AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉರಿ ಸೆಕ್ಟರ್​​ನಲ್ಲಿ ಭಯೋತ್ಪಾದಕರಿಂದ ಭಾರತದೊಳಗೆ ನುಸುಳುವ ಪ್ರಯತ್ನ; ಪ್ರದೇಶದಲ್ಲಿ ಇಂಟರ್ನೆಟ್ ಮತ್ತು ಪೋನ್ ಸೇವೆ ಸ್ಥಗಿತ

ಈ ವರ್ಷದಲ್ಲಿ ನಡೆದಿರುವ ಎರಡನೇ ನುಸುಳು ಪ್ರಯತ್ನ ಇದಾಗಿದೆ ಅಂತಲೂ ಸೇನೆ ತಿಳಿಸಿದೆ. ಅದರೆ, ಬಾರತೀಯ ಸೇನೆಯ ಹಿರಿಯ ಕಮಾಂಡರ್ ಒಬ್ಬರು ನೀಡಿರುವ ಮಾಹಿತಿ ಪ್ರಕಾರ ಗಡಿ ನಿಯಂತ್ರಣ ರೇಖೆ ಪ್ರದೇಶದಲ್ಲಿ ಈ ವರ್ಷ ಒಮ್ಮೆಯೂ ಕದನ ವಿರಾಮ ಉಲ್ಲಂಘಿಸುವ ಘಟನೆ ನಡೆದಿಲ್ಲ

ಉರಿ ಸೆಕ್ಟರ್​​ನಲ್ಲಿ ಭಯೋತ್ಪಾದಕರಿಂದ ಭಾರತದೊಳಗೆ ನುಸುಳುವ ಪ್ರಯತ್ನ; ಪ್ರದೇಶದಲ್ಲಿ ಇಂಟರ್ನೆಟ್ ಮತ್ತು ಪೋನ್ ಸೇವೆ ಸ್ಥಗಿತ
ಉರಿ ಸೆಕ್ಟರ್
TV9 Web
| Edited By: |

Updated on: Sep 20, 2021 | 9:54 PM

Share

ಶ್ರೀನಗರ: ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ಭಯೋತ್ಪಾದಕರು ಉರಿ ಸೆಕ್ಟರ್​ನ ಗಡಿ ನಿಯಂತ್ರಣ ರೇಖೆಯ ಬಳಿ ಭಾರತದೊಳಗೆ ನುಸುಳಲು ಮಾಡಿರುವ ಪ್ರಯತ್ನದ ಬಳಿಕ ಆ ಪ್ರದೇಶದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಪೋನ್​ಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಉನ್ನತ ಮೂಲಗಳು ಸೋಮವಾರ ತಿಳಿಸಿವೆ. ಕಳೆದ 30 ಗಂಟೆಗಳಿಂದ ನುಸುಳುವಿಕೆ-ತಡೆ ಕಾರ್ಯಾಚರಣೆ ಸದರಿ ಪ್ರದೇಶದಲ್ಲಿ ಜಾರಿಯಲ್ಲಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ. ಹೆಚ್ಚಿನ ಸೇನೆಯ ಅವಶ್ಯಕತೆಯನ್ನು ಮನಗಂಡಿರುವುದರಿಂದ ಪಡೆಗಳನ್ನು ರವಾನಿಸುವಂತೆ ಮನವಿ ಮಾಡಲಾಗಿದೆ ಎಂದು ಸೇನೆಯ ಮೂಲಗಳು ಹೇಳಿವೆ.

ಈ ವರ್ಷದಲ್ಲಿ ನಡೆದಿರುವ ಎರಡನೇ ನುಸುಳು ಪ್ರಯತ್ನ ಇದಾಗಿದೆ ಅಂತಲೂ ಸೇನೆ ತಿಳಿಸಿದೆ. ಅದರೆ, ಬಾರತೀಯ ಸೇನೆಯ ಹಿರಿಯ ಕಮಾಂಡರ್ ಒಬ್ಬರು ನೀಡಿರುವ ಮಾಹಿತಿ ಪ್ರಕಾರ ಗಡಿ ನಿಯಂತ್ರಣ ರೇಖೆ ಪ್ರದೇಶದಲ್ಲಿ ಈ ವರ್ಷ ಒಮ್ಮೆಯೂ ಕದನ ವಿರಾಮ ಉಲ್ಲಂಘಿಸುವ ಘಟನೆ ನಡೆದಿಲ್ಲ ಮತ್ತು ಗಡಿಯಾಚೆಯಿಂದ ಯಾವುದೇ ಪ್ರಚೋದನಕಾರಿ ಪ್ರಯತ್ನ ಸಂಭವಿಸಿಲ್ಲ.

‘ಈ ವರ್ಷ ಒಮ್ಮೆಯೂ ಕದನ ವಿರಾಮದ ಉಲ್ಲಂಘನೆಯಾಗಿಲ್ಲ. ಕದನ ವಿರಾಮದ ಯಾವುದೇ ಉಲ್ಲಂಘನೆ ಎದುರಿಸಲು ನಾವು ಸನ್ನದ್ಧರಾಗಿದ್ದೇವೆ. ಆದರೆ ವಾಸ್ತವ ಸಂಗತಿ ಎಂದರೆ ಗಡಿಯಾಚೆಯಿಂದ ಅಂಥ ಪ್ರಯತ್ನಗಳು ನಡೆದೇ ಇಲ್ಲ,’ ಎಂದು 15 ಕಾರ್ಪ್ಸ್ನ ಕಮಾಂಡಿಂಗ್ ಜನರಲ್ ಅಧಿಕಾರಿ ಲೆಫ್ಟಿನಂಟ್ ಜನರಲ್ ಡಿಪಿ ಪಾಂಡ್ಯ ಹೇಳಿದ್ದಾರೆ.

‘ನುಸುಳುವಿಕೆ ಬಗ್ಗೆ ಹೇಳುವುದಾದರೆ, ಹಿಂದೆ ನಡೆಯುತ್ತಿದ್ದ ಹಾಗೆ ಈಗ ಆಗುತ್ತಿಲ್ಲ. ಆದರೂ ಕೆಲ ಪ್ರಯತ್ನಗಳು ನಡೆದಿವೆ, ಆದರೆ ಯಶ ಕಂಡಿದ್ದು ಮಾತ್ರ ಕೇವಲ ಎರಡು. ಅದರಲ್ಲಿ ಒಬ್ಬನನ್ನು ನಾವು ಬಂಡಿಪೋರ್ನಲ್ಲಿ ಕೊಂದು ಹಾಕಿದ್ದೇವೆ ಮತ್ತು ಎರಡನೇಯವನ ತಲಾಶ್ ಜಾರಿಯಲ್ಲಿದೆ,’ ಎಂದು ಅಧಿಕಾರಿ ಹೇಳಿದ್ದಾರೆ.

‘ಉರಿ ಸೆಕ್ಟರ್​​ನಲ್ಲಿ ಕಳೆದ 24 ಗಂಟೆಗಳಿಂದ ಕಾರ್ಯಾಚರಣೆಯೊಂದು ಜಾರಿಯಲ್ಲಿದೆ. ಭಾರತದೊಳಕ್ಕೆ ನುಸುಳುವ ಪ್ರಯತ್ನ ನಡೆದಿದೆ ಅಂತ ನಾವು ಅಂದುಕೊಳ್ಳುತ್ತಿದ್ದೇವೆ. ಅವರನ್ನು ಹುಡುಕುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಅವರು ಗಡಿ ದಾಟಿ ಒಳಗೆ ಬಂದಿದ್ದಾರೋ ಅಥವಾ ಪ್ರಯತ್ನ ನಡೆಸಿ ವಾಪಸ್ಸು ಹೋಗಿದ್ದಾರೋ ಅನ್ನೋದು ಇನ್ನೂ ಖಚಿತವಾಗಿಲ್ಲ. ಆದರೆ ನಾವು ಅಲರ್ಟ್ ಆಗಿದ್ದೇವೆ. ಭಯೋತ್ಪಾದಕರು ನುಸುಳಿದ್ದರೂ ಅವರನ್ನು ಮಟ್ಟ ಹಾಕದೆ ಬಿಡುವುದಿಲ್ಲ,’ ಎಂದು ಪಾಂಡ್ಯ ಹೇಳಿದರು.

ಇದನ್ನೂ ಓದಿ:  ಭಯೋತ್ಪಾದಕರ ಗುಂಡಿಗೆ ಜಮ್ಮು ಮತ್ತು ಕಾಶ್ಮೀರ ಅಪ್ನಿ ಪಕ್ಷದ ಕಾರ್ಯಕರ್ತ ಬಲಿ, ಹೆಚ್ಚುತ್ತಿವೆ ಉಗ್ರರ ದಾಳಿಗಳು

Follow Us
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?