Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಎರಡು ಅಂತಸ್ತಿನ ಕಟ್ಟಡ ಕುಸಿತ, ನವಜಾತ ಶಿಶು ಸೇರಿ ಇಬ್ಬರು ಸಾವು

ಮಹಾರಾಷ್ಟ್ರದ ಭೀವಂಡಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ನವಜಾತ ಶಿಶು ಸೇರಿ ಇಬ್ಬರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ ಇತರ ಐವರು ಗಾಯಗೊಂಡಿದ್ದಾರೆ. ಭಿವಂಡಿ ನಗರದ ಧೋಬಿ ತಲಾಬ್ ಪ್ರದೇಶದ ದುರ್ಗಾ ರಸ್ತೆಯಲ್ಲಿರುವ ಆರು ಫ್ಲಾಟ್ ಕಟ್ಟಡವು ಮಧ್ಯರಾತ್ರಿ 12.35 ಕ್ಕೆ ಕುಸಿದಿದೆ. ಈ ಅಪಘಾತದಲ್ಲಿ 40 ವರ್ಷದ ಉಜ್ಮಾ ಅತೀಫ್ ಮತ್ತು ಎಂಟು ತಿಂಗಳ ತಸ್ಲಿಮಾ ಮೊಸರ್ ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರ: ಎರಡು ಅಂತಸ್ತಿನ ಕಟ್ಟಡ ಕುಸಿತ, ನವಜಾತ ಶಿಶು ಸೇರಿ ಇಬ್ಬರು ಸಾವು
ಕಟ್ಟಡ ಕುಸಿತ
Follow us
ನಯನಾ ರಾಜೀವ್
|

Updated on: Sep 03, 2023 | 9:35 AM

ಮಹಾರಾಷ್ಟ್ರದ ಭೀವಂಡಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ನವಜಾತ ಶಿಶು ಸೇರಿ ಇಬ್ಬರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ ಇತರ ಐವರು ಗಾಯಗೊಂಡಿದ್ದಾರೆ. ಭಿವಂಡಿ ನಗರದ ಧೋಬಿ ತಲಾಬ್ ಪ್ರದೇಶದ ದುರ್ಗಾ ರಸ್ತೆಯಲ್ಲಿರುವ ಆರು ಫ್ಲಾಟ್ ಕಟ್ಟಡವು ಮಧ್ಯರಾತ್ರಿ 12.35 ಕ್ಕೆ ಕುಸಿದಿದೆ. ಈ ಅಪಘಾತದಲ್ಲಿ 40 ವರ್ಷದ ಉಜ್ಮಾ ಅತೀಫ್ ಮತ್ತು ಎಂಟು ತಿಂಗಳ ತಸ್ಲಿಮಾ ಮೊಸರ್ ಸಾವನ್ನಪ್ಪಿದ್ದಾರೆ.

ಅಗ್ನಿಶಾಮಕ ಇಲಾಖೆ ಅಧಿಕಾರಿ ರಾಜೇಶ್ ಪವಾರ್, ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ಮಾತನಾಡಿ, ಭಿವಂಡಿ ನಗರದ ಧೋಬಿ ತಲಾವ್ ಪ್ರದೇಶದ ದುರ್ಗಾ ರಸ್ತೆಯಲ್ಲಿರುವ ಆರು ಫ್ಲಾಟ್‌ಗಳ ಕಟ್ಟಡವು ಮಧ್ಯರಾತ್ರಿ 12.35 ಕ್ಕೆ ಕುಸಿದಿದೆ.

