AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧೂ ಜಲ ಒಪ್ಪಂದ; ಮತ್ತೆ ನೀರು ಬಿಡಲು ಭಾರತಕ್ಕೆ ಪಾಕಿಸ್ತಾನ ಮನವಿ

ಒಂದೆಡೆ ಭಾರತದ ಮೇಲೆ ಅಣುಬಾಂಬ್ ಹಾಕುತ್ತೇವೆ, ಕಾಶ್ಮೀರವನ್ನು ವಶಕ್ಕೆ ಪಡೆಯುತ್ತೇವೆಂದು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿರುವ ಪಾಕಿಸ್ತಾನ ಇನ್ನೊಂದೆಡೆ ಸಿಂಧೂ ನದಿಯ ನೀರಿಗಾಗಿ ಭಾರತದ ಮುಂದೆ ಮಂಡಿಯೂರಿ ನಂತಿದೆ. ಸಿಂಧೂ ಜಲ ಒಪ್ಪಂದವನ್ನು ಪುನಃಸ್ಥಾಪಿಸಲು ಪಾಕಿಸ್ತಾನ ಭಾರತವನ್ನು ಒತ್ತಾಯಿಸಿದೆ. ಅದಕ್ಕೆ ಭಾರತ ಇನ್ನೂ ಪ್ರತಿಕ್ರಿಯಿಸಿಲ್ಲ.

ಸಿಂಧೂ ಜಲ ಒಪ್ಪಂದ; ಮತ್ತೆ ನೀರು ಬಿಡಲು ಭಾರತಕ್ಕೆ ಪಾಕಿಸ್ತಾನ ಮನವಿ
Pakistan
ಸುಷ್ಮಾ ಚಕ್ರೆ
|

Updated on: Aug 12, 2025 | 9:02 PM

Share

ನವದೆಹಲಿ, ಆಗಸ್ಟ್ 12: ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Terror Attack) ಬಳಿಕ ಪಾಕಿಸ್ತಾನದ ವಿರುದ್ಧ ತೀಕ್ಷ್ಣ ಕ್ರಮಕ್ಕೆ ಮುಂದಾಗಿದ್ದ ಭಾರತ 1960ರ ಸಿಂಧೂ ಜಲ ಒಪ್ಪಂದವನ್ನು (Indus Waters Treaty) ‘ತಡೆಹಿಡಿಯುವುದು’ ಸೇರಿದಂತೆ ಪಾಕಿಸ್ತಾನದ ವಿರುದ್ಧ ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಂಡಿತ್ತು. ಅದಾದ ನಂತರ ಕದನವಿರಾಮ ಘೋಷಿಸಲಾಗಿದ್ದರೂ ಭಾರತ ಸಿಂಧೂ ಜಲ ಒಪ್ಪಂದದ ರದ್ದತಿಯ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು. ಇದೀಗ ಪಾಕಿಸ್ತಾನ ಸಿಂಧೂ ಜಲ ಒಪ್ಪಂದದ ಪುನಃಸ್ಥಾಪನೆ ಮಾಡಲು ಭಾರತಕ್ಕೆ ಮನವಿ ಮಾಡಿದೆ. ಮೇ ತಿಂಗಳಿನಿಂದ ಭಾರತ ಸ್ಥಗಿತಗೊಳಿಸಿರುವ ಒಪ್ಪಂದದ ಸಾಮಾನ್ಯ ಕಾರ್ಯನಿರ್ವಹಣೆಯನ್ನು ತಕ್ಷಣವೇ ಪುನರಾರಂಭಿಸುವಂತೆ ಭಾರತವನ್ನು ಒತ್ತಾಯಿಸಿದೆ.

