AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿಯಲ್ಲಿ ಶುರುವಾದ ಒಳಜಗಳ; ಉತ್ತರಾಖಂಡ್​ ಬಿಜೆಪಿ ಮುಖ್ಯಸ್ಥ ದೇಶದ್ರೋಹಿಯೆಂದ ಶಾಸಕ

ನಿನ್ನೆ ಮತದಾನ ಮುಗಿಯುತ್ತಿದ್ದಂತೆ ಮಾತನಾಡಿದ್ದ ಸಿಎಂ ಪುಷ್ಕರ್​ ಸಿಂಗ್​ ಧಮಿ, ಈ ಚುನಾವಣೆಯಲ್ಲಿ ರಾಜ್ಯದ ಜನರು ದೊಡ್ಡ ಸಂಖ್ಯೆಯಲ್ಲಿ ಮತ ಹಾಕುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಹೇಳಿದ್ದರು.

ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿಯಲ್ಲಿ ಶುರುವಾದ ಒಳಜಗಳ; ಉತ್ತರಾಖಂಡ್​ ಬಿಜೆಪಿ ಮುಖ್ಯಸ್ಥ ದೇಶದ್ರೋಹಿಯೆಂದ ಶಾಸಕ
ಬಿಜೆಪಿ ಶಾಸಕ ಸಂಜಯ್​ ಗುಪ್ತಾ
TV9 Web
| Edited By: |

Updated on:Feb 15, 2022 | 10:51 AM

Share

ಡೆಹ್ರಾಡೂನ್​: ಉತ್ತರಾಖಂಡ್​​ನಲ್ಲಿ ನಿನ್ನೆ (ಫೆ.14ರಂದು) ವಿಧಾನಸಭೆ ಚುನಾವಣೆ (Uttarakhand Assembly Election 2022) ಮುಕ್ತಾಯವಾಗಿದೆ. ಆದರೆ ಅದರ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಆಂತರಿಕ ಜಗಳ ಶುರುವಾಗಿದೆ. ಉತ್ತರಾಖಂಡ್​ನ ಬಿಜೆಪಿ ಶಾಸಕ ಸಂಜಯ್​ ಗುಪ್ತಾ ಅವರು, ರಾಜ್ಯದ ಬಿಜೆಪಿ ಮುಖ್ಯಸ್ಥ (BJP Party Chief) ಮದನ್​ ಕೌಶಿಕ್​ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮದನ್​ ಕೌಶಿಕ್​ ಒಬ್ಬ ದೇಶದ್ರೋಹಿ ಎಂದು ಹೇಳಿದ್ದಾರೆ.  ಉತ್ತರಾಖಂಡ್​​ನ ಬಿಜೆಪಿ ಮುಖ್ಯಸ್ಥ ಮದನ್​ ಕೌಶಿಕ್ ಈ ವಿಧಾನಸಭೆ ಚುನಾವಣೆಯಲ್ಲಿ​ ಬಿಜೆಪಿ ಅಭ್ಯರ್ಥಿಗಳ ವಿರುದ್ಧವೇ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಅವರನ್ನು ಹೈಕಮಾಂಡ್​ ನಾಯಕರು ಪಕ್ಷದಿಂದಲೇ ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಉತ್ತರಾಖಂಡ್​ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮದನ್​ ಕೌಶಿಕ್​ ಪ್ರಯತ್ನಿಸಿದ್ದಾರೆ. ಹಾಗಾಗಿ ಅನೇಕ ಬಿಜೆಪಿ ಅಭ್ಯರ್ಥಿಗಳ ವಿರುದ್ಧವಾಗಿ ಪ್ರಚಾರ ನಡೆಸಿದ್ದಾರೆ. ನನ್ನ ವಿರುದ್ಧ ಸ್ಪರ್ಧಿಸಿದ್ದ ಬಿಎಸ್​ಪಿ (ಬಹುಜನ ಸಮಾಜ ಪಾರ್ಟಿ) ಅಭ್ಯರ್ಥಿಯ ಪರ ಚುನಾವಣಾ ಪ್ರಚಾರ ನಡೆಸಿದ್ದರು. ದಯವಿಟ್ಟು ಅವರನ್ನ ಉಪಕ್ಷದಿಂದ ಉಚ್ಚಾಟನೆ ಮಾಡಿ ಎಂದು ಸಂಜಯ್​ ಗುಪ್ತಾ ಮನವಿ ಮಾಡಿದ್ದಾರೆ. ಇವರು ಲಕ್ಸರ್​ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಸಂಜಯ್​ ಗುಪ್ತಾ ಆರೋಪಕ್ಕೆ ಮದನ್​ ಕೌಶಿಕ್​ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ನಿನ್ನೆ ಮತದಾನ ಮುಗಿಯುತ್ತಿದ್ದಂತೆ ಮಾತನಾಡಿದ್ದ ಸಿಎಂ ಪುಷ್ಕರ್​ ಸಿಂಗ್​ ಧಮಿ, ಈ ಚುನಾವಣೆಯಲ್ಲಿ ರಾಜ್ಯದ ಜನರು ದೊಡ್ಡ ಸಂಖ್ಯೆಯಲ್ಲಿ ಮತ ಹಾಕುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ನಮ್ಮ ಬಿಜೆಪಿಯೇ ಅವರ ಆದ್ಯತೆ ಎಂಬ ನಂಬಿಕೆ ಇದೆ. ಮುಂದೆ ಆಡಳಿತ ನಡೆಸಲಿರುವ ಸರ್ಕಾರ ಈ ಉತ್ತರಾಖಂಡ್​​ನ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುತ್ತದೆ ಎಂದು ಹೇಳಿದ್ದರು. ನಿನ್ನೆ ಉತ್ತರಾಖಂಡ್​​ನ 70 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಶೇ.62.5ರಷ್ಟು ಮತದಾನ ಆಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಾರ್ಚ್​ 10ರಂದು ಮತಎಣಿಕೆ ನಡೆಯಲಿದೆ.

ಇದನ್ನೂ ಓದಿ: ನಾಲ್ಕು ವರ್ಷದ ಬಳಿಕ ಉಗ್ರನರಸಿಂಹನ ದರ್ಶನಕ್ಕೆ ಅವಕಾಶ; ಎದೆ ಎತ್ತರದ ನೀರಿನಲ್ಲೂ 200 ಮೀಟರ್ ಸಾಗಿ ಬಂದ ಭಕ್ತರು

Published On - 9:58 am, Tue, 15 February 22

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು