AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿಯಲ್ಲಿ ಶುರುವಾದ ಒಳಜಗಳ; ಉತ್ತರಾಖಂಡ್​ ಬಿಜೆಪಿ ಮುಖ್ಯಸ್ಥ ದೇಶದ್ರೋಹಿಯೆಂದ ಶಾಸಕ

ನಿನ್ನೆ ಮತದಾನ ಮುಗಿಯುತ್ತಿದ್ದಂತೆ ಮಾತನಾಡಿದ್ದ ಸಿಎಂ ಪುಷ್ಕರ್​ ಸಿಂಗ್​ ಧಮಿ, ಈ ಚುನಾವಣೆಯಲ್ಲಿ ರಾಜ್ಯದ ಜನರು ದೊಡ್ಡ ಸಂಖ್ಯೆಯಲ್ಲಿ ಮತ ಹಾಕುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಹೇಳಿದ್ದರು.

ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿಯಲ್ಲಿ ಶುರುವಾದ ಒಳಜಗಳ; ಉತ್ತರಾಖಂಡ್​ ಬಿಜೆಪಿ ಮುಖ್ಯಸ್ಥ ದೇಶದ್ರೋಹಿಯೆಂದ ಶಾಸಕ
ಬಿಜೆಪಿ ಶಾಸಕ ಸಂಜಯ್​ ಗುಪ್ತಾ
TV9 Web
| Edited By: |

Updated on:Feb 15, 2022 | 10:51 AM

Share

ಡೆಹ್ರಾಡೂನ್​: ಉತ್ತರಾಖಂಡ್​​ನಲ್ಲಿ ನಿನ್ನೆ (ಫೆ.14ರಂದು) ವಿಧಾನಸಭೆ ಚುನಾವಣೆ (Uttarakhand Assembly Election 2022) ಮುಕ್ತಾಯವಾಗಿದೆ. ಆದರೆ ಅದರ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಆಂತರಿಕ ಜಗಳ ಶುರುವಾಗಿದೆ. ಉತ್ತರಾಖಂಡ್​ನ ಬಿಜೆಪಿ ಶಾಸಕ ಸಂಜಯ್​ ಗುಪ್ತಾ ಅವರು, ರಾಜ್ಯದ ಬಿಜೆಪಿ ಮುಖ್ಯಸ್ಥ (BJP Party Chief) ಮದನ್​ ಕೌಶಿಕ್​ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮದನ್​ ಕೌಶಿಕ್​ ಒಬ್ಬ ದೇಶದ್ರೋಹಿ ಎಂದು ಹೇಳಿದ್ದಾರೆ.  ಉತ್ತರಾಖಂಡ್​​ನ ಬಿಜೆಪಿ ಮುಖ್ಯಸ್ಥ ಮದನ್​ ಕೌಶಿಕ್ ಈ ವಿಧಾನಸಭೆ ಚುನಾವಣೆಯಲ್ಲಿ​ ಬಿಜೆಪಿ ಅಭ್ಯರ್ಥಿಗಳ ವಿರುದ್ಧವೇ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಅವರನ್ನು ಹೈಕಮಾಂಡ್​ ನಾಯಕರು ಪಕ್ಷದಿಂದಲೇ ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಉತ್ತರಾಖಂಡ್​ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮದನ್​ ಕೌಶಿಕ್​ ಪ್ರಯತ್ನಿಸಿದ್ದಾರೆ. ಹಾಗಾಗಿ ಅನೇಕ ಬಿಜೆಪಿ ಅಭ್ಯರ್ಥಿಗಳ ವಿರುದ್ಧವಾಗಿ ಪ್ರಚಾರ ನಡೆಸಿದ್ದಾರೆ. ನನ್ನ ವಿರುದ್ಧ ಸ್ಪರ್ಧಿಸಿದ್ದ ಬಿಎಸ್​ಪಿ (ಬಹುಜನ ಸಮಾಜ ಪಾರ್ಟಿ) ಅಭ್ಯರ್ಥಿಯ ಪರ ಚುನಾವಣಾ ಪ್ರಚಾರ ನಡೆಸಿದ್ದರು. ದಯವಿಟ್ಟು ಅವರನ್ನ ಉಪಕ್ಷದಿಂದ ಉಚ್ಚಾಟನೆ ಮಾಡಿ ಎಂದು ಸಂಜಯ್​ ಗುಪ್ತಾ ಮನವಿ ಮಾಡಿದ್ದಾರೆ. ಇವರು ಲಕ್ಸರ್​ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಸಂಜಯ್​ ಗುಪ್ತಾ ಆರೋಪಕ್ಕೆ ಮದನ್​ ಕೌಶಿಕ್​ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ನಿನ್ನೆ ಮತದಾನ ಮುಗಿಯುತ್ತಿದ್ದಂತೆ ಮಾತನಾಡಿದ್ದ ಸಿಎಂ ಪುಷ್ಕರ್​ ಸಿಂಗ್​ ಧಮಿ, ಈ ಚುನಾವಣೆಯಲ್ಲಿ ರಾಜ್ಯದ ಜನರು ದೊಡ್ಡ ಸಂಖ್ಯೆಯಲ್ಲಿ ಮತ ಹಾಕುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ನಮ್ಮ ಬಿಜೆಪಿಯೇ ಅವರ ಆದ್ಯತೆ ಎಂಬ ನಂಬಿಕೆ ಇದೆ. ಮುಂದೆ ಆಡಳಿತ ನಡೆಸಲಿರುವ ಸರ್ಕಾರ ಈ ಉತ್ತರಾಖಂಡ್​​ನ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುತ್ತದೆ ಎಂದು ಹೇಳಿದ್ದರು. ನಿನ್ನೆ ಉತ್ತರಾಖಂಡ್​​ನ 70 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಶೇ.62.5ರಷ್ಟು ಮತದಾನ ಆಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಾರ್ಚ್​ 10ರಂದು ಮತಎಣಿಕೆ ನಡೆಯಲಿದೆ.

ಇದನ್ನೂ ಓದಿ: ನಾಲ್ಕು ವರ್ಷದ ಬಳಿಕ ಉಗ್ರನರಸಿಂಹನ ದರ್ಶನಕ್ಕೆ ಅವಕಾಶ; ಎದೆ ಎತ್ತರದ ನೀರಿನಲ್ಲೂ 200 ಮೀಟರ್ ಸಾಗಿ ಬಂದ ಭಕ್ತರು

Published On - 9:58 am, Tue, 15 February 22

Follow Us
ಗುರುವಾರ ಯಾವ ರಾಶಿಗೆ ವೃತ್ತಿಯಲ್ಲಿ ಬಡ್ತಿ?
ಗುರುವಾರ ಯಾವ ರಾಶಿಗೆ ವೃತ್ತಿಯಲ್ಲಿ ಬಡ್ತಿ?
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!