AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Positive Trend: ಭಾರತದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಇಳಿಕೆ, ಕರ್ನಾಟಕದಲ್ಲೂ ಇಳಿಕೆಯಾಗಿದೆ! ಕಾರಣಗಳೇನು?

ಭಾರತದಲ್ಲಿ ಕಳೆದೊಂದು ದಶಕದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜಾಗತಿಕ ಮಟ್ಟದ ಸಮೀಪಕ್ಕೆ ಭಾರತದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆಯಾಗಿದೆ. ಈ ಮೂಲಕ ಭಾರತವು ಉತ್ತಮ ಪ್ರಗತಿಯನ್ನು ಸಾಧಿಸಿದೆ. ಆದರೇ, ಇನ್ನೂ ಸಾಧಿಸುವುದು ಬಹಳಷ್ಟಿದೆ. ಕರ್ನಾಟಕ ರಾಜ್ಯದಲ್ಲೂ ಕೂಡ ನವಜಾತ ಶಿಶುಗಳ ಮರಣ ಪ್ರಮಾಣದಲ್ಲಿ ಇಳಿಕೆಯಾಗಿರುವುದು ವಿಶೇಷ.

Positive Trend: ಭಾರತದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಇಳಿಕೆ, ಕರ್ನಾಟಕದಲ್ಲೂ ಇಳಿಕೆಯಾಗಿದೆ! ಕಾರಣಗಳೇನು?
ಭಾರತದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಇಳಿಕೆ, ಕರ್ನಾಟಕದಲ್ಲೂ ಇಳಿಕೆಯಾಗಿದೆ! ಕಾರಣಗಳೇನು?
Follow us
S Chandramohan
| Updated By: ಸಾಧು ಶ್ರೀನಾಥ್​

Updated on:Jun 04, 2022 | 7:40 PM

ಭಾರತದಲ್ಲಿ ಕಳೆದೊಂದು ದಶಕದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜಾಗತಿಕ ಮಟ್ಟದ ಸಮೀಪಕ್ಕೆ ಭಾರತದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆಯಾಗಿದೆ. ಈ ಮೂಲಕ ಭಾರತವು ಉತ್ತಮ ಪ್ರಗತಿಯನ್ನು ಸಾಧಿಸಿದೆ. ಆದರೇ, ಇನ್ನೂ ಸಾಧಿಸುವುದು ಬಹಳಷ್ಟಿದೆ. ಕರ್ನಾಟಕ ರಾಜ್ಯದಲ್ಲೂ ಕೂಡ ನವಜಾತ ಶಿಶುಗಳ ಮರಣ ಪ್ರಮಾಣದಲ್ಲಿ ಇಳಿಕೆಯಾಗಿರುವುದು ವಿಶೇಷ.

ಭಾರತದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಇಳಿಕೆ

ಭಾರತದಲ್ಲಿ ದಶಕದ ಹಿಂದೆ ನವಜಾತ ಶಿಶುಗಳ ಮರಣ ಪ್ರಮಾಣ ಜಾಸ್ತಿ ಇತ್ತು. ಆದರೇ, ಈಗ ಭಾರತದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆಯಾಗಿದೆ. ಜಾಗತಿಕ ಸರಾಸರಿಯ ಸನಿಹಕ್ಕೆ ಭಾರತದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆಯಾಗಿರುವುದು ವಿಶೇಷ. ಭಾರತದಲ್ಲಿ ಈ ಹಿಂದೆ ಹುಟ್ಟಿದ ಒಂದು ವರ್ಷದೊಳಗೆ ಮಕ್ಕಳು ಬೇರೆ ಬೇರೆ ಕಾರಣಗಳಿಂದ ಸಾವನ್ನಪ್ಪುತ್ತಿದ್ದರು. ತಾಯಿಯ ಅಪೌಷ್ಟಿಕತೆ, ಚಿಕ್ಕ ವಯಸ್ಸಿಗೆ ಮದುವೆ, ಸಮರ್ಪಕ ವೈದ್ಯಕೀಯ ಸೌಲಭ್ಯಗಳ ಕೊರತೆ, ಶಿಶುಗಳ ಕಡಿಮೆ ತೂಕ, ಸಮರ್ಪಕ ಚಿಕಿತ್ಸೆಯ ಕೊರತೆ ಸೇರಿದಂತೆ ಬೇರೆ ಬೇರೆ ಕಾರಣಗಳಿಂದ ನವಜಾತ ಶಿಶುಗಳು ಸಾವನ್ನಪ್ಪುತ್ತಿದ್ದವು. ಆದರೇ, ಈಗ ನವಜಾತ ಶಿಶುಗಳ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಪ್ರಯತ್ನಕ್ಕೆ ಯಶಸ್ಸು ಸಿಗುತ್ತಿದೆ.

ಭಾರತದಲ್ಲಿ 2010ರಲ್ಲಿ 1000 ನವಜಾತ ಶಿಶುಗಳ ಪೈಕಿ 47 ನವಜಾತ ಶಿಶುಗಳು ಸಾವನ್ನಪ್ಪುತ್ತಿದ್ದವು. ಆದರೇ, 2020ರ ವೇಳೆಗೆ ನವಜಾತ ಶಿಶುಗಳ ಸಾವಿನ ಸಂಖ್ಯೆ 28ಕ್ಕೆ ಇಳಿದಿದೆ. ಆದರೇ, ಜಾಗತಿಕ ಮಟ್ಟದಲ್ಲಿ 1000 ನವಜಾತ ಶಿಶುಗಳ ಪೈಕಿ 27 ನವಜಾತ ಶಿಶುಗಳು ಸಾವನ್ನಪ್ಪುತ್ತಿವೆ. ಭಾರತವು ಈಗ ಜಾಗತಿಕ ಸರಾಸರಿ ಮಟ್ಟದ ಸನಿಹಕ್ಕೆ ಬಂದಿದೆ.

