AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಣದುಬ್ಬರ ಎಲ್ಲಾ ಭಾರತೀಯರ ಮೇಲೆ ಹೇರಿದ ತೆರಿಗೆ’: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಹಣದುಬ್ಬರವು(Inflation) ಎಲ್ಲಾ ಭಾರತೀಯರ ಮೇಲಿನ ತೆರಿಗೆಯಾಗಿದೆ. ಉಕ್ರೇನ್ ಯುದ್ಧ ಪ್ರಾರಂಭವಾಗುವ ಮುಂಚೆಯೇ ದಾಖಲೆಯ ಬೆಲೆ ಏರಿಕೆಯು ಬಡ ಮತ್ತು ಮಧ್ಯಮ ವರ್ಗವನ್ನು ಹೊಸಕಿ ಹಾಕಿತ್ತು.

'ಹಣದುಬ್ಬರ ಎಲ್ಲಾ ಭಾರತೀಯರ ಮೇಲೆ ಹೇರಿದ ತೆರಿಗೆ': ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Mar 19, 2022 | 1:54 PM

Share

ದೆಹಲಿ: ಉಕ್ರೇನ್ ಯುದ್ಧಕ್ಕಿಂತ (Ukraine war)ಮುಂಚೆಯೇ ದಾಖಲೆಯ ಬೆಲೆ ಏರಿಕೆ ಯಿಂದ ಬಡ ಮತ್ತು ಮಧ್ಯಮ ವರ್ಗ ವನ್ನು ಹೊಸಕಿ ಹಾಕಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಶನಿವಾರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ. 51 ವರ್ಷದ ವಯನಾಡ್ ಸಂಸದ ರಾಹುಲ್ ಕಳೆದ ಕೆಲವು ವಾರಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ರಾಜಕೀಯ ಟೀಕಾ ಪ್ರಹಾರದಲ್ಲಿ ರಷ್ಯಾ-ಉಕ್ರೇನ್ ಬಿಕ್ಕಟ್ಟನ್ನು ಉಲ್ಲೇಖಿಸುತ್ತಿದ್ದಾರೆ. ಹಣದುಬ್ಬರವು(Inflation) ಎಲ್ಲಾ ಭಾರತೀಯರ ಮೇಲಿನ ತೆರಿಗೆಯಾಗಿದೆ. ಉಕ್ರೇನ್ ಯುದ್ಧ ಪ್ರಾರಂಭವಾಗುವ ಮುಂಚೆಯೇ ದಾಖಲೆಯ ಬೆಲೆ ಏರಿಕೆಯು ಬಡ ಮತ್ತು ಮಧ್ಯಮ ವರ್ಗವನ್ನು ಹೊಸಕಿ ಹಾಕಿತ್ತು. ಇದು ಮತ್ತಷ್ಟು ಹೆಚ್ಚಾಗುತ್ತದೆ: – ಕಚ್ಚಾ > $100/ಬ್ಯಾರೆಲ್ – ಆಹಾರದ ಬೆಲೆಗಳು ಶೇ 22 ಏರಿಕೆಯಾಗುವ ನಿರೀಕ್ಷೆಯಿದೆ. ಕೊವಿಡ್ ಜಾಗತಿಕ ಪೂರೈಕೆ ಸರಪಳಿಯನ್ನು ಅಡ್ಡಿಪಡಿಸುತ್ತದೆ. ಭಾರತ ಸರ್ಕಾರ ಈಗ ಕಾರ್ಯನಿರ್ವಹಿಸಬೇಕು. ಜನರನ್ನು ರಕ್ಷಿಸಿ ಎಂದು ಗಾಂಧಿ ಶನಿವಾರ ಟ್ವೀಟ್ ಮಾಡಿದ್ದಾರೆ. ಮಂಗಳವಾರ ಬೆಳಗ್ಗೆ  ಭವಿಷ್ಯ ನಿಧಿಯಲ್ಲಿನ ದರ ಕಡಿತದ ಕುರಿತು ಅವರು ಕೇಂದ್ರವನ್ನು ಗುರಿಯಾಗಿಸಿಕೊಂಡಿದ್ದರು. ಈ ವಿಷಯವನ್ನು ಹಲವಾರು ವಿರೋಧ ಪಕ್ಷದ ನಾಯಕರು ಎತ್ತಿದ್ದಾರೆ. ಮರುದಿನ, ಅವರು ಬಿಜೆಪಿ ಮತ್ತು ಫೇಸ್‌ಬುಕ್ ನಡುವಿನ ಸಂಪರ್ಕಗಳ ಬಗ್ಗೆ ವರದಿಯನ್ನು ಹಂಚಿಕೊಂಡರು.

ಏತನ್ಮಧ್ಯೆ, ಈ ಸುತ್ತಿನ ಚುನಾವಣೆಯ ಸೋಲಿನ ನಂತರ ಕಾಂಗ್ರೆಸ್ ಆತ್ಮಾವಲೋಕನ ನಡೆಸುತ್ತಿದೆ. ಭಾನುವಾರ, ಪಕ್ಷವು ಫಲಿತಾಂಶಗಳನ್ನು ಮೌಲ್ಯಮಾಪನ ಮಾಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಐದು ಗಂಟೆಗಳ ಸುದೀರ್ಘ ಸಭೆಯನ್ನು ನಡೆಸಿತ್ತು. ಆದಾಗ್ಯೂ, ತೀರ್ಮಾನವು ನಿರೀಕ್ಷಿಸಿದಂತೆಯೇ ಇತ್ತು. ಸೋನಿಯಾ ಗಾಂಧಿಯವರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು. ಪಕ್ಷದಲ್ಲಿ ಕೂಲಂಕಷ ಪರೀಕ್ಷೆಯ ಅಗತ್ಯದ ಕುರಿತು 2020 ರಲ್ಲಿ ಸೋನಿಯಾ ಗಾಂಧಿಗೆ ಪತ್ರ ಬರೆದ G-23 ನಾಯಕರು ಈ ವಾರ ಎರಡು ಬಾರಿ ಭೇಟಿಯಾದರು. ಜಿ-23 ನಾಯಕರಲ್ಲಿ ಒಬ್ಬರಾದ ಗುಲಾಂ ನಬಿ ಆಜಾದ್ ಕೂಡ ಶುಕ್ರವಾರ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು.

ಏತನ್ಮಧ್ಯೆ ಸಾರ್ವಜನಿಕ ಕಲ್ಯಾಣಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಪಕ್ಷವು ಪ್ರತಿಪಾದಿಸಿದೆ. ಸಂಸತ್ತಿನಲ್ಲಿ ಈ ವಾರದ ಆರಂಭದಲ್ಲಿ, ಸೋನಿಯಾ ಗಾಂಧಿ ಅವರು “ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು” ಬಳಸಲಾಗುತ್ತಿರುವ ಚುನಾವಣಾ ರಾಜಕೀಯದ ಮೇಲೆ “ವ್ಯವಸ್ಥಿತ ಪ್ರಭಾವ ಮತ್ತು ಫೇಸ್‌ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮ ದೈತ್ಯರ ಹಸ್ತಕ್ಷೇಪ” ವನ್ನು ಕೊನೆಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಆದರೆ ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಐದು ರಾಜ್ಯಗಳಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದ ನಂತರ ಜನರು ಬಿಜೆಪಿಯನ್ನು ಅಭಿವೃದ್ಧಿ ಕಾರ್ಯಸೂಚಿಗಾಗಿ ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚೀನಾದಲ್ಲಿ ಮತ್ತೆ ಹೆಚ್ಚಾಗಿದೆ ಕೊರೊನಾ ವೈರಸ್​; ಒಂದು ವರ್ಷದ ಬಳಿಕ ಒಂದೇ ದಿನ ಇಬ್ಬರು ಸೋಂಕಿನಿಂದ ಸಾವು

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!