AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indus Waters Treaty: ಭಾರತದಿಂದ ಸಿಂಧೂ ನದಿ ನೀರು ಒಪ್ಪಂದ ಸ್ಥಗಿತ, ಪಾಕಿಸ್ತಾನಕ್ಕಾಗುವ ನಷ್ಟವೇನು?

ಭಾರತವು ಸ್ಥಗಿತಗೊಳಿಸಿರುವ ಸಿಂಧೂ ನದಿ ನೀರಿನ ಒಪ್ಪಂದವು ಪಾಕಿಸ್ತಾನದ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಸೆಪ್ಟೆಂಬರ್ 19, 1960 ರಂದು ಸಹಿ ಹಾಕಲಾದ ಸಿಂಧೂ ಜಲ ಒಪ್ಪಂದ (ಐಡಬ್ಲ್ಯೂಟಿ), ಗಡಿಯಾಚೆಗಿನ ನೀರು ಹಂಚಿಕೆಗೆ ಒಂದು ಪ್ರಮುಖ ಉದಾಹರಣೆ ಎಂದೇ ಹೇಳಬಹುದು.

Indus Waters Treaty: ಭಾರತದಿಂದ ಸಿಂಧೂ ನದಿ ನೀರು ಒಪ್ಪಂದ ಸ್ಥಗಿತ, ಪಾಕಿಸ್ತಾನಕ್ಕಾಗುವ ನಷ್ಟವೇನು?
ಇಂಡಸ್ ನದಿ Image Credit source: Rediff.com
ನಯನಾ ರಾಜೀವ್
|

Updated on: Apr 24, 2025 | 11:01 AM

Share

ನವದೆಹಲಿ, ಏಪ್ರಿಲ್ 24: ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿರುವ ಪಹಲ್ಗಾಮ್(Pahalgam)​ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಬುಧವಾರ ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದ((Indus Waters Treaty)ವನ್ನು ರದ್ದುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯಲ್ಲಿ ತೆಗೆದುಕೊಂಡ ಐದು ಪ್ರಮುಖ ನಿರ್ಧಾರಗಳಲ್ಲಿ ಇದು ಕೂಡ ಒಂದು. ಅಂತಹ ಪರಿಸ್ಥಿತಿಯಲ್ಲಿ, ಸಿಂಧೂ ಜಲ ಒಪ್ಪಂದದ ಬಗ್ಗೆ ನೀವು ತಿಳಿಯಬೇಕಾದ ಕೆಲವು ಸಂಗತಿಗಳು ಇಲ್ಲಿವೆ.

ಸಿಂಧೂ ನದಿ ನೀರು ಒಪ್ಪಂದ ಎಂದರೇನು?

ಭಾರತ ಮತ್ತು ಪಾಕಿಸ್ತಾನ ನಡುವೆ ಸೆಪ್ಟೆಂಬರ್ 19, 1960 ರಂದು ಸಹಿ ಹಾಕಲಾದ ಸಿಂಧೂ ಜಲ ಒಪ್ಪಂದ (ಐಡಬ್ಲ್ಯೂಟಿ), ಗಡಿಯಾಚೆಗಿನ ನೀರು ಹಂಚಿಕೆಗೆ ಒಂದು ಪ್ರಮುಖ ಉದಾಹರಣೆ ಎಂದೇ ಹೇಳಬಹುದು. ಒಂಬತ್ತು ವರ್ಷಗಳ ಮಾತುಕತೆಗಳ ನಂತರ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಪಾಕಿಸ್ತಾನದ ಅಧ್ಯಕ್ಷ ಅಯೂಬ್ ಖಾನ್ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದರು.

ಸಿಂಧೂ ನದಿ ನೀರು ಒಪ್ಪಂದ ಹೇಗೆ ಕೆಲಸ ಮಾಡುತ್ತದೆ?

ಪೂರ್ವದ ನದಿಗಳಾದ ರಾವಿ, ಬಿಯಾಸ್ ಮತ್ತು ಸಟ್ಲೆಜ್ ಮೇಲೆ ಭಾರತ ನಿಯಂತ್ರಣ ಹೊಂದಿದ್ದರೆ, ಪಾಕಿಸ್ತಾನವು ಪಶ್ಚಿಮದ ನದಿಗಳಾದ ಸಿಂಧೂ, ಝೀಲಂ ಮತ್ತು ಚೆನಾಬ್ ನಿಂದ ನೀರನ್ನು ಪಡೆಯುತ್ತದೆ. ಇದು ಸಮತೋಲಿತವಾಗಿ ಕಂಡುಬಂದರೂ, ಒಟ್ಟು ನೀರಿನ ಹರಿವಿನ ಸುಮಾರು 80% ರಷ್ಟು ಪಾಕಿಸ್ತಾನಕ್ಕೆ ಹರಿಯುವುದರಿಂದ ಒಪ್ಪಂದದಿಂದ ಹೆಚ್ಚಿನ ಪ್ರಯೋಜನ ದೊರೆಯುತ್ತದೆ. ಈ ನದಿಗಳು ಪಾಕಿಸ್ತಾನದಲ್ಲಿ, ವಿಶೇಷವಾಗಿ ಪಂಜಾಬ್ ಮತ್ತು ಸಿಂಧ್ ಪ್ರಾಂತ್ಯಗಳಲ್ಲಿ ಕೃಷಿಗೆ ಮುಖ್ಯವಾಗಿವೆ .

