AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರದ ವಿಷಯ ತಿಳಿಸಿದ್ದು ಅಪರಾಧ; ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ತರಾಟೆ

ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಜನರನ್ನು ಹತ್ಯೆ ಮಾಡಿದ ನಂತರ ಭಾರತ ಆಪರೇಷನ್ ಸಿಂಧೂರದ ಮೂಲಕ ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ದಾಳಿಯ ವೇಳೆ ಐಎಎಫ್ ಎಷ್ಟು ವಿಮಾನಗಳನ್ನು ಯುದ್ಧದಲ್ಲಿ ಕಳೆದುಕೊಂಡಿತು? ಎಂದು ಪ್ರಶ್ನಿಸಿದ್ದಾರೆ.

ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರದ ವಿಷಯ ತಿಳಿಸಿದ್ದು ಅಪರಾಧ; ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ತರಾಟೆ
Rahul Gandhi
ಸುಷ್ಮಾ ಚಕ್ರೆ
|

Updated on: May 17, 2025 | 9:44 PM

Share

ನವದೆಹಲಿ, ಮೇ 17: ಪಹಲ್ಗಾಮ್ ಉಗ್ರರ ದಾಳಿಗೆ (Pahalgam Terror Attack) ಪ್ರತಿಯಾಗಿ ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡುವ ಆಪರೇಷನ್ ಸಿಂಧೂರದ ಬಗ್ಗೆ ಆರಂಭದಲ್ಲೇ ಭಾರತ ಸರ್ಕಾರ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದು ದೊಡ್ಡ ಅಪರಾಧ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. ಆಪರೇಷನ್ ಸಿಂಧೂರ ಮುಗಿಯುವವರೆಗೂ ಕಾದು, ನಂತರ ಪಾಕಿಸ್ತಾನಕ್ಕೆ ತಿಳಿಸಬಹುದಾಗಿತ್ತು. ಆರಂಭಿಕ ಹಂತದಲ್ಲೇ ತಿಳಿಸಿದ್ದರಿಂದ ನಮ್ಮ ಸೇನಾಪಡೆಯ ಸೈನಿಕರು, ಯುದ್ಧವಿಮಾನಗಳಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಹೆಚ್ಚಾಗಿತ್ತು ಎಂದಿದ್ದಾರೆ. ಆಪರೇಷನ್ ಸಿಂಧೂರ್ ಆರಂಭದಲ್ಲಿಯೇ ಭಾರತ ಪಾಕಿಸ್ತಾನಕ್ಕೆ ನೀಡಿದ ಮಾಹಿತಿಯ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಹೇಳಿಕೆಗಳನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ ಟೀಕಾ ಪ್ರಹಾರ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ದಾಳಿಯಲ್ಲಿ ಭಾರತೀಯ ವಾಯುಪಡೆ ಅನುಭವಿಸಿದ ನಷ್ಟದ ಬಗ್ಗೆಯೂ ಮಾಹಿತಿ ನೀಡಲಿ ಎಂದಿದ್ದಾರೆ.