ಮೃತರನ್ನು ಉಜ್ಮಾ ಅತೀಫ್ ಮೊಮಿನ್ (40) ಮತ್ತು ತಸ್ಲಿಮಾ ಮೊಸರ್ ಮೊಮಿನ್ (8 ತಿಂಗಳು) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರು ಮಹಿಳೆಯರು ಮತ್ತು 65 ವರ್ಷದ ಪುರುಷ ಸೇರಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಮತ್ತಷ್ಟು ಓದಿ: ಉತ್ತರಾಖಂಡದಲ್ಲಿ ಭಾರಿ ಮಳೆ, ಜೋಶಿಮಠ ಬಳಿ ಕಟ್ಟಡ ಕುಸಿತ, ಮೂವರ ರಕ್ಷಣೆ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಬೆಳಗಿನ ಜಾವ 3.30ರ ಸುಮಾರಿಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಹಾಗೂ ಅವಶೇಷಗಳನ್ನು ತೆಗೆಯುವ ಕಾರ್ಯ ಪೂರ್ಣಗೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕಟ್ಟಡ ಎಷ್ಟು ಹಳೆಯದು ಮತ್ತು ಅಪಾಯಕಾರಿ ರಚನೆಗಳ ಪಟ್ಟಿಯಲ್ಲಿದೆಯೇ ಎಂಬುದು ಇನ್ನೂ ತಿಳಿದಿಲ್ಲ ಎಂದು ಅವರು ಹೇಳಿದರು. ಈ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರದಲ್ಲಿ ನಡೆದಾಡುತ್ತೇನೆ ಎಂದಿದ್ದ ಸಿಎಂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ
ವಾರದಲ್ಲಿ ನಡೆದಾಡುತ್ತೇನೆ ಎಂದಿದ್ದ ಸಿಎಂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ
ದೈವ ನೇಮೋತ್ಸವದಲ್ಲಿ ರಾಜಕೀಯ: ಇರಂತಬೆಟ್ಟು ಮನೆತನ ಅಸಮಾಧಾನ
ದೈವ ನೇಮೋತ್ಸವದಲ್ಲಿ ರಾಜಕೀಯ: ಇರಂತಬೆಟ್ಟು ಮನೆತನ ಅಸಮಾಧಾನ
ಸದನದಲ್ಲಿ ಮನೆಹಾಳು, ನಾಲಾಯಕ್, ಅಯೋಗ್ಯ ಪದಗಳ ಅನಿರ್ಬಂಧಿತ ಬಳಕೆ
ಸದನದಲ್ಲಿ ಮನೆಹಾಳು, ನಾಲಾಯಕ್, ಅಯೋಗ್ಯ ಪದಗಳ ಅನಿರ್ಬಂಧಿತ ಬಳಕೆ
‘ಎದ್ದೆದ್ದು ಬೀಳುತಿಹೆ’: ಕಗ್ಗ ಉಲ್ಲೇಖಿಸಿ ಬಿಜೆಪಿಗೆ ತಿವಿದ ಡಿಕೆಶಿ
‘ಎದ್ದೆದ್ದು ಬೀಳುತಿಹೆ’: ಕಗ್ಗ ಉಲ್ಲೇಖಿಸಿ ಬಿಜೆಪಿಗೆ ತಿವಿದ ಡಿಕೆಶಿ
ಬೆಲೆಗಳು ಗಗನ ತಲುಪಿರುವ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ: ಡಿಸಿಎಂ
ಬೆಲೆಗಳು ಗಗನ ತಲುಪಿರುವ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ: ಡಿಸಿಎಂ
ತೆರಿಗೆ ನೀಡುವ ಆಧಾರದಲ್ಲಿ ಸಿದ್ದರಾಮಯ್ಯ ಅನುದಾನ ಹಂಚಿಕೆ ಮಾಡಲಿ: ಪ್ರತಾಪ್
ತೆರಿಗೆ ನೀಡುವ ಆಧಾರದಲ್ಲಿ ಸಿದ್ದರಾಮಯ್ಯ ಅನುದಾನ ಹಂಚಿಕೆ ಮಾಡಲಿ: ಪ್ರತಾಪ್
ಪುನೀತ್ ರಾಜ್​ಕುಮಾರ್ ಡೆಡಿಕೇಶನ್ ಹೇಗಿತ್ತು, ಅಪ್ಪು ವೆಂಕಟೇಶ್ ನೆನಪು
ಪುನೀತ್ ರಾಜ್​ಕುಮಾರ್ ಡೆಡಿಕೇಶನ್ ಹೇಗಿತ್ತು, ಅಪ್ಪು ವೆಂಕಟೇಶ್ ನೆನಪು
ಮಸೀದಿ ತೆರೆಸಿ ನೋಡಿ: ಸಿದ್ದರಾಮಯ್ಯಗೆ ಪ್ರತಾಪ್​ ಸಿಂಹ ಸವಾಲು
ಮಸೀದಿ ತೆರೆಸಿ ನೋಡಿ: ಸಿದ್ದರಾಮಯ್ಯಗೆ ಪ್ರತಾಪ್​ ಸಿಂಹ ಸವಾಲು
ವಿರೋಧ ಪಕ್ಷಗಳ ಶಾಸಕರು ಅನುದಾನ ಕೇಳೋದ್ರಲ್ಲಿ ತಪ್ಪಿಲ್ಲ: ಪ್ರಿಯಾಂಕ್ ಖರ್ಗೆ
ವಿರೋಧ ಪಕ್ಷಗಳ ಶಾಸಕರು ಅನುದಾನ ಕೇಳೋದ್ರಲ್ಲಿ ತಪ್ಪಿಲ್ಲ: ಪ್ರಿಯಾಂಕ್ ಖರ್ಗೆ
ಮದ್ಯವ್ಯಸನಿ ಮಗನಿಗೆ ಬೈಕ್ ಕೊಡಿಸಿದರೆ ಅಪಾಯ ತಪ್ಪಲ್ಲ ಅಂದುಕೊಂಡಿದ್ದ ತಂದೆ
ಮದ್ಯವ್ಯಸನಿ ಮಗನಿಗೆ ಬೈಕ್ ಕೊಡಿಸಿದರೆ ಅಪಾಯ ತಪ್ಪಲ್ಲ ಅಂದುಕೊಂಡಿದ್ದ ತಂದೆ