AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Adani: ರೈಲುದುರಂತದಲ್ಲಿ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ನಾವು ಶಿಕ್ಷಣ ಕೊಡುತ್ತೇವೆ: ಉದ್ಯಮಿ ಗೌತಮ್ ಅದಾನಿ ಘೋಷಣೆ

Odisha Train Accident: ಒಡಿಶಾದಲ್ಲಿ ಸಂಭವಿಸಿದ ಸರಣಿ ರೈಲು ಅಪಘಾತದಲ್ಲಿ ತಂದೆ ಮತ್ತು ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ತಾನು ಶಿಕ್ಷಣದ ಜವಾಬ್ದಾರಿ ಹೊರುವುದಾಗಿ ಉದ್ಯಮಿ ಗೌತಮ್ ಅದಾನಿ ಪ್ರಕಟಿಸಿದ್ದಾರೆ.

Gautam Adani: ರೈಲುದುರಂತದಲ್ಲಿ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ನಾವು ಶಿಕ್ಷಣ ಕೊಡುತ್ತೇವೆ: ಉದ್ಯಮಿ ಗೌತಮ್ ಅದಾನಿ ಘೋಷಣೆ
ಗೌತಮ್ ಅದಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 04, 2023 | 8:47 PM

Share

ನವದೆಹಲಿ: ಜೂನ್ 2ರಂದು ಸಂಭವಿಸಿದ ಭೀಕರ ಸರಣಿ ರೈಲು ಅಪಘಾತ ಘಟನೆಯಲ್ಲಿ (Odisha Train Accident) 290ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಈ ಘಟನೆಯಲ್ಲಿ ತಂದೆ ಮತ್ತು ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ತಾನು ಶಿಕ್ಷಣದ ಜವಾಬ್ದಾರಿ ಹೊರುವುದಾಗಿ ಉದ್ಯಮಿ ಗೌತಮ್ ಅದಾನಿ (Gautam Adani) ಪ್ರಕಟಿಸಿದ್ದಾರೆ. ಒಂದು ಸಮಯದಲ್ಲಿ ವಿಶ್ವದ ಎರಡನೇ ಅತಿದೊಡ್ಡ ಶ್ರೀಮಂತ ಎನಿಸಿದ್ದ ಗೌತಮ್ ಅದಾನಿ, ದುರಂತದಲ್ಲಿ ಸಂತ್ರಸ್ತರಾಗಿರುವ ಪ್ರತಿಯೊಬ್ಬರಿಗೂ ಹಾಗೂ ಅವರ ಕುಟುಂಬದವರಿಗೂ ನೆರವು ನೀಡುವುದು ಎಲ್ಲರ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಅವರು ಟ್ವೀಟ್ ಮಾಡಿ ದುರಂತದಿಂದ ಅನಾಥರಾದ ಮಕ್ಕಳ ಶಾಲಾ ಶಿಕ್ಷಣದ ವ್ಯವಸ್ಥೆ ತಾನು ವಹಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

‘ಒಡಿಸಾ ರೈಲು ದುರಂತ ಘಟನೆಯಿಂದ ನಮಗೆಲ್ಲಾ ಬಹಳ ನೋವು ತಂದಿದೆ. ಈ ಅಪಘಾತದಲ್ಲಿ ತಮ್ಮ ಪೋಷಕರನ್ನು ಕಳೆದುಕೊಂಡ ಮುಗ್ಧ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅಡಾಣಿ ಸಮೂಹ ಸಂಸ್ಥೆಯು ವಹಿಸಿಕೊಳ್ಳುತ್ತದೆ. ಸಂತ್ರಸ್ತರು ಮತ್ತವರ ಕುಟುಂಬಗಳಿಗೆ ನೆರವು ಒದಗಿಸುವುದು ಮತ್ತು ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿ ಆಗಿದೆ’ ಎಂದು ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ತಮ್ಮ ಟ್ವೀಟ್​ನಲ್ಲಿ ಹೇಳಿದ್ದಾರೆ.

ಒಡಿಶಾ ರಾಜ್ಯದ ಬಾಲಾಸೋರ್ ಜಿಲ್ಲೆಯ ಬಹಾನಗ ಬಳಿ ಸಂಭವಿಸಿದ ಈ ಸರಣಿ ರೈಲು ಅಪಘಾತ ಘಟನೆಯಲ್ಲಿ 290ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಗಾಯಾಳುಗಳ ಸಂಖ್ಯೆ ಸಾವಿರದಷ್ಟಿದೆ. ತಪ್ಪಾದ ಸಿಗ್ನಲ್ ಕಾರಣದಿಂದ ಈ ದುರಂತ ಸಂಭವಿಸಿರುವುದು ಸದ್ಯಕ್ಕೆ ಗೊತ್ತಾಗಿರುವ ಸಂಗತಿ. ರೈಲ್ವೆ ಮಂಡಳಿಯು ಈ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಿದೆ.

ಇದನ್ನೂ ಓದಿCBI Probe: ಒಡಿಶಾ ರೈಲು ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು- ಸಚಿವ ಅಶ್ವಿನಿ ವೈಷ್ಣವ್ ಹೇಳಿಕೆ

ಇನ್ನೊಂದೆಡೆ, ವಿಪಕ್ಷಗಳು ಈ ರೈಲು ದುರಂತ ವಿಚಾರದಲ್ಲಿ ಕೇಂದ್ರವನ್ನು ತರಾಟೆಗೆ ತೆಗೆದುಕೊಳ್ಳುತ್ತಿವೆ. ಈ ರೈಲು ದರುಂತಕ್ಕೆ ದಿವ್ಯ ನಿರ್ಲಕ್ಷ್ಯತನವೇ ಕಾರಣವಾಗಿದೆ ಎಂದು ಆರೋಪಿಸಿರುವ ಮಾಜಿ ರೈಲ್ವೆ ಸಚಿವ ಲಾಲೂ ಪ್ರಸಾದ್ ಯಾದವ್, ಬಿಜೆಪಿ ನೇತೃತ್ವದ ಸರ್ಕಾರ ರೈಲ್ವೆ ಇಲಾಖೆಯನ್ನು ನಾಶ ಮಾಡಿದೆ ಎಂದು ಟೀಕಿಸಿದ್ದಾರೆ.

ಇನ್ನೊಂದೆಡೆ, ರೈಲ್ವೆ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲು ತಜ್ಞರ ಸಮಿತಿ ರಚಿಸುವಂತೆ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ದಾಖಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​