ಅಮೆರಿಕಕ್ಕೆ ತೆರಳಿದ್ದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾರತದ ಮೇಲೆ ಅಣುಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ್ದರು. ಒಂದುವೇಳೆ ಸಿಂಧೂ ನದಿಗೆ ಅಣೆಕಟ್ಟು ಕಟ್ಟಿದರೆ ಕ್ಷಿಪಣಿ ದಾಳಿ ನಡೆಸಿ ಆ ಡ್ಯಾಂ ಅನ್ನು ಬ್ಲಾಸ್ಟ್ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದರು. ಅದರ ಬೆನ್ನಲ್ಲೇ ಪಾಕಿಸ್ತಾನ ಭಾರತಕ್ಕೆ ಸಿಂಧೂ ಜಲ ಒಪ್ಪಂದದ ಪುನಃಸ್ಥಾಪನೆ ಮಾಡಲು ಮನವಿ ಮಾಡಿದೆ. ಸೋಮವಾರ ಪಾಕಿಸ್ತಾನದ ವಿದೇಶಾಂಗ ಕಚೇರಿ ಹೇಳಿಕೆಯೊಂದರಲ್ಲಿ, ಪಾಕಿಸ್ತಾನವು ಸಿಂಧೂ ಜಲ ಒಪ್ಪಂದದ ಸಂಪೂರ್ಣ ಅನುಷ್ಠಾನಕ್ಕೆ ಬದ್ಧವಾಗಿದೆ ಮತ್ತು ಭಾರತವು ಒಪ್ಪಂದದ ಸಾಮಾನ್ಯ ಕಾರ್ಯನಿರ್ವಹಣೆಯನ್ನು ತಕ್ಷಣವೇ ಪುನರಾರಂಭಿಸುತ್ತದೆ ಎಂದು ನಿರೀಕ್ಷಿಸುತ್ತದೆ ಎಂದು ತಿಳಿಸಿದೆ.

ಇದನ್ನೂ ಓದಿ: ಸಿಂಧೂ ಜಲ ಒಪ್ಪಂದ ಐತಿಹಾಸಿಕ ತಪ್ಪು; ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ

ಆಗಸ್ಟ್ 8ರಂದು ಮಧ್ಯಸ್ಥಿಕೆ ನ್ಯಾಯಾಲಯವು ಮಾಡಿದ ಸಿಂಧೂ ಜಲ ಒಪ್ಪಂದಕ್ಕೆ ಸಂಬಂಧಿಸಿದ ವ್ಯಾಖ್ಯಾನವನ್ನು ಅದು ಸ್ವಾಗತಿಸಿದೆ. ಸಿಂಧೂ ಜಲ ಒಪ್ಪಂದದ ನಿಬಂಧನೆಗಳ ಅಡಿಯಲ್ಲಿ ಎರಡು ಯೋಜನೆಗಳ ಕೆಲವು ವಿನ್ಯಾಸ ಅಂಶಗಳಿಗೆ ಪಾಕಿಸ್ತಾನ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ ನಂತರ ಶಾಶ್ವತ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಿಚಾರಣೆಯನ್ನು ಭಾರತ ಎಂದಿಗೂ ಗುರುತಿಸಿಲ್ಲ.

ಪಶ್ಚಿಮ ನದಿಗಳಲ್ಲಿ (ಚೆನಾಬ್, ಝೀಲಂ ಮತ್ತು ಸಿಂಧೂ) ಭಾರತವು ನಿರ್ಮಿಸಲಿರುವ ಹೊಸ ನದಿ-ಹರಿವಿನ ಜಲವಿದ್ಯುತ್ ಯೋಜನೆಗಳಿಗೆ ವಿನ್ಯಾಸಗೊಳಿಸಲಾದ ಮಾನದಂಡಗಳನ್ನು ಈ ಪ್ರಶಸ್ತಿ ವ್ಯಾಖ್ಯಾನಿಸುತ್ತದೆ ಎಂದು ವಿದೇಶಾಂಗ ಕಚೇರಿ ಹೇಳಿದೆ. “ಒಂದು ಮಹತ್ವದ ಸಂಶೋಧನೆಯಲ್ಲಿ ಪಾಕಿಸ್ತಾನದ ಅನಿಯಂತ್ರಿತ ಬಳಕೆಗಾಗಿ ಭಾರತವು ಪಶ್ಚಿಮ ನದಿಗಳ ನೀರನ್ನು ‘ಹರಿಯಲು ಬಿಡಬೇಕು’ ಎಂದು ನ್ಯಾಯಾಲಯ ಘೋಷಿಸಿದೆ.

ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ಇತ್ತೀಚಿನ ಘೋಷಣೆ ಮತ್ತು ಮಧ್ಯಸ್ಥಿಕೆ ನ್ಯಾಯಾಲಯದ ವಿಚಾರಣೆಯನ್ನು ಬಹಿಷ್ಕರಿಸುವ ಹಿಂದಿನ ನಿರ್ಧಾರದ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ವಿಶೇಷ ಮಹತ್ವವನ್ನು ಹೊಂದಿದೆ ಎಂದು ಅದು ಹೇಳಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