AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು, 36 ಮಂದಿ ಸಾವು ಪ್ರಕರಣ, ಅಕ್ರಮ ನಿರ್ಮಾಣ ತೆರವು ಕಾರ್ಯ ಆರಂಭ

ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು 36 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯು ಅಕ್ರಮ ನಿರ್ಮಾಣ ತೆರವು ಕಾರ್ಯಕ್ಕೆ ಮುಂದಾಗಿದೆ.

ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು, 36 ಮಂದಿ ಸಾವು ಪ್ರಕರಣ, ಅಕ್ರಮ ನಿರ್ಮಾಣ ತೆರವು ಕಾರ್ಯ ಆರಂಭ
ದೇವಸ್ಥಾನImage Credit source: NDTV
ನಯನಾ ರಾಜೀವ್
|

Updated on: Apr 03, 2023 | 10:03 AM

Share

ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ಮೇಲ್ಛಾವಣಿ ಕುಸಿದು 36 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯು ಅಕ್ರಮ ನಿರ್ಮಾಣ ತೆರವು ಕಾರ್ಯಕ್ಕೆ ಮುಂದಾಗಿದೆ. ಇಂದೋರ್‌ನ ಪಟೇಲ್ ನಗರ ಪ್ರದೇಶದ ಬೆಳೇಶ್ವರ ಜುಲೇಲಾಲ್ ಮಹಾದೇವ ದೇವಸ್ಥಾನದಲ್ಲಿ ರಾಮ ನವಮಿ ಆಚರಣೆ ಸಂದರ್ಭದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ, ಪುರಾತನವಾದ ಮೆಟ್ಟಿಲುಬಾವಿಯ ಮೇಲ್ಛಾವಣೆ ಕುಸಿದು 35 ಮಂದಿ ಮೃತಪಟ್ಟಿದ್ದರು ಹಲವು ಮಂದಿ ತೀವ್ರವಾಗಿ ಗಾಯಗೊಂಡಿದ್ದರು.

ಬಾವಿಯ ಮೇಲ್ಛಾವಣಿ ಕುಸಿದಾಗ ಹತ್ತಾರು ಜನರು ಕೆಸರಿನ ನೀರಿನಲ್ಲಿ ಬಿದ್ದಿದ್ದರು. 35 ಜನರನ್ನು ಬಲಿ ಪಡೆದ ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣಗಳು ಕಾರಣ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಆರೋಪಿಸಿದ್ದರು.

ಮತ್ತಷ್ಟು ಓದಿ: ಇಂದೋರ್ ದೇವಸ್ಥಾನದ ಮೆಟ್ಟಿಲುಬಾವಿ ಮೇಲ್ಛಾವಣಿ ಕುಸಿದು ದುರಂತ: ಸಾವಿನ ಸಂಖ್ಯೆ 35ಕ್ಕೆ ಏರಿಕೆ

ಆಡಳಿತಾರೂಢ ಭಾರತೀಯ ಜನತಾ ಪಕ್ಷದ(ಬಿಜೆಪಿ) ಒತ್ತಡಕ್ಕೆ ಮಣಿದು ಸ್ಥಳೀಯ ಮಹಾನಗರ ಪಾಲಿಕೆ ಮೆಟ್ಟಿಲುಬಾವಿಯ ಮೇಲಿನ ಅನಧಿಕೃತ ನಿರ್ಮಾಣಗಳನ್ನು ಕೆಡವಲಿಲ್ಲ ಎಂದ ಕಮಲ್ ನಾಥ್ ಅವರು, ಮುಂದಿನ ಏಳು ದಿನಗಳಲ್ಲಿ ಅಕ್ರಮ ನಿರ್ಮಾಣಗಳನ್ನು ತೆರವು ಮಾಡದಿದ್ದರೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಪಟೇಲ್ ನಗರದ ಬಾಳೇಶ್ವರ ಮಹಾದೇವ ಜುಲೇಲಾಲ್ ದೇವಸ್ಥಾನದಲ್ಲಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಕಮಲ್ ನಾಥ್, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ಪರಿಶೋಧನೆ ಕಡ್ಡಾಯಗೊಳಿಸಲು ಕಾನೂನು ಜಾರಿಗೆ ತರಲಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು