ರಕರಣ, ಅಕ್ರಮ ನಿರ್ಮಾಣ ತೆರವು ಕಾರ್ಯ ಆರಂಭ
ದೇವಸ್ಥಾನImage Credit source: NDTV
ನಯನಾ ರಾಜೀವ್
|

Updated on: Apr 03, 2023 | 10:03 AM

Share

ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು 36 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯು ಅಕ್ರಮ ನಿರ್ಮಾಣ ತೆರವು ಕಾರ್ಯಕ್ಕೆ ಮುಂದಾಗಿದೆ. ಇಂದೋರ್‌ನ ಪಟೇಲ್ ನಗರ ಪ್ರದೇಶದ ಬೆಳೇಶ್ವರ ಜುಲೇಲಾಲ್ ಮಹಾದೇವ ದೇವಸ್ಥಾನದಲ್ಲಿ ರಾಮ ನವಮಿ ಆಚರಣೆ ಸಂದರ್ಭದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ, ಪುರಾತನವಾದ ಮೆಟ್ಟಿಲುಬಾವಿಯ ಮೇಲ್ಛಾವಣೆ ಕುಸಿದು 35 ಮಂದಿ ಮೃತಪಟ್ಟಿದ್ದರು ಹಲವು ಮಂದಿ ತೀವ್ರವಾಗಿ ಗಾಯಗೊಂಡಿದ್ದರು.

ಬಾವಿಯ ಮೇಲ್ಛಾವಣಿ ಕುಸಿದಾಗ ಹತ್ತಾರು ಜನರು ಕೆಸರಿನ ನೀರಿನಲ್ಲಿ ಬಿದ್ದಿದ್ದರು. 35 ಜನರನ್ನು ಬಲಿ ಪಡೆದ ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣಗಳು ಕಾರಣ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಆರೋಪಿಸಿದ್ದರು.

ಮತ್ತಷ್ಟು ಓದಿ: ಇಂದೋರ್ ದೇವಸ್ಥಾನದ ಮೆಟ್ಟಿಲುಬಾವಿ ಮೇಲ್ಛಾವಣಿ ಕುಸಿದು ದುರಂತ: ಸಾವಿನ ಸಂಖ್ಯೆ 35ಕ್ಕೆ ಏರಿಕೆ

ಆಡಳಿತಾರೂಢ ಭಾರತೀಯ ಜನತಾ ಪಕ್ಷದ(ಬಿಜೆಪಿ) ಒತ್ತಡಕ್ಕೆ ಮಣಿದು ಸ್ಥಳೀಯ ಮಹಾನಗರ ಪಾಲಿಕೆ ಮೆಟ್ಟಿಲುಬಾವಿಯ ಮೇಲಿನ ಅನಧಿಕೃತ ನಿರ್ಮಾಣಗಳನ್ನು ಕೆಡವಲಿಲ್ಲ ಎಂದ ಕಮಲ್ ನಾಥ್ ಅವರು, ಮುಂದಿನ ಏಳು ದಿನಗಳಲ್ಲಿ ಅಕ್ರಮ ನಿರ್ಮಾಣಗಳನ್ನು ತೆರವು ಮಾಡದಿದ್ದರೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಪಟೇಲ್ ನಗರದ ಬಾಳೇಶ್ವರ ಮಹಾದೇವ ಜುಲೇಲಾಲ್ ದೇವಸ್ಥಾನದಲ್ಲಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಕಮಲ್ ನಾಥ್, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ಪರಿಶೋಧನೆ ಕಡ್ಡಾಯಗೊಳಿಸಲು ಕಾನೂನು ಜಾರಿಗೆ ತರಲಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