ಭಾರತದಲ್ಲಿ ಮಧ್ಯಪ್ರದೇಶ, ಉತ್ತರ ಪ್ರದೇಶ, ಅಸ್ಸಾಂ, ಒರಿಸ್ಸಾ ರಾಜ್ಯಗಳಲ್ಲಿ ಇನ್ನೂ ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು ಸಾಧ್ಯವಾಗಿಲ್ಲ. ಈ ನವಜಾತ ಶಿಶುಗಳ ಸಾವಿನ ವಿಷಯದಲ್ಲಿ ಈ ರಾಜ್ಯಗಳ ಕಳಪೆ ಸಾಧನೆ ಮುಂದುವರಿದಿದೆ. ಆದರೇ, ಜಮ್ಮುಕಾಶ್ಮೀರ, ದೆಹಲಿ, ಕೇರಳ ರಾಜ್ಯಗಳು ನವಜಾತ ಶಿಶುಗಳ ಸಾವಿನ ಸಂಖ್ಯೆ ಕಡಿಮೆ ಮಾಡುವಲ್ಲಿ ಬಾರಿ ಪ್ರಗತಿ ಸಾಧಿಸಿವೆ. ಹುಟ್ಟಿದ ಒಂದು ವರ್ಷದೊಳಗೆ ಒಂದು ಸಾವಿರ ಶಿಶುಗಳ ಪೈಕಿ ಸಾವನ್ನಪ್ಪುವ ಶಿಶುಗಳ ಸಂಖ್ಯೆಯ ಆಧಾರದ ಮೇಲೆ ಶಿಶು ಮರಣ ಪ್ರಮಾಣವನ್ನು ಲೆಕ್ಕ ಹಾಕಲಾಗುತ್ತೆ.

ಭಾರತದಲ್ಲಿ 1971 ರಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣವು 129 ಇತ್ತು. 2020 ರಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ ಮಧ್ಯಪ್ರದೇಶ ರಾಜ್ಯದಲ್ಲಿ ಹೆಚ್ಚಾಗಿದೆ. ಮಧ್ಯಪ್ರದೇಶ ರಾಜ್ಯದಲ್ಲಿ 1ಸಾವಿರ ನವಜಾತ ಶಿಶುಗಳ ಪೈಕಿ 43 ಶಿಶುಗಳು ಸಾವನ್ನಪ್ಪಿವೆ. 2010ರಲ್ಲಿ ಮಧ್ಯಪ್ರದೇಶದಲ್ಲಿ 1 ಸಾವಿರ ನವಜಾತ ಶಿಶುಗಳ ಪೈಕಿ 62 ಶಿಶುಗಳು ಸಾವನ್ನಪ್ಪಿದ್ದವು.

ಇನ್ನೂ ಉತ್ತರ ಪ್ರದೇಶ ರಾಜ್ಯದಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ 2010 ರಲ್ಲಿ 61 ರಿಂದ 2020ರ ವೇಳೆಗೆ 38 ಕ್ಕೆ ಇಳಿದಿದೆ. ಇದೇ ರೀತಿ 2020ರಲ್ಲಿ ಅಸ್ಸಾಂ, ಒರಿಸ್ಸಾ ರಾಜ್ಯಗಳಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ 36 ಆಗಿದೆ.

ಕೇರಳ ರಾಜ್ಯದಲ್ಲಿ 2020ರಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ 6ಕ್ಕೆ ಇಳಿದಿದೆ. ದೆಹಲಿಯಲ್ಲಿ 2020ರಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ 12ಕ್ಕೆ ಇಳಿದಿದೆ. ಕರ್ನಾಟಕದಲ್ಲಿ 2010 ರಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ 38 ಇತ್ತು. ಆದರೇ, ಕರ್ನಾಟಕದಲ್ಲಿ 2020ರ ವೇಳೆಗೆ ನವಜಾತ ಶಿಶುಗಳ ಸಾವಿನ ಸಂಖ್ಯೆ 19ಕ್ಕೆ ಇಳಿದಿದೆ. ತಮಿಳುನಾಡು 13, ಮಹಾರಾಷ್ಟ್ರ 16, ಜಮ್ಮು ಕಾಶ್ಮೀರದಲ್ಲಿ 17, ಪಂಜಾಬ್ ನಲ್ಲಿ 18, ತೆಲಂಗಾಣದಲ್ಲಿ 21, ಆಂಧ್ರಪ್ರದೇಶದಲ್ಲಿ 24ಕ್ಕೆ ನವಜಾತ ಶಿಶುಗಳ ಸಾವಿನ ಸಂಖ್ಯೆ ಇಳಿದಿದೆ. ಸಣ್ಣ ರಾಜ್ಯಗಳ ಪೈಕಿ ಮಿಜೋರಾಂ ನಲ್ಲಿ 2020ರಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ 3, ಗೋವಾದಲ್ಲಿ 5ಕ್ಕೆ ಇಳಿದಿದೆ.

ಬಿಹಾರ ರಾಜ್ಯದಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ 2010ರಲ್ಲಿ 42 ಇದ್ದಿದ್ದು, 2020ರ ವೇಳೆಗೆ 27ಕ್ಕೆ ಇಳಿದಿದೆ. ಭಾರತದ ನೆರೆಯ ಪಾಕಿಸ್ತಾನದಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ ಒಂದು ಸಾವಿರಕ್ಕೆ 57 ಇದೆ. ಮಯನ್ಮಾರ್ ದೇಶದಲ್ಲಿ 35 ಇದೆ.

Published On - 7:38 pm, Sat, 4 June 22

ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