ಮತ್ತಷ್ಟು ಓದಿ: Indus Water Treaty: ಪಾಕಿಸ್ತಾನಕ್ಕೆ ಭಾರತದ ಶಾಕ್; ಏನಿದು ಸಿಂಧೂ ಜಲ ಒಪ್ಪಂದ?

ಈ ಒಪ್ಪಂದವು ಭಾರತ ಮತ್ತು ಪಾಕಿಸ್ತಾನ ಎರಡರಲ್ಲೂ ಕೃಷಿ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ ಅಗತ್ಯವಾದ ಚೌಕಟ್ಟನ್ನು ರೂಪಿಸಿತು. ಎರಡೂ ದೇಶಗಳು ತಮ್ಮ ನೀರಿನ ಅಗತ್ಯಗಳನ್ನು ಪೂರೈಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನದಿ ಮತ್ತು ಅದರ ಉಪನದಿಗಳ ಸಮಾನ ಹಂಚಿಕೆಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಲಾಗಿತ್ತು.

ಈ ಒಪ್ಪಂದದ ಪ್ರಕಾರ ಪೂರ್ವದ ನದಿಗಳಾದ ರಾವಿ, ಬಿಯಾಸ್ ಮತ್ತು ಸಟ್ಲೆಜ್ ಮೇಲೆ ಭಾರತಕ್ಕೆ ನಿಯಂತ್ರಣ ಸಿಕ್ಕಿತ್ತು. ಆದರೆ ಪಶ್ಚಿಮದ ನದಿಗಳಾದ ಸಿಂಧೂ, ಝೀಲಂ ಮತ್ತು ಚೆನಾಬ್ ಮೇಲೆ ಪಾಕಿಸ್ತಾನಕ್ಕೆ ನಿಯಂತ್ರಣ ದೊರೆಯಿತು. ಆದಾಗ್ಯೂ, ನೀರಾವರಿ ಮತ್ತು ವಿದ್ಯುತ್ ಉತ್ಪಾದನೆಯಂತಹ ನಿರ್ದಿಷ್ಟ ಉದ್ದೇಶಗಳಿಗಾಗಿ ಪರಸ್ಪರ ನಿಯೋಜಿಸಲಾದ ನದಿಗಳ ಸೀಮಿತ ಬಳಕೆಯನ್ನು ಎರಡೂ ದೇಶಗಳಿಗೆ ಅನುಮತಿಸಲಾಗಿದೆ.

ಒಪ್ಪಂದ ಏಕೆ ಬೇಕಿತ್ತು?

1947 ರಲ್ಲಿ ಭಾರತ ವಿಭಜನೆಯಾದಾಗ, ಟಿಬೆಟ್‌ನಲ್ಲಿ ಹುಟ್ಟಿ ಭಾರತ ಮತ್ತು ಪಾಕಿಸ್ತಾನ ಎರಡರಲ್ಲೂ ಹರಿಯುವ, ಅಫ್ಘಾನಿಸ್ತಾನ ಮತ್ತು ಚೀನಾದ ಕೆಲವು ಭಾಗಗಳನ್ನು ಮುಟ್ಟುವ ಸಿಂಧೂ ನದಿ ಉದ್ವಿಗ್ನತೆಗೆ ಕಾರಣವಾಯಿತು. 1948 ರಲ್ಲಿ, ಭಾರತವು ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿತು, ಇದರಿಂದಾಗಿ ಪಾಕಿಸ್ತಾನವು ವಿಶ್ವಸಂಸ್ಥೆಯ ಮುಂದೆ ಈ ವಿಷಯವನ್ನು ಎತ್ತಿತು. ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿತು.

ವರ್ಷಗಳ ಮಾತುಕತೆಗಳ ನಂತರ, 1960 ರಲ್ಲಿ ಭಾರತದ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಪಾಕಿಸ್ತಾನದ ಅಧ್ಯಕ್ಷ ಅಯೂಬ್ ಖಾನ್ ಅವರು ಪ್ರಮುಖ ನದಿ ವ್ಯವಸ್ಥೆಯನ್ನು ಶಾಂತಿಯುತವಾಗಿ ನಿರ್ವಹಿಸಲು ಮತ್ತು ಹಂಚಿಕೊಳ್ಳಲು ಸಿಂಧೂ ಜಲ ಒಪ್ಪಂದಕ್ಕೆ ಸಹಿ ಹಾಕಿದರು.

ಪಾಕಿಸ್ತಾನದ ಮೇಲೆ ಯಾವ ಪರಿಣಾಮ ಬೀರುತ್ತದೆ?

ಪಾಕಿಸ್ತಾನದ ನೀರಿನ ಅಗತ್ಯತೆಗಳು ಮತ್ತು ಕೃಷಿ ವಲಯಕ್ಕೆ ಅಗತ್ಯವಾದ ಸಿಂಧೂ ನದಿ ಮತ್ತು ಅದರ ಉಪನದಿಗಳ ನೀರಿನ ಬಳಕೆ ಮತ್ತು ಹಂಚಿಕೆಯನ್ನು ಒಪ್ಪಂದವು ನಿಯಂತ್ರಿಸುವುದರಿಂದ ಒಪ್ಪಂದದ ಅಮಾನತು ಪಾಕಿಸ್ತಾನದ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ.

ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲೆಜ್ ನದಿಗಳನ್ನು ಒಳಗೊಂಡಿರುವ ಸಿಂಧೂ ನದಿ ಜಾಲವು ಪಾಕಿಸ್ತಾನದ ಪ್ರಮುಖ ಜಲ ಸಂಪನ್ಮೂಲವಾಗಿ ಕಾರ್ಯನಿರ್ವಹಿಸುತ್ತದೆ, ಇದು ಲಕ್ಷಾಂತರ ಜನರನ್ನು ಪೋಷಿಸುತ್ತದೆ. ಪಾಕಿಸ್ತಾನವು ನೀರಾವರಿ, ಕೃಷಿ ಮತ್ತು ಕುಡಿಯುವ ನೀರಿಗಾಗಿ ಈ ನೀರಿನ ಸರಬರಾಜಿನ ಮೇಲೆ ಹೆಚ್ಚಾಗಿ ಅವಲಂಬಿತವಾಗಿದೆ.

ಕೃಷಿ ವಲಯವು ಪಾಕಿಸ್ತಾನದ ರಾಷ್ಟ್ರೀಯ ಆದಾಯಕ್ಕೆ 23% ಕೊಡುಗೆ ನೀಡುತ್ತದೆ ಮತ್ತು ಅದರ ಗ್ರಾಮೀಣ ನಿವಾಸಿಗಳಲ್ಲಿ 68% ರಷ್ಟು ಜನರಿಗೆ ಆಧಾರವಾಗಿದೆ.

ಸಿಂಧೂ ಜಲಾನಯನ ಪ್ರದೇಶವು ವಾರ್ಷಿಕವಾಗಿ 154.3 ಮಿಲಿಯನ್ ಎಕರೆ ಅಡಿ ನೀರನ್ನು ಪೂರೈಸುತ್ತದೆ, ಇದು ವಿಶಾಲವಾದ ಕೃಷಿ ಪ್ರದೇಶಗಳಿಗೆ ನೀರಾವರಿ ಮಾಡಲು ಮತ್ತು ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅತ್ಯಗತ್ಯವಾಗಿದೆ.

ನೀರಿನ ಹರಿವಿನಲ್ಲಿ ಯಾವುದೇ ಅಡಚಣೆ ಉಂಟಾದರೆ ಪಾಕಿಸ್ತಾನದ ಕೃಷಿ ವಲಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ, ಇದು ಅದರ ಆರ್ಥಿಕತೆ ಮತ್ತು ಗ್ರಾಮೀಣ ಜೀವನೋಪಾಯದ ಪ್ರಮುಖ ಅಂಶವಾಗಿದೆ.

ನೀರಿನ ಲಭ್ಯತೆ ಕಡಿಮೆಯಾಗುವುದರಿಂದ ಕೃಷಿ ಅವಲಂಬಿತ ಗ್ರಾಮೀಣ ಪ್ರದೇಶಗಳಲ್ಲಿ ಬೆಳೆ ಇಳುವರಿ ಕಡಿಮೆಯಾಗುವುದು, ಆಹಾರದ ಕೊರತೆ ಮತ್ತು ಆರ್ಥಿಕ ಅಸ್ಥಿರತೆ ಉಂಟಾಗುವ ಸಾಧ್ಯತೆಯಿದೆ.

ಪಾಕಿಸ್ತಾನ ಈಗಾಗಲೇ ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಅಂತರ್ಜಲ ಕುಸಿತ, ಕೃಷಿ ಭೂಮಿಯ ಲವಣಾಂಶೀಕರಣ ಮತ್ತು ಸೀಮಿತ ನೀರಿನ ಸಂಗ್ರಹ ಸಾಮರ್ಥ್ಯದಂತಹ ನೀರಿನ ನಿರ್ವಹಣಾ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