“ನಮ್ಮ ದೇಶದ ದಾಳಿಯ ಆರಂಭದಲ್ಲಿ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದು ಅಪರಾಧ. ಭಾರತ ಸರ್ಕಾರ ಅದನ್ನು ಮಾಡಿದೆ ಎಂದು ವಿದೇಶಾಂಗ ಸಚಿವಾಲಯ ಸಾರ್ವಜನಿಕವಾಗಿ ಒಪ್ಪಿಕೊಂಡಿದೆ. ಈ ರೀತಿಯಾಗಿ ಆರಂಭಿಕ ಹಂತದಲ್ಲೇ ಪಾಕಿಸ್ತಾನಕ್ಕೆ ಮಾಹಿತಿ ನೀಡಲು ಯಾರು ಆದೇಶ ನೀಡಿದರು? ⁠ಇದರ ಪರಿಣಾಮವಾಗಿ ನಮ್ಮ ವಾಯುಪಡೆ ಎಷ್ಟು ವಿಮಾನಗಳನ್ನು ಕಳೆದುಕೊಂಡಿತು?” ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ. ಸಚಿವ ಜೈಶಂಕರ್ ಮಾಧ್ಯಮದೊಂದಿಗೆ ಮಾತನಾಡುವ 17 ಸೆಕೆಂಡುಗಳ ವೀಡಿಯೊ ಕ್ಲಿಪ್ ಅನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
ಬಲೂಚಿಸ್ತಾನಕ್ಕೆ ಕಾಶಿಶ್ ಚೌಧರಿ ಎಂಟ್ರಿ, ಗಡಗಡ ನಡುಗಿದ ಪಾಕ್
Image
ಬಿಇಎಲ್​​ನ ಆಕಾಶತೀರ ಈಗ ಆಪರೇಷನ್ ಸಿಂದೂರದ ಹೀರೋ
Image
ಉಗ್ರ ಮಸೂದ್​ ಅಜರ್​ಗೆ 14 ಕೋಟಿ ರೂ. ಪರಿಹಾರ ಕೊಡುತ್ತಾ ಪಾಕ್ ಸರ್ಕಾರ?
Image
ಪಾಕಿಸ್ತಾನದಲ್ಲಿ ರಹಸ್ಯವಾಗಿದ್ದ ಅಮೆರಿಕದ ಅಡ್ಡೆ ಈಗ ಬಟಾಬಯಲು?

ಇದನ್ನೂ ಓದಿ: ಭಾರತೀಯ ಸೇನೆಯಿಂದ ಪಾಕಿಸ್ತಾನದೊಳಗೆ 100 ಕಿಮೀ ದೂರದವರೆಗೆ ಉಗ್ರರ ಶಿಬಿರಗಳ ಧ್ವಂಸ; ಆಪರೇಷನ್ ಸಿಂಧೂರ್ ಬಗ್ಗೆ ಅಮಿತ್ ಶಾ

ಆಪರೇಷನ್ ಸಿಂಧೂರ್ ಮತ್ತು ನಂತರದ ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ನಡುವೆ ಭುಗಿಲೆದ್ದ ಉದ್ವಿಗ್ನತೆ ಬಗ್ಗೆ ರಾಹುಲ್ ಗಾಂಧಿ ಇಲ್ಲಿಯವರೆಗೆ ಮೌನವಾಗಿದ್ದರು. ಈ ವಿಷಯದ ಕುರಿತು ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಲು ನಿರ್ಧರಿಸಿದ್ದರು. ಆದರೆ, ಸುದ್ದಿಗೋಷ್ಠಿ ನಡೆಸಲಿಲ್ಲ.

ಆಪರೇಷನ್ ಸಿಂಧೂರ್:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಭಾರತ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿ 26 ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿತು. ಏಪ್ರಿಲ್ 22ರ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತ ನಡೆಸಿದ ದಾಳಿಯೇ ಆಪರೇಷನ್ ಸಿಂಧೂರ್. ಮೇ 7ರ ಮುಂಜಾನೆ ಭಾರತೀಯ ಸಶಸ್ತ್ರ ಪಡೆಗಳು ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿದವು. ಅದರ ನಂತರ ಪಾಕಿಸ್ತಾನವು ಮೇ 8, 9 ಮತ್ತು 10ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಆದರೆ, ಡ್ರೋನ್ ದಾಳಿಗಳನ್ನು ಭಾರತೀಯ ನೌಕಾಪಡೆ ವಿಫಲಗೊಳಿಸಿತು. 26 ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನ ಮಾಡಿದ ಪ್ರಯತ್ನಗಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಮೇ 10ರಂದು 8 ಪಾಕಿಸ್ತಾನಿ ವಾಯುನೆಲೆಗಳ ಮೇಲೆ ಕ್ಷಿಪಣಿಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?